ತುಮಕೂರು: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಯಾರಿಗೂ ಮೋಸ ಮಾಡಲ್ಲ. ಕಾಂಗ್ರೆಸ್ ಪಕ್ಷದ ಮೇಲೆ ಇಟ್ಟಿರುವ ನಂಬಿಕೆಯನ್ನು ಎಂದಿಗೂ ಹುಸಿಗೊಳಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭರವಸೆ ನೀಡಿದರು.
ಈ ಬಗ್ಗೆ ತುಮಕೂರಿನಲ್ಲಿ ಮಾತನಾಡಿದ ಅವರು, ೬ನೇ ವೇತನ ಆಯೋಗ ಜಾರಿಗೆ ತಂದಿದ್ದು ಸಹ ನಮ್ಮ ಸರ್ಕಾರ. ೭ನೇ ವೇತನ ಅಯೋಗ ಶಿಫಾರಸು ಜಾರಿಗೆ ೧೮ ಸಾವಿರ ಕೋಟಿ ಹಾಗೂ ಓಪಿಎಸ್ ಜಾರಿಗೆ ನೂರಾರು ಕೋಟಿ ರೂ ಬೇಕು. ಒಂದೇ ದಿನದಲ್ಲಿ ಎಲ್ಲವನ್ನೂ ಜಾರಿಗೆ ತರಲು ಸಾಧ್ಯವಿಲ್ಲ. ಅದಕ್ಕಾಗಿ ತಾಳ್ಮೆಯಿಂದ ಇರಿ ಎಂದು ಹೇಳಿದರು.
ಮಹಾರಾಷ್ಟ್ರ ಮತ್ತು ಕರ್ನಾಟಕ ರಾಜ್ಯಗಳು ಅತಿ ಹೆಚ್ಚು ತೆರಿಗೆ ಕಟ್ಟುತ್ತಿವೆ. ಇದಕ್ಕೆ ಅನುಗುಣವಾಗಿ ನಮಗೆ ವಾಪಸ್ ಬರುತ್ತಿಲ್ಲ ಎಂಬ ವಾದವನ್ನು ಕೇಂದ್ರ ಸರ್ಕಾರದ ಮುಂದಿಟ್ಟಿದ್ದೇವೆ. ನಮ್ಮಲ್ಲಾದ ಬದಲಾವಣೆಯಿಂದ ಕರ್ನಾಟಕ ಶಕ್ತಿಯುತವಾಗಿದ್ದು, ಇತರೆ ರಾಜ್ಯಗಳಿಗೂ ಶಕ್ತಿ ನೀಡಲು ಈ ಹಣ ಬಳಕೆ ಮಾಡುತ್ತಿದ್ದೇವೆ ಎಂದು ಕೇಂದ್ರ ಸರ್ಕಾರ ಹೇಳಿದೆ.
ಅನುದಾನಿತ ಶಾಲೆಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ನೇಮಕ ಸಂಬಂಧಿಸಿದಂತೆ ಸರ್ಕಾರ ಶೀಘ್ರವೇ ಸೂಕ್ತ ನಿರ್ಧಾರಕ್ಕೆ ಬರಲಿದೆ. ನಾನು ಕೂಡ ಶಿಕ್ಷಣ ಸಚಿವರು ಮತ್ತು ಸಿಎಂ ಸಿದ್ದರಾಮಯ್ಯ ಗಮನಕ್ಕೆ ತಂದಿದ್ದೇನೆ ಅತಿಥಿ ಶಿಕ್ಷಕರಿಗೆ ನೀಡುತ್ತಿರುವ ಗೌರವಧನ ಸಾಕಾಗುವುದಿಲ್ಲ. ಪ್ರಣಾಳಿಕೆಯಲ್ಲಿ ತಿಳಿಸಿದಂತೆ ಓಪಿಎಸ್ ಜಾರಿಗೆ ಕ್ರಮ ವಹಿಸುತ್ತೇವೆ ಎಂದು ಭರವಸೆ ನೀಡಿದರು.
ಮೈಸೂರು : ಸಾಂಸ್ಕ ತಿಕ ನಗರಿಯ ಜನತೆಯ ಅನುಕೂಲಕ್ಕಾಗಿ ಮೈಸೂರಿನಿಂದ ಮುತ್ತಿನ ನಗರಿ ಹೈದರಾಬಾದ್ಗೆ ಮತ್ತೊಂದು ವಿಮಾನ ಸಂಚಾರ ಅತಿ…
ನವದೆಹಲಿ : ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ ನೀಡುವ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆ (Women’s Reservation Bill) ಭಾರೀ…
ಟೆಹ್ರಾರ್ : ಇರಾನ್ ಹೊರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಸಂಚಾರಕ್ಕೆ ಪೂರ್ಣ ಮುಕ್ತಿ ನೀಡಿದೆ ಎಂದು ಮಹತ್ವದ ಘೋಷಣೆ ಮಾಡಿದೆ.…
ಹನೂರು : ಕುಡಿಯುವ ನೀರು, ಇ-ಸ್ವತ್ತು, ಪೋಡಿ ಹಾಗೂ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸೇರಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ…
ಮೈಸೂರು : ನಗರದಲ್ಲಿರುವ ರೈಲ್ವೇ ಗೂಡ್ಸ್ ಶೆಡನ್ನು ಪಾಂಡವಪುರಕ್ಕೆ ಸ್ಥಳಾಂತರಿಸಲು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ವಿ.ಸೋಮಣ್ಣ ಅವರು ಹುನ್ನಾರ…
ಕಾನೂನು ಸಚಿವಾಲಯದಿಂದ ಅಧಿಸೂಚನೆ ಪ್ರಕಟ ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಸ್ಥಾನ ಒದಗಿಸುವ ಮಹಿಳಾ ಮೀಸಲಾತಿ…