ರಾಜ್ಯ

ಬಡವರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ತುಂಬಲು ಗ್ಯಾರೆಂಟಿ ಯೋಜನೆಗಳು ಜಾರಿ: ಸಿದ್ದರಾಮಯ್ಯ

ಶಿವಮೊಗ್ಗ: ಬಡವರು ಹಾಗೂ ಮಧ್ಯಮ ವರ್ಗದವರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬಿ ಮುಖ್ಯವಾಹಿನಿಗೆ ತರಬೇಕು ಎಂಬ ಉದ್ದೇಶದಿಂದ ನಮ್ಮ ಸರ್ಕಾರ ಪ್ರಣಾಳಿಕೆಯಲ್ಲಿ ಭರವಸೆ ನೀಡಿದಂತೆ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಇಂದು(ಶುಕ್ರವಾರ) ಶಿವಮೊಗ್ಗದ ಫ್ರೀಡಂ ಪಾರ್ಕ್​ನಲ್ಲಿ ಆರು ನಿರುದ್ಯೋಗಿ ಯುವಕರಿಗೆ ಚೆಕ್‌ಗಳನ್ನು ವಿತರಿಸುವ ಮೂಲಕ ಕಾಂಗ್ರೆಸ್ ಸರ್ಕಾರದ ಐದನೇ ಗ್ಯಾರಂಟಿ ಯೋಜನೆ ಯುವ ನಿಧಿಗೆ ಚಾಲನೆ ನೀಡಿದರು.

ಗ್ಯಾರೆಂಟಿ ಯೋಜನೆ ಜಾರಿಗೊಳಿಸಿದ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ ಚುನಾವಣೆಗಾಗಿ ಯುವನಿಧಿ ಯೋಜನೆಯನ್ನು ಜಾರಿಗೆ ತಂದಿಲ್ಲ. ನಿರುದ್ಯೋಗಿ ಯುವಕರಿಗೆ ನೆರವಾಗಬೇಕೆಂಬ ಉದ್ದೇಶದಿಂದಷ್ಟೇ ಈ ಯೋಜನೆ ಜಾರಿಗೊಳಿಸಲಾಗಿದೆ. ದೇಶದಲ್ಲಿ ದಿನಬಳಕೆ, ಪೆಟ್ರೋಲ್, ಡಿಸೇಲ್ ದರ ಏರಿಕೆಯಾಗಿದೆ. ಜನಸಮಾನ್ಯರಿಗೆ ಖರೀದಿಸುವ ಸಾಮರ್ಥ್ಯವಿಲ್ಲದಂತಾಗಿದೆ ಎಂದರು.

1.18 ಕೋಟಿ ಮಹಿಳಾ ಯಜಮಾನಿಗೆ ತಿಂಗಳಿಗೆ ರೂ.2,000, ಮಹಿಳೆಯರು ಶಕ್ತಿ ಯೋಜನೆಯಡಿ 130 ಕೋಟಿ ಉಚಿತ ಟಿಕೇಟ್ ಪಡೆದು ಪ್ರಯಾಣಿಸಿರುವುದು, 200 ಯೂನಿಟ್ ವರೆಗೆ ಉಚಿತ ವಿದ್ಯುತ್ ಯೋಜನೆಯನ್ನು 1.51 ಕೋಟಿ ಜನರಿಗೆ ನೀಡಲಾಗುತ್ತಿದೆ. ಇನ್ನು ಅನ್ನಭಾಗ್ಯ ಯೋಜನೆಯಡಿ ಪ್ರತಿಯೊಬ್ಬರಿಗೂ 170 ರೂ.ಗಳನ್ನು ನೀಡಿದ್ದೇವೆ. ಈ ಎಲ್ಲವನ್ನು ಯಾರು ಬೇಕಾದರೂ ಪರಿಶೀಲನೆ ನಡೆಸಲಿ ಎಂದು ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದರು.

ಗ್ಯಾರಂಟಿ ಯೋಜನೆಗಳಿಂದ ಒಂದು ಕುಟುಂಬಕ್ಕೆ ಮಾಸಿಕ 4 ರಿಂದ 5 ಸಾವಿರ ರೂ.ಗಳು ನೀಡಲಾಗುತ್ತಿದ್ದು, ವರ್ಷಕ್ಕೆ 48 ರಿಂದ 50 ಸಾವಿ ರೂ. ಸೇರುತ್ತಿದೆ. ಬೆಲೆ ಏರಿಕೆ, ನಿರುದ್ಯೋಗ ಹೆಚ್ಚಾಗಿದ್ದು, ಬಡವರಿಗೆ ಕೊಂಡುಕೊಳ್ಳುವ ಶಕ್ತಿಯನ್ನು ಈ ಯೋಜನೆಗಳು ನೀಡುತ್ತಿವೆ ಎಂದರು.

ಇಂದು ನಮ್ಮ ಸರ್ಕಾರ ಐದನೇ ಗ್ಯಾರಂಟಿಯಾದ ಯುವನಿಧಿಯನ್ನು ಜಾರಿಗೊಳಿಸಿದೆ. ಪದವಿ ಪಡೆದ ನಿರುದ್ಯೋಗಿಗಳಿಗೆ 3000 ರೂ. ಹಾಗೂ ಡಿಪ್ಲೋಮಾ ಮಾಡಿದ ನಿರುದ್ಯೋಗಿಗಳಿಗೆ 1,500 ರೂ. ಭತ್ಯೆಯನ್ನು 2 ವರ್ಷಗಳ ಕಾಲ ನೀಡುವ ಯೋಜನೆ ಇದಾಗಿದೆ. ಈ ಅವಧಿಯಲ್ಲಿ ಭತ್ಯೆಯ ಜೊತೆಗೆ ಉದ್ಯೋಗ ಲಭಿಸಲು ಬೇಕಾದಂತಹ ಕೌಶಲ್ಯವನ್ನು ಅಭಿವೃದ್ಧಿಗೊಳಿಸಲು ಕೌಶಲ್ಯ ತರಬೇತಿಯನ್ನು ನೀಡಲಾಗುವುದು ಎಂದು ಇದೇ ಸಂದರ್ಬದಲ್ಲಿ ಸಿಎಂ ತಿಳಿಸಿದರು.

ರಾಜ್ಯದ ಬೇರೆ ಬೆರೆ ಜಿಲ್ಲೆಗಳಿಂದ ಆಗಮಿಸಿದ ಲಕ್ಷಾಂತರ ಜನ ಯುವ ನಿಧಿ ಯೋಜನೆಗೆ ಚಾಲನೆ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

andolanait

Recent Posts

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

40 mins ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

11 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

11 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

11 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

11 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

12 hours ago