ರಾಜ್ಯ

ಎಫ್.ಆರ್.ಎಸ್ ಜಾರಿಯಿಂದ ನಕಲಿ ಫಲಾನುಭವಿಗಳ ತಡೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು : ಫೇಸ್ ರೆಕಗ್ನೀಷನ್ ಸಿಸ್ಟಮ್ (ಎಫ್ ಆರ್ ಎಸ್) ಜಾರಿಯಿಂದ ನಕಲಿ ಫಲಾನುಭವಿಗಳ ತಡೆಗೆ ಸಹಕಾರಿಯಾಗಲಿದೆ ಎಂದು ಮಹಿಳಾ ಮತ್ತುಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.

ಸೋಮವಾರದಿಂದ ಆರಂಭಗೊಂಡ ಮಳೆಗಾಲದ ಅಧಿವೇಶನದ ವಿಧಾನ ಪರಿಷತ್ತಿನ ಕಲಾಪದ ಶೂನ್ಯ ವೇಳೆಯಲ್ಲಿ ಜೆಡಿಎಸ್ ಸದಸ್ಯರಾದ ಗೋವಿಂದರಾಜು ಕೇಳಿದ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ, ಗರ್ಭಿಣಿ, ಬಾಣಂತಿಯರು, ಕಿಶೋರಿಯರು ಹಾಗೂ 6 ವರ್ಷದೊಳಗಿನ ಮಕ್ಕಳಿಗೆ ಪೌಷ್ಟಿಕ ಆಹಾರ ಪೂರೈಕೆ ಸೇರಿದಂತೆ ಆರೋಗ್ಯದ ಮೇಲೆ ನಿಗಾ ವಹಿಸಲು ಫಲಾನುಭವಿಗಳಿಗೆ ಫೇಸ್ ಕ್ಯಾಪ್ಚರ್ ಮೂಲಕ ಸರಬರಾಜು ಮಾಡುವಲ್ಲಿ ಆಗುತ್ತಿರುವ ತೊಂದರೆಗಳ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯನ್ನು ಕರ್ನಾಟಕದಲ್ಲಿ ಕಟ್ಟುನಿಟ್ಟಾಗಿ ಜಾರಿ ಮಾಡಲಾಗಿದೆ. ಪಾರದರ್ಶಕತೆ ತರಲು ಇದು ಸಹಕಾರಿಯಾಗಲಿದೆ ಎಂದರು.

ಈ ತಂತ್ರಾಂಶ ಜಾರಿಗೊಳಿಸಿದ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯ, ಪ್ರಸ್ತುತ ಶೇಕಡ 94.2 ರಷ್ಟು ಫಲಾನುಭವಿಗಳನ್ನು ಎಫ್‌ ಆರ್‌ಎಸ್‌ ಮೂಲಕ ನೋಂದಣಿ ಮಾಡುವ ಮೂಲಕ ಇಡೀ ದೇಶಕ್ಕೆ 2ನೇ ಸ್ಥಾನದಲ್ಲಿದೆ ಎಂದು ಸಚಿವರು ಉತ್ತರಿಸಿದರು.

ರಾಜ್ಯದ ಅಂಗನವಾಡಿ ಕೇಂದ್ರಗಳಿಂದ ಗರ್ಭಿಣಿಯರಿಗೆ ಹಾಗೂ ಬಾಣಂತಿಯರಿಗೆ ಪೂರೈಕೆಯಾಗುತ್ತಿರುವ ಆಹಾರ ವ್ಯವಸ್ಥೆಗೆ ಮತ್ತಷ್ಟು ಪಾರದರ್ಶಕತೆ ತರಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದಿಂದ ಎಫ್‌ಆರ್‌ಎಸ್‌ ವ್ಯವಸ್ಥೆಯನ್ನು ಅನುಷ್ಠಾನಗೊಳಿಸಲಾಗಿದೆ ಎಂದು ಹೇಳಿದರು.

ಎಫ್‌ಆರ್‌ಎಸ್‌ ಜಾರಿಯಿಂದಾಗಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಕೆಲಸದ ಒತ್ತಡ ಜಾಸ್ತಿಯಾಗುತ್ತಿದೆ. ಹೀಗಾಗಿ ಅವರಿಗೆ ಚುನಾವಣೆ ಕೆಲಸಗಳಿಂದ ವಿನಾಯಿತಿ ನೀಡಲಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಉತ್ತರಿಸಿದರು.

