ಬೆಂಗಳೂರು : ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಯ ಅನುಷ್ಠಾನದ ಕುರಿತಂತೆ ಇರುವ ಸಾಧಕ ಬಾಧಕ ಬಗ್ಗೆ ಚರ್ಚೆ ಮಾಡಲಾಗಿದೆ. ಒಳಮೀಸಲಾತಿ ಅನುಷ್ಠಾನಕ್ಕೆ ಬಿಲ್ ತರಲು ಸರ್ಕಾರ ನಿರ್ಧರಿಸಿದೆ. ಸುಗ್ರೀವಾಜ್ಞೆ ಬದಲಿಗೆ ಬಿಲ್ ತರುವುದಕ್ಕೆ ಸರ್ಕಾರ ಮುಂದಾಗಿದ್ದು, ನಾಳೆ ಸಂಪುಟ ಸಭೆಯಲ್ಲಿ ವಿಧೇಯಕ ಮಂಡಿಸಲು ನಿರ್ಧಾರ ಕೈಗೊಳ್ಳಲಾಗಿದೆ.
ಸಭೆಯ ಇತರೆ ಮುಖ್ಯಾಂಶಗಳು ಹೀಗಿವೆ….
• ಒಳ ಮೀಸಲಾತಿ ಕುರಿತಾಗಿ ಸಚಿವ ಸಂಪುಟ ಸಭೆಯ ತೀರ್ಮಾನಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಬೇಕು. ರೋಸ್ಟರ್ ಜಾರಿ ಕುರಿತಾಗಿ ಎಲ್ಲರ ಅಹವಾಲುಗಳನ್ನು ಆಲಿಸಬೇಕು. ಯಾವುದೇ ಜಾತಿಗಳಿಗೂ ರೋಸ್ಟರ್ನಲ್ಲಿ ಅನ್ಯಾಯವಾಗದಂತೆ ಖಾತ್ರಿಪಡಿಸಬೇಕು ಎಂದು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.
ಇದನ್ನೂ ಓದಿ:-ಸ್ವಾತಂತ್ರ್ಯ ಹೋರಾಟದಲ್ಲಿ ಆರ್ಎಸ್ಎಸ್ ಭಾಗಿಯಾಗಿರಲಿಲ್ಲ : ಹೆಗೆಡೆ ಆಪಾದನೆ
• ಜಾತಿ ಪ್ರಮಾಣ ಪತ್ರ ಯಾವ ರೀತಿಯಲ್ಲಿ ನೀಡಬೇಕು ಎಂಬ ಕುರಿತು ವಿವರವಾದ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಲಾಗಿದೆ. ನೇಮಕಾತಿಗೆ ಇದ್ದ ನಿರ್ಬಂಧವನ್ನು ತೆರವುಗೊಳಿಸಿದ ಬಳಿಕ ಅಭ್ಯರ್ಥಿಗಳ ವಯೋಮಿತಿಯನ್ನು ಒಂದು ಅವಧಿಗೆ ಹೆಚ್ಚಳ ಮಾಡಲಾಗಿದೆ. ಕೆಇಎಯಲ್ಲಿ ಈಗಾಗಲೇ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ.
• ಒಳ ಮೀಸಲಾತಿ ಜಾರಿ ಕುರಿತಾಗಿ ಸುಪ್ರೀಂಕೋರ್ಟ್ ನಿರ್ದೇಶನಗಳ ಪ್ರಕಾರ ಕಾಯ್ದೆ ಜಾರಿಗೊಳಿಸಲು ಕ್ರಮ ಕೈಗೊಳ್ಳಬೇಕು.
• ಸಚಿವರಾದ ಜಿ.ಪರಮೇಶ್ವರ್, ಎಚ್.ಸಿ.ಮಹಾದೇವಪ್ಪ, ಕೆ.ಎಚ್.ಮುನಿಯಪ್ಪ, ಶಿವರಾಜ ತಂಗಡಗಿ, ಎಚ್.ಕೆ.ಪಾ ಟೀಲ್, ಪ್ರಿಯಾಂಕ ಖರ್ಗೆ, ಬಿ.ಆರ್.ತಿಮ್ಮಾಪುರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮತ್ತಿತರರು ಉಪಸ್ಥಿತರಿದ್ದರು.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…