ರಾಜ್ಯ

ಬಸ್‌ಗಳಲ್ಲಿ ಸುರಕ್ಷತಾ ಕ್ರಮ ಅಳವಡಿಕೆ : ಫೆ.28 ಗಡುವು

ಬೆಂಗಳೂರು : ಪ್ರಯಾಣಿಕರ ಸುರಕ್ಷತೆ ಹಿನ್ನೆಲೆಯಲ್ಲಿ ಎಲ್ಲಾ ಸ್ಲೀಪರ್ ಕೋಚ್ ಮತ್ತು ಅಖಿಲ ಭಾರತ ಪ್ರವಾಸಿ ಬಸ್‌ಗಳಲ್ಲಿ ಪ್ರಯಾಣಿಕರ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಜಾರಿಗೆ ತರಲು ಬಸ್ ಮಾಲೀಕರಿಗೆ ಸಾರಿಗೆ ಇಲಾಖೆಯು ಫೆ.28ರವರೆಗೆ ಗಡುವು ನೀಡಿದೆ.

ಅಗ್ನಿ ದುರಂತಗಳನ್ನು ತಡೆಗಟ್ಟಲು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಹಾಗೂ ಸೆಂಟ್ರಲ್ ಇನ್‌ಸ್ಟಿಟ್ಯೂಟ್ ಆಫ್ ರೋಡ್ ಟ್ರಾನ್ಸ್‌ಪೋರ್ಟ್ ಸಂಸ್ಥೆಗಳ ಸೂಚನೆ ಹಿನ್ನೆಲೆಯಲ್ಲಿ ರಾಜ್ಯ ಸಾರಿಗೆ ಇಲಾಖೆ ಖಾಸಗಿ ಬಸ್ ಮಾಲೀಕರಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ.

ಚಿತ್ರದುರ್ಗ ಖಾಸಗಿ ಬಸ್ ಅಗ್ನಿ ದುರಂತದ ನಂತರ ಸುರಕ್ಷತಾ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಕಳೆದ ತಿಂಗಳ 21 ರಂದು ಖಾಸಗಿ ಬಸ್ ಮಾಲೀಕರು, ಕೋಚ್ ನಿರ್ಮಾಣ ಕಂಪೆನಿಗಳ ಪ್ರತಿನಿಧಿಗಳು ಹಾಗೂ ಸಾರಿಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದರು. ಬಸ್ ಬಾಡಿ ನಿರ್ಮಾಣ ವಿಧಾನ, ತುರ್ತು ನಿರ್ಗಮನ ದ್ವಾರಗಳ ಸಂಖ್ಯೆ, ಅಗ್ನಿಶಾಮಕ ಸಾಧನಗಳ ಅಳವಡಿಕೆ, ಎಮರ್ಜೆನ್ಸಿ ಎಕ್ಸಿಟ್ ಬಳಿ ಸೂಕ್ತ ಆಸನ ವ್ಯವಸ್ಥೆ ಸೇರಿದಂತೆ 11 ನಿಯಮಗಳನ್ನು ಕಡ್ಡಾಯಗೊಳಿಸಲಾಗಿತ್ತು.

ಇನ್ನು ಎಸಿ ಬಸ್‌ಗಳಲ್ಲಿ ಬೆಂಕಿ ಕಾಣಿಸಿಕೊಂಡಲ್ಲಿ ನಂದಿಸುವ ವಿಧಾನಗಳ ಬಗ್ಗೆ ಸೂಚನೆ ನೀಡಬೇಕು, ಗ್ಲಾಸ್ ಒಡೆದು ಹೊರಬರಲು ಹ್ಯಾಮರ‍್ಗಳನ್ನು ಇರಿಸಬೇಕು, ಪ್ರಯಾಣಿಕರಿಗೆ ಎಚ್ಚರಿಕೆ ಅಲಾರಂ ವ್ಯವಸ್ಥೆ ಮಾಡಬೇಕು ಹಾಗೂ ಡೋರ್ ಜಂಪ್ ಮಾಡಲು ಮೆಟ್ಟಿಲುಗಳ ಸೌಲಭ್ಯ ಒದಗಿಸಬೇಕು ಎಂದು ಸಚಿವರು ಖಾಸಗಿ ಬಸ್ ಮಾಲೀಕರಿಗೆ ಮತ್ತು ಬಸ್ ಬಾಡಿ ಬಿಲ್ಡಿಂಗ್ ಮಾಡುವ ಕಂಪೆನಿಗಳಿಗೆ ಎಚ್ಚರಿಕೆ ನೀಡಿದ್ದರು.

