ರಾಜ್ಯ

ಹೈ-ಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಕೆ: ಫೆಬ್ರವರಿ ಅಂತಿಮ ಗಡವು

ಬೆಂಗಳೂರು : 2019ರ ಏಪ್ರಿಲ್ 1ಕ್ಕಿಂತ ಮೊದಲು ನೊಂದಾಯಿಸಲಾದ ಎಲ್ಲಾ ವಾಹನಗಳು 2024 ಫೆಬ್ರವರಿ 17ರ ಒಳಗಾಗಿ ಹೈ-ಸೆಕ್ಯೂರಿಟಿ ನಂಬರ್ ಪ್ಲೇಟ್ಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಲು ಸರ್ಕಾರ ಸೂಚನೆ ನೀಡಿದ್ದು, ಫೆಬ್ರವರಿ 17 ಕೊನೆಯ ದಿನಾಂಕವಾಗಿದೆ.

2019ರ ಏಪ್ರಿಲ್ ಕ್ಕಿಂತ ಮೊದಲು ನೋಂದಣಿ ಮಾಡಿಸಿಕೊಂಡ ದ್ವಿಚಕ್ರ ವಾಹನ, ತ್ರಿಚಕ್ರ ವಾಹನ, ಲಘು ಮೋಟಾರು ವಾಹನ, ಮಧ್ಯಮ ಮತ್ತು ಬಾರಿ ವಾಣಿಜ್ಯ ವಾಹನಗಳು, ಟ್ರ್ಯಾಕ್ಟರ್, ಪ್ರಯಾಣಿಕರ ಕಾರು ಸೇರಿ ಎಲ್ಲ ಹಳೆಯ ವಾಹನಗಳಿಗೆ ಈ ನಿಯಮ ಅನ್ವಯವಾಗಲಿದೆ.

ವಾಹನ ಮಾಲಿಕರು ಆನ್ಲೈನ್ ವೆಬ್ಸೈಟ್ ಗೆ ಭೇಟಿ ನೀಡಿ ನೊಂದಾಯಿಸಿ ಆನ್ ಲೈನ್ ಮೂಲಕವೇ ಹೆಚ್.ಎಸ್.ಆರ್.ಪಿ ಶುಲ್ಕವನ್ನು ಪಾವತಿಸಿ ನಂತರ ವಾಹನ ಡೀಲರ್ ಬಳಿ ನಂಬರ್ ಪ್ಲೇಟ್ಗಳನ್ನು ಅಳವಡಿಸಿಕೊಳ್ಳಬೇಕು.

ಹೆಚ್.ಎಸ್.ಆರ್.ಪಿ ಎಂಬುದು ವಾಹನಗಳ ನೋಂದಣಿ ನಂಬರ್ ಪ್ಲೇಟ್ ಆಗಿದ್ದು, ಅಲ್ಯೂಮಿನಿಯಂ ಲೋಹದಲ್ಲಿ ತಯಾರಿಸಲಾಗಿದ್ದು, ಇದರಲ್ಲಿ ಲೇಸóರ್ ಕೋಡ್ ಇದ್ದು ಸ್ಕ್ಯಾನ್ ಮಾಡಿದಾಗ ವಾಹನದ ಸಂಪೂರ್ಣ ಮಾಹಿತಿ ಹಾಗೂ ಅಶೋಕಚಕ್ರದ ಚಿತ್ರವನ್ನು ಒಳಗೊಂಡಿದೆ. ನಕಲಿ ನಂಬರ್ ಪ್ಲೇಟ್ ಅಳವಡಿಸುವುದನ್ನು ತಪ್ಪಿಸಲು ಈ ಕ್ರಮ ತೆಗೆದುಕೊಳ್ಳಲಾಗುತ್ತಿದೆ.

andolanait

Recent Posts

ಆಂಧ್ರದಲ್ಲಿ ಮತ್ತೆ ಕೋವಿಡ್‌ ಆತಂಕ: ಇಬ್ಬರು ಬಲಿ

ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್‌ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್‌ಆರ್‌ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್‌…

10 hours ago

ಪಂಚಭೂತಗಳಲ್ಲಿ ಲೀನರಾದ ಗಾನಕೋಗಿಲೆ ಎಸ್.ಜಾನಕಿ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…

10 hours ago

ಹೇಮಾವತಿ ನದಿ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಇಬ್ಬರ ಮೃತದೇಹ ಪತ್ತೆ

ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…

12 hours ago

ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ: ಹಾರ್ಮುಜ್‌ ಜಲಸಂಧಿ ಮುಚ್ಚಿದ ಇರಾನ್‌

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್‌ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…

12 hours ago

ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ: ತೀವ್ರಗೊಂಡ ಬರದ ಛಾಯೆ

ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…

12 hours ago

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

13 hours ago