Farmers Attempt to Lay Siege to CM's House Protesting Land Acquisition
ಬೆಂಗಳೂರು: ಒಳಮೀಸಲಾತಿ ಬಗ್ಗೆ ಹಲವು ವರ್ಷಗಳಿಂದ ಇದ್ದ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಹಂಚಿಕೆಯ ನಿರ್ಧಾರ ಕೈಗೊಳ್ಳಲಾಗಿದೆ.
ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಒಳಮೀಸಲಾತಿಯನ್ನು ಯಾರಿಗೆ ಎಷ್ಟು ಹಂಚಲಾಗಿದೆ ಎಂಬ ಬಗ್ಗೆ ಮಾಹಿತಿ ನೀಡಿದರು.
ಕಗ್ಗಂಟಾಗಿದ್ದ ಒಳಮೀಸಲಾತಿಗೆ ಮೂರು ಸೂತ್ರವನ್ನು ಪೈನಲ್ ಮಾಡಲಾಗಿದೆ. ಪರಿಶಿಷ್ಟ ಜಾತಿಗಳಿಗೆ ಲಭ್ಯವಿರುವ ಶೇ.15ರಷ್ಟು ಮೀಸಲಾತಿಯಲ್ಲಿ ಸಮಾನವಾಗಿ ಹಂಚಿಕೆಗೆ ತೀರ್ಮಾನಿಸಲಾಗಿದೆ. ಎಸ್ಸಿ ಎಡಗೈ 5.25, ಬಲಗೈ 5.25, ಎಸ್ಸಿ ಇತರರಿಗೆ ಶೇ.4.5ರಷ್ಟು ಹಂಚಿಕೆಗೆ ನಿರ್ಧರಿಸಲಾಗಿದೆ.
ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ 101 ಜಾತಿಗಳ ಪೈಕಿ ಅವಕಾಶ ವಂಚಿತ ಉಪಜಾತಿಗಳಿಗೆ ಒಳಮೀಸಲು ಕಲ್ಪಿಸಬೇಕೆಂದು ದಶಕಗಳ ಕಾಲದಿಂದಲೂ ಹಕ್ಕೋತ್ತಾಯ ಹಾಗೂ ಹೋರಾಟಗಳು ನಡೆದಿದ್ದವು.
ಇದೀಗ ಈ ಸಂಬಂಧ ರಾಜ್ಯ ಸರ್ಕಾರ ಮೀಸಲಾತಿ ಹಂಚಿಕೆ ಮಾಡಿದೆ. ಎಡಗೈ 5.25, ಬಲಗೈ 5.25, ಎಸ್ಸಿ ಇತರರಿಗೆ ಶೇ.4.5ರಷ್ಟು ಹಂಚಿಕೆ ಮಾಡಿ ಒಳಮೀಸಲಾತಿ ಜಾರಿಗೆ ತೀರ್ಮಾನ ಕೈಗೊಂಡಿದೆ ಎಂದು ಹೇಳಿದರು.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…