ಬೆಂಗಳೂರು : ಪ್ರಯಾಣಿಕರ ಸುರಕ್ಷತೆ ಹಿನ್ನೆಲೆಯಲ್ಲಿ ಎಲ್ಲಾ ಸ್ಲೀಪರ್ ಕೋಚ್ ಮತ್ತು ಅಖಿಲ ಭಾರತ ಪ್ರವಾಸಿ ಬಸ್ಗಳಲ್ಲಿ ಪ್ರಯಾಣಿಕರ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಜಾರಿಗೆ ತರಲು ಬಸ್ ಮಾಲೀಕರಿಗೆ ಸಾರಿಗೆ ಇಲಾಖೆಯು ಫೆ.28ರವರೆಗೆ ಗಡುವು ನೀಡಿದೆ.
ಅಗ್ನಿ ದುರಂತಗಳನ್ನು ತಡೆಗಟ್ಟಲು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಹಾಗೂ ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ರೋಡ್ ಟ್ರಾನ್ಸ್ಪೋರ್ಟ್ ಸಂಸ್ಥೆಗಳ ಸೂಚನೆ ಹಿನ್ನೆಲೆಯಲ್ಲಿ ರಾಜ್ಯ ಸಾರಿಗೆ ಇಲಾಖೆ ಖಾಸಗಿ ಬಸ್ ಮಾಲೀಕರಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ.
ಚಿತ್ರದುರ್ಗ ಖಾಸಗಿ ಬಸ್ ಅಗ್ನಿ ದುರಂತದ ನಂತರ ಸುರಕ್ಷತಾ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಕಳೆದ ತಿಂಗಳ 21 ರಂದು ಖಾಸಗಿ ಬಸ್ ಮಾಲೀಕರು, ಕೋಚ್ ನಿರ್ಮಾಣ ಕಂಪೆನಿಗಳ ಪ್ರತಿನಿಧಿಗಳು ಹಾಗೂ ಸಾರಿಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದರು. ಬಸ್ ಬಾಡಿ ನಿರ್ಮಾಣ ವಿಧಾನ, ತುರ್ತು ನಿರ್ಗಮನ ದ್ವಾರಗಳ ಸಂಖ್ಯೆ, ಅಗ್ನಿಶಾಮಕ ಸಾಧನಗಳ ಅಳವಡಿಕೆ, ಎಮರ್ಜೆನ್ಸಿ ಎಕ್ಸಿಟ್ ಬಳಿ ಸೂಕ್ತ ಆಸನ ವ್ಯವಸ್ಥೆ ಸೇರಿದಂತೆ 11 ನಿಯಮಗಳನ್ನು ಕಡ್ಡಾಯಗೊಳಿಸಲಾಗಿತ್ತು.
ಇನ್ನು ಎಸಿ ಬಸ್ಗಳಲ್ಲಿ ಬೆಂಕಿ ಕಾಣಿಸಿಕೊಂಡಲ್ಲಿ ನಂದಿಸುವ ವಿಧಾನಗಳ ಬಗ್ಗೆ ಸೂಚನೆ ನೀಡಬೇಕು, ಗ್ಲಾಸ್ ಒಡೆದು ಹೊರಬರಲು ಹ್ಯಾಮರ್ಗಳನ್ನು ಇರಿಸಬೇಕು, ಪ್ರಯಾಣಿಕರಿಗೆ ಎಚ್ಚರಿಕೆ ಅಲಾರಂ ವ್ಯವಸ್ಥೆ ಮಾಡಬೇಕು ಹಾಗೂ ಡೋರ್ ಜಂಪ್ ಮಾಡಲು ಮೆಟ್ಟಿಲುಗಳ ಸೌಲಭ್ಯ ಒದಗಿಸಬೇಕು ಎಂದು ಸಚಿವರು ಖಾಸಗಿ ಬಸ್ ಮಾಲೀಕರಿಗೆ ಮತ್ತು ಬಸ್ ಬಾಡಿ ಬಿಲ್ಡಿಂಗ್ ಮಾಡುವ ಕಂಪೆನಿಗಳಿಗೆ ಎಚ್ಚರಿಕೆ ನೀಡಿದ್ದರು.
ಈ ನಿಯಮಗಳನ್ನು ಪಾಲಿಸದ ಬಸ್ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎನ್ನಲಾಗಿದ್ದು, ಫಿಟ್ನೆಸ್ ರದ್ದುಪಡಿಸುವುದು, ಬಸ್ ಸಂಚಾರಕ್ಕೆ ನಿರ್ಬಂಧ ಹಾಗೂ ದಂಡ ವಿಧಿಸುವ ಕ್ರಮಗಳೂ ಜಾರಿಯಾಗುವ ಸಾಧ್ಯತೆ ಇದೆ. ಕೆಲ ದಿನಗಳ ಹಿಂದೆ ಬೆಂಗಳೂರಿನಿಂದ ರಾತ್ರಿ 8.30ಕ್ಕೆ ಹೊರಟಿದ್ದ ಕೆಎ 01-ಎಇ 5217 ನಂಬರಿನ ಸೀ ಬರ್ಡ್ ಬಸ್, ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದಾಗ ವಿರುದ್ಧ ದಿಕ್ಕಿನಿಂದ ಬಂದ ಲಾರಿಯೊಂದು ವೇಗವಾಗಿ ಬಂದು ಬಸ್ನ ಡೀಸೆಲ್ ಟ್ಯಾಂಕ್ಗೆ ಗುದ್ದಿದೆ. ಡಿಕ್ಕಿಯ ರಭಸಕ್ಕೆ ಮೊದಲು ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಬಸ್ಗೂ ಆವರಿಸಿತ್ತು. ಚಿತ್ರದುರ್ಗದ ಅಗ್ನಿ ದುರಂತದ ಬಳಿಕ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ರಾಜ್ಯ ಸರ್ಕಾರಕ್ಕೆ ಪತ್ರ ಬರೆದು, ಖಾಸಗಿ ಬಸ್ಗಳ ಸುರಕ್ಷತಾ ಮಾನದಂಡಗಳನ್ನು ಮರುಪರಿಶೀಲಿಸುವಂತೆ ಸೂಚಿಸಿತ್ತು.
ಅನುಸರಿಸಬೇಕಾದ ಕಡ್ಡಾಯ ನಿಯಮಗಳು
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…