ತುಮಕೂರು: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಯಾರಿಗೂ ಮೋಸ ಮಾಡಲ್ಲ. ಕಾಂಗ್ರೆಸ್ ಪಕ್ಷದ ಮೇಲೆ ಇಟ್ಟಿರುವ ನಂಬಿಕೆಯನ್ನು ಎಂದಿಗೂ ಹುಸಿಗೊಳಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭರವಸೆ ನೀಡಿದರು.
ಈ ಬಗ್ಗೆ ತುಮಕೂರಿನಲ್ಲಿ ಮಾತನಾಡಿದ ಅವರು, ೬ನೇ ವೇತನ ಆಯೋಗ ಜಾರಿಗೆ ತಂದಿದ್ದು ಸಹ ನಮ್ಮ ಸರ್ಕಾರ. ೭ನೇ ವೇತನ ಅಯೋಗ ಶಿಫಾರಸು ಜಾರಿಗೆ ೧೮ ಸಾವಿರ ಕೋಟಿ ಹಾಗೂ ಓಪಿಎಸ್ ಜಾರಿಗೆ ನೂರಾರು ಕೋಟಿ ರೂ ಬೇಕು. ಒಂದೇ ದಿನದಲ್ಲಿ ಎಲ್ಲವನ್ನೂ ಜಾರಿಗೆ ತರಲು ಸಾಧ್ಯವಿಲ್ಲ. ಅದಕ್ಕಾಗಿ ತಾಳ್ಮೆಯಿಂದ ಇರಿ ಎಂದು ಹೇಳಿದರು.
ಮಹಾರಾಷ್ಟ್ರ ಮತ್ತು ಕರ್ನಾಟಕ ರಾಜ್ಯಗಳು ಅತಿ ಹೆಚ್ಚು ತೆರಿಗೆ ಕಟ್ಟುತ್ತಿವೆ. ಇದಕ್ಕೆ ಅನುಗುಣವಾಗಿ ನಮಗೆ ವಾಪಸ್ ಬರುತ್ತಿಲ್ಲ ಎಂಬ ವಾದವನ್ನು ಕೇಂದ್ರ ಸರ್ಕಾರದ ಮುಂದಿಟ್ಟಿದ್ದೇವೆ. ನಮ್ಮಲ್ಲಾದ ಬದಲಾವಣೆಯಿಂದ ಕರ್ನಾಟಕ ಶಕ್ತಿಯುತವಾಗಿದ್ದು, ಇತರೆ ರಾಜ್ಯಗಳಿಗೂ ಶಕ್ತಿ ನೀಡಲು ಈ ಹಣ ಬಳಕೆ ಮಾಡುತ್ತಿದ್ದೇವೆ ಎಂದು ಕೇಂದ್ರ ಸರ್ಕಾರ ಹೇಳಿದೆ.
ಅನುದಾನಿತ ಶಾಲೆಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ನೇಮಕ ಸಂಬಂಧಿಸಿದಂತೆ ಸರ್ಕಾರ ಶೀಘ್ರವೇ ಸೂಕ್ತ ನಿರ್ಧಾರಕ್ಕೆ ಬರಲಿದೆ. ನಾನು ಕೂಡ ಶಿಕ್ಷಣ ಸಚಿವರು ಮತ್ತು ಸಿಎಂ ಸಿದ್ದರಾಮಯ್ಯ ಗಮನಕ್ಕೆ ತಂದಿದ್ದೇನೆ ಅತಿಥಿ ಶಿಕ್ಷಕರಿಗೆ ನೀಡುತ್ತಿರುವ ಗೌರವಧನ ಸಾಕಾಗುವುದಿಲ್ಲ. ಪ್ರಣಾಳಿಕೆಯಲ್ಲಿ ತಿಳಿಸಿದಂತೆ ಓಪಿಎಸ್ ಜಾರಿಗೆ ಕ್ರಮ ವಹಿಸುತ್ತೇವೆ ಎಂದು ಭರವಸೆ ನೀಡಿದರು.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…