ರಾಜ್ಯ

ಅಯ್ಯಪ್ಪಸ್ವಾಮಿ ಭಕ್ತರಿಗೆ ಮುಖ್ಯ ಮಾಹಿತಿ: ಡಿಸೆಂಬರ್.‌27ರಂದು ಶಬರಿಮಲೆಯಲ್ಲಿ ಮಂಡಲ ಪೂಜೆ

ಕೇರಳ: ಶ್ರೀಕ್ಷೇತ್ರ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಡಿಸೆಂಬರ್.‌27ರಂದು ಅಯ್ಯಪ್ಪ ಸ್ವಾಮಿಗೆ ಮಂಡಲ ಪೂಜೆ ನೆರವೇರಿಸಲಾಗುವುದು.

ಅಂದು ಬೆಳಿಗ್ಗೆ 10.10ರಿಂದ 11.30ರವರೆಗಿನ ಮುಹೂರ್ತದಲ್ಲಿ ಈ ವರ್ಷದ ಮಂಡಲ ಪೂಜೆ ನಡೆಯಲಿದೆ. ಮಂಡಲ ಪೂಜೆಗೆ ಸಂಬಂಧಿಸಿದ ದೀಪಾರಾಧನೆ ಬೆಳಿಗ್ಗೆ 11.30ಕ್ಕೆ ಪೂರ್ಣಗೊಳ್ಳಲಿದೆ.

ಇದನ್ನು ಓದಿ: ಶಬರಿ ಮಲೆ ಅಯ