ರಾಜ್ಯ

ಹೈ-ಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಕೆ: ಫೆಬ್ರವರಿ ಅಂತಿಮ ಗಡವು

ಬೆಂಗಳೂರು : 2019ರ ಏಪ್ರಿಲ್ 1ಕ್ಕಿಂತ ಮೊದಲು ನೊಂದಾಯಿಸಲಾದ ಎಲ್ಲಾ ವಾಹನಗಳು 2024 ಫೆಬ್ರವರಿ 17ರ ಒಳಗಾಗಿ ಹೈ-ಸೆಕ್ಯೂರಿಟಿ ನಂಬರ್ ಪ್ಲೇಟ್ಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಲು ಸರ್ಕಾರ ಸೂಚನೆ ನೀಡಿದ್ದು, ಫೆಬ್ರವರಿ 17 ಕೊನೆಯ ದಿನಾಂಕವಾಗಿದೆ.

2019ರ ಏಪ್ರಿಲ್ ಕ್ಕಿಂತ ಮೊದಲು ನೋಂದಣಿ ಮಾಡಿಸಿಕೊಂಡ ದ್ವಿಚಕ್ರ ವಾಹನ, ತ್ರಿಚಕ್ರ ವಾಹನ, ಲಘು ಮೋಟಾರು ವಾಹನ, ಮಧ್ಯಮ ಮತ್ತು ಬಾರಿ ವಾಣಿಜ್ಯ ವಾಹನಗಳು, ಟ್ರ್ಯಾಕ್ಟರ್, ಪ್ರಯಾಣಿಕರ ಕಾರು ಸೇರಿ ಎಲ್ಲ ಹಳೆಯ ವಾಹನಗಳಿಗೆ ಈ ನಿಯಮ ಅನ್ವಯವಾಗಲಿದೆ.

ವಾಹನ ಮಾಲಿಕರು ಆನ್ಲೈನ್ ವೆಬ್ಸೈಟ್ ಗೆ ಭೇಟಿ ನೀಡಿ ನೊಂದಾಯಿಸಿ ಆನ್ ಲೈನ್ ಮೂಲಕವೇ ಹೆಚ್.ಎಸ್.ಆರ್.ಪಿ ಶುಲ್ಕವನ್ನು ಪಾವತಿಸಿ ನಂತರ ವಾಹನ ಡೀಲರ್ ಬಳಿ ನಂಬರ್ ಪ್ಲೇಟ್ಗಳನ್ನು ಅಳವಡಿಸಿಕೊಳ್ಳಬೇಕು.

ಹೆಚ್.ಎಸ್.ಆರ್.ಪಿ ಎಂಬುದು ವಾಹನಗಳ ನೋಂದಣಿ ನಂಬರ್ ಪ್ಲೇಟ್ ಆಗಿದ್ದು, ಅಲ್ಯೂಮಿನಿಯಂ ಲೋಹದಲ್ಲಿ ತಯಾರಿಸಲಾಗಿದ್ದು, ಇದರಲ್ಲಿ ಲೇಸóರ್ ಕೋಡ್ ಇದ್ದು ಸ್ಕ್ಯಾನ್ ಮಾಡಿದಾಗ ವಾಹನದ ಸಂಪೂರ್ಣ ಮಾಹಿತಿ ಹಾಗೂ ಅಶೋಕಚಕ್ರದ ಚಿತ್ರವನ್ನು ಒಳಗೊಂಡಿದೆ. ನಕಲಿ ನಂಬರ್ ಪ್ಲೇಟ್ ಅಳವಡಿಸುವುದನ್ನು ತಪ್ಪಿಸಲು ಈ ಕ್ರಮ ತೆಗೆದುಕೊಳ್ಳಲಾಗುತ್ತಿದೆ.

andolanait

Recent Posts

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

2 mins ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

12 mins ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

31 mins ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

54 mins ago

ನಟ ದರ್ಶನ್‌ಗೆ ಮತ್ತೊಂದು ಸಂಕಷ್ಟ: ಹಳೆ ಪ್ರಕರಣಕ್ಕೆ ಹೊಸ ಎನ್‌ಸಿಆರ್‌

ಬೆಂಗಳೂರು: ನಟ ದರ್ಶನ್‌ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಮಧ್ಯೆ ಹಳೆ…

2 hours ago

ಓದುಗರ ಪತ್ರ: ಮಹಿಳಾ ಅಧಿಕಾರಿಗಳಿಗೆ ಅಭಿನಂದನೆಗಳು

ಚಾಮರಾಜನಗರದಲ್ಲಿ ಅಕ್ಟೋಬರ್ ೭ರಿಂದ ಅ. ೯ರವರೆಗೆ ಆಯೋಜಿಸಿದ್ದ ‘ಚೆಲುವ ಚಾಮರಾಜನಗರ ದಸರಾ’ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಆಯೋಜಿಸಿದ್ದರಿಂದ…

3 hours ago