ಅಂಗನವಾಡಿ ಕಾರ್ಯಕರ್ತೆಯರಿಗೆ ಕಳೆದ ವರ್ಷ ಹೊಸ ಮೊಬೈಲ್‌ ಕೊಡಲಾಗಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರದ ಜಂಟಿ ನಿರ್ದೇಶನದ ಮೇಲೆ ಎಫ್‌ಆರ್‌ಎಸ್‌ ಮೂಲಕ ಫಲಾನುಭವಿಗಳನ್ನು ಗುರುತಿಸಬೇಕು. ಎಫ್‌ಆರ್‌ಎಸ್‌ ಮೂಲಕ ಮೊಬೈಲ್‌ ಸಂಖ್ಯೆಯನ್ನು ಆಧಾರ್‌ ಸಂಖ್ಯೆಗೆ ಜೋಡಣೆ ಮಾಡದಿದ್ದರೆ, ಕೇಂದ್ರ ಸರ್ಕಾರದಿಂದ ಐಸಿಡಿಎಸ್ ಕಾರ್ಯಕ್ರಮಗಳಿಗೆ ಆಹಾರ ಪದಾರ್ಥಗಳು ಬರುವುದು ನಿಲ್ಲುತ್ತದೆ. ಹೀಗಾಗಿ ಫಲಾನುಭವಿಗಳಿಗೆ ಪಾರದರ್ಶಕವಾಗಿ ಆಹಾರ ತಲುಪಿಸುವ ಸಲುವಾಗಿ ಎಫ್‌ಆರ್‌ಎಸ್‌ ಜಾರಿ ಮಾಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಎಫ್‌ಆರ್‌ಎಸ್‌ ತಂತ್ರಜ್ಞಾನವನ್ನು ಮತ್ತಷ್ಟು ಸರಳಿಕರಿಸಲಾಗುವುದು ಎಂದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ರೈತರಿಗೆ ವಿಮಾ ಕಂಪೆನಿಗಳಿಂದಾಗುವ ವಂಚನೆ ತಪ್ಪಿಸಿ

ವಿಮಾ ಕಂಪೆನಿಗಳು ರೈತರ ಬೆಳೆನಷ್ಟ ಪರಿಹಾರದಲ್ಲಿ ವಂಚನೆ ಮಾಡುತ್ತಿವೆ. ಶೇ.೮೦ರಷ್ಟು ರೈತರು ವಿಮೆಯ ಕಂತು ಪಾವತಿಸಿದರೂ, ಬೆಳೆ ನಷ್ಟಕ್ಕೆ ಒಳಗಾದ…

36 mins ago

ಓದುಗರ ಪತ್ರ: ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಿ

ಬಿಸಿಲಿನ ತಾಪ ಹೆಚ್ಚಾಗಿದ್ದು, ರಾಜ್ಯರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೇ ಪ್ರಯಾಣಿಕರು ಬಾಯಾರಿಕೆಯಿಂದ ಬಳಲುವಂತಾಗಿದೆ.…

36 mins ago

ಓದುಗರ ಪತ್ರ: ಶಾಲೆಯಲ್ಲಿ ಪತ್ರಿಕೆ ಓದುವುದು ಕಡ್ಡಾಯ: ಸ್ವಾಗತಾರ್ಹ

ರಾಜ್ಯ ಸರ್ಕಾರವು ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಲ್ಲಿ ಪ್ರತಿದಿನ ಬೆಳಿಗ್ಗೆ ಪ್ರಾರ್ಥನೆಯ ನಂತರ ವಿದ್ಯಾರ್ಥಿಗಳು ಕನ್ನಡ ದಿನಪತ್ರಿಕೆಗಳನ್ನು…

37 mins ago

ಓದುಗರ ಪತ್ರ: ರೈಲುಗಳಿಗೆ ಹೆಚ್ಚುವರಿ ಬೋಗಿ ಅಳವಡಿಸಿ

ಬೆಂಗಳೂರಿನ ಯಶವಂತಪುರ, ಎಸ್‌ಎಂವಿಟಿ, ಕೆ.ಆರ್.ಪುರಂ, ರೈಲ್ವೆ ನಿಲ್ದಾಣಗಳಿಂದ ಚಾಮರಾಜನಗರ, ಮೈಸೂರು, ಶಿವಮೊಗ್ಗ, ಕಡೂರು, ತಾಳಗುಪ್ಪ , ಹಾಸನ , ಉಡುಪಿ,…

38 mins ago

ಮಂತ್ರಾಲಯಕ್ಕೆ ಹೋಗುವವರಿಗೆ ಗುಡ್‌ ನ್ಯೂಸ್: ಮೈಸೂರಿನಿಂದ ಹೊರಡಲಿದೆ ವಿಶೇಷ ರೈಲು

ಮೈಸೂರು: ಕಲಿಯುಗದ ಕಾಮಧೇನು ಶ್ರೀ ಗುರುರಾಘವೇಂದ್ರಸ್ವಾಮಿ ದರ್ಶನಕ್ಕೆ ತೆರಳುವ ಭಕ್ತರಿಗೆ ಗುಡ್‌ನ್ಯೂಸ್‌ ಸಿಕ್ಕಿದ್ದು, ಕಾಕಿನಾಡ-ಮೈಸೂರು ಬೈ ವೀಕ್ಲಿ ಎಕ್ಸ್‌ಪ್ರೆಸ್‌ಗೆ ಅನುಮೋದನೆ…

39 mins ago

ಸರ್ಕಾರಿ ಶಾಲೆ ಉಳಿಸಲು1295 ಕಿ.ಮೀ. ಪಾದಯಾತ್ರೆ

ಹೇಮಂತ್‌ಕುಮಾರ್ ರೈತ ಸಂಘ-ಕೆಆರ್‌ಎಸ್ ಪಕ್ಷ, ಎಸ್‌ಡಿಎಂಸಿ ಸಹಯೋಗದಲ್ಲಿ ಜಾಗೃತಿ ಮಂಡ್ಯ: ಸರ್ಕಾರಿ ಶಾಲೆ ಉಳಿಸಿ ಎಂಬ ಘೋಷವಾಕ್ಯದೊಂದಿಗೆ ಮಂಡ್ಯ ಜಿಲ್ಲಾ…

4 hours ago