ತುಮಕೂರು: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಯಾರಿಗೂ ಮೋಸ ಮಾಡಲ್ಲ. ಕಾಂಗ್ರೆಸ್ ಪಕ್ಷದ ಮೇಲೆ ಇಟ್ಟಿರುವ ನಂಬಿಕೆಯನ್ನು ಎಂದಿಗೂ ಹುಸಿಗೊಳಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭರವಸೆ ನೀಡಿದರು.
ಈ ಬಗ್ಗೆ ತುಮಕೂರಿನಲ್ಲಿ ಮಾತನಾಡಿದ ಅವರು, ೬ನೇ ವೇತನ ಆಯೋಗ ಜಾರಿಗೆ ತಂದಿದ್ದು ಸಹ ನಮ್ಮ ಸರ್ಕಾರ. ೭ನೇ ವೇತನ ಅಯೋಗ ಶಿಫಾರಸು ಜಾರಿಗೆ ೧೮ ಸಾವಿರ ಕೋಟಿ ಹಾಗೂ ಓಪಿಎಸ್ ಜಾರಿಗೆ ನೂರಾರು ಕೋಟಿ ರೂ ಬೇಕು. ಒಂದೇ ದಿನದಲ್ಲಿ ಎಲ್ಲವನ್ನೂ ಜಾರಿಗೆ ತರಲು ಸಾಧ್ಯವಿಲ್ಲ. ಅದಕ್ಕಾಗಿ ತಾಳ್ಮೆಯಿಂದ ಇರಿ ಎಂದು ಹೇಳಿದರು.
ಮಹಾರಾಷ್ಟ್ರ ಮತ್ತು ಕರ್ನಾಟಕ ರಾಜ್ಯಗಳು ಅತಿ ಹೆಚ್ಚು ತೆರಿಗೆ ಕಟ್ಟುತ್ತಿವೆ. ಇದಕ್ಕೆ ಅನುಗುಣವಾಗಿ ನಮಗೆ ವಾಪಸ್ ಬರುತ್ತಿಲ್ಲ ಎಂಬ ವಾದವನ್ನು ಕೇಂದ್ರ ಸರ್ಕಾರದ ಮುಂದಿಟ್ಟಿದ್ದೇವೆ. ನಮ್ಮಲ್ಲಾದ ಬದಲಾವಣೆಯಿಂದ ಕರ್ನಾಟಕ ಶಕ್ತಿಯುತವಾಗಿದ್ದು, ಇತರೆ ರಾಜ್ಯಗಳಿಗೂ ಶಕ್ತಿ ನೀಡಲು ಈ ಹಣ ಬಳಕೆ ಮಾಡುತ್ತಿದ್ದೇವೆ ಎಂದು ಕೇಂದ್ರ ಸರ್ಕಾರ ಹೇಳಿದೆ.
ಅನುದಾನಿತ ಶಾಲೆಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ನೇಮಕ ಸಂಬಂಧಿಸಿದಂತೆ ಸರ್ಕಾರ ಶೀಘ್ರವೇ ಸೂಕ್ತ ನಿರ್ಧಾರಕ್ಕೆ ಬರಲಿದೆ. ನಾನು ಕೂಡ ಶಿಕ್ಷಣ ಸಚಿವರು ಮತ್ತು ಸಿಎಂ ಸಿದ್ದರಾಮಯ್ಯ ಗಮನಕ್ಕೆ ತಂದಿದ್ದೇನೆ ಅತಿಥಿ ಶಿಕ್ಷಕರಿಗೆ ನೀಡುತ್ತಿರುವ ಗೌರವಧನ ಸಾಕಾಗುವುದಿಲ್ಲ. ಪ್ರಣಾಳಿಕೆಯಲ್ಲಿ ತಿಳಿಸಿದಂತೆ ಓಪಿಎಸ್ ಜಾರಿಗೆ ಕ್ರಮ ವಹಿಸುತ್ತೇವೆ ಎಂದು ಭರವಸೆ ನೀಡಿದರು.
ಹೊಸದಿಲ್ಲಿ : ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಾವು ಮತಕಳ್ಳತನದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಇದರಲ್ಲಿ…
ಚಿಕ್ಕಮಗಳೂರು : ಅದೊಂದು ಬಹುಕಾಲದ ಪ್ರೀತಿ, ಪ್ರೀತಿ ಮಾಡಿ, ಪ್ರೇಯಸಿಯಿಂದ ಹಣ ಪಡೆದು, ಇದೀಗ ಬೇರೊಂದು ಮದುವೆಗೆ ಸಿದ್ಧವಾಗಿದ್ದ ಹುಡಗ…
ಬಂಡೀಪುರ, ನಾಗರಹೊಳೆಯಲ್ಲಿ ಹೊಸ ವರ್ಷ ಆಚರಿಸಲು ಬಯಸಿದವರಿಗೆ ನಿರಾಸೆ ರೆಸಾರ್ಟ್, ಹೋಟೆಲ್ ಮಾಲೀಕರಿಂದ ಸಫಾರಿ ಪುನಾರಂಭಕ್ಕೆ ಒತ್ತಡ? ಮೈಸೂರು :…
ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…
ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು,…
ಇತ್ತೀಚಿನ ದಿನಗಳಲ್ಲಿ, ಟೂತ್ ಪೇಸ್ಟ್ಗಳಲ್ಲಿ ತಂಬಾಕು ಮತ್ತು ನಿಕೋಟಿನ್ ಅಂಶ ಪತ್ತೆಯಾಗಿದ್ದು, ಇದರ ಸೇವನೆಯಿಂದ ಹಲವು ಮಕ್ಕಳು ತೊಂದರೆಗೊಳಗಾಗಿರುವ ಘಟನೆಗಳು…