ಈ ನಿಯಮಗಳನ್ನು ಪಾಲಿಸದ ಬಸ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎನ್ನಲಾಗಿದ್ದು, ಫಿಟ್‌ನೆಸ್ ರದ್ದುಪಡಿಸುವುದು, ಬಸ್ ಸಂಚಾರಕ್ಕೆ ನಿರ್ಬಂಧ ಹಾಗೂ ದಂಡ ವಿಧಿಸುವ ಕ್ರಮಗಳೂ ಜಾರಿಯಾಗುವ ಸಾಧ್ಯತೆ ಇದೆ. ಕೆಲ ದಿನಗಳ ಹಿಂದೆ ಬೆಂಗಳೂರಿನಿಂದ ರಾತ್ರಿ 8.30ಕ್ಕೆ ಹೊರಟಿದ್ದ ಕೆಎ 01-ಎಇ 5217 ನಂಬರಿನ ಸೀ ಬರ್ಡ್ ಬಸ್, ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದಾಗ ವಿರುದ್ಧ ದಿಕ್ಕಿನಿಂದ ಬಂದ ಲಾರಿಯೊಂದು ವೇಗವಾಗಿ ಬಂದು ಬಸ್‌ನ ಡೀಸೆಲ್ ಟ್ಯಾಂಕ್‌ಗೆ ಗುದ್ದಿದೆ. ಡಿಕ್ಕಿಯ ರಭಸಕ್ಕೆ ಮೊದಲು ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಬಸ್‌ಗೂ ಆವರಿಸಿತ್ತು. ಚಿತ್ರದುರ್ಗದ ಅಗ್ನಿ ದುರಂತದ ಬಳಿಕ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ರಾಜ್ಯ ಸರ್ಕಾರಕ್ಕೆ ಪತ್ರ ಬರೆದು, ಖಾಸಗಿ ಬಸ್‌ಗಳ ಸುರಕ್ಷತಾ ಮಾನದಂಡಗಳನ್ನು ಮರುಪರಿಶೀಲಿಸುವಂತೆ ಸೂಚಿಸಿತ್ತು.

ಅನುಸರಿಸಬೇಕಾದ ಕಡ್ಡಾಯ ನಿಯಮಗಳು

  • ಸ್ಲೀಪರ್ ಬಸ್‌ಗಳಲ್ಲಿ ಚಾಲಕರ ಹಿಂಬದಿ ಡೋರ್ ತೆಗೆಯಬೇಕು
  • ಸ್ಲೀಪರ್ ಬರ್ತ್‌ಗಳಲ್ಲಿ ಸ್ಲೈಡರ್ ತೆಗೆಯಬೇಕು
  • ಫೈರ್ ಡಿಟೆಕ್ಷನ್ ಅನ್ನು ತಿಂಗಳೊಳಗೆ ಅಳವಡಿಸಬೇಕು
  • 10 ಕೆಜಿ ತೂಕದ ಅಗ್ನಿ ಶಾಮಕ ಸಾಧನ ಅಳವಡಿಕೆ ಕಡ್ಡಾಯ
  • ಚಾಸಿಸ್ ಅನಧಿಕೃತ ವಿಸ್ತರಣೆಗೆ ಬ್ರೇಕ್
  • ಅನುಮೋದಿತ ಟೆಸ್ಟಿಂಗ್ ಏಜೆನ್ಸಿಯಿಂದ ಪ್ರಮಾಣ ಪತ್ರ ಕಡ್ಡಾಯ
  • ಪ್ರಯಾಣಿಕರ ಸೇಫ್ಟಿ ಮಾನದಂಡ ಇದ್ದರೆ ಮಾತ್ರ ಎಫ್‌ಸಿ ಮಾಡಬೇಕು
  • ಬಸ್ ಕವಚ ನಿರ್ಮಾಣ ಸಂಸ್ಥೆ ಸಿಂಧುತ್ವ ಪರಿಶೀಲಿಸಿದ ನಂತರವೇ ನೋಂದಣಿ ಮಾಡಬೇಕು
  • ಪ್ರತಿ ಬಸ್ಸಿನಲ್ಲೂ ಚಾವಣಿಯ ಹ್ಯಾಚ್‌ಗಳೊಂದಿಗೆ ರೇಖಾಚಿತ್ರವನ್ನು ಪ್ರಯಾಣಿಕರಿಗೆ ಓದಲು ಅನುಕೂಲವಾಗುವಂತೆ ಪ್ರದರ್ಶಿಸಬೇಕು
  • 12 ಮೀಟರ್ ಉದ್ದದ ಬಸ್ಸಿನಲ್ಲಿ ಕನಿಷ್ಠ 4 ತುರ್ತು ನಿರ್ಗಮನ ದ್ವಾರವಿರಬೇಕು, 12 ಮೀಟರ್‌ಗಿಂತ ಹೆಚ್ಚಿದ್ದರೆ ಕನಿಷ್ಠ 5 ಡೋರ್‌ಗಳಿರಬೇಕು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

4 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

4 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

4 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

5 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

17 hours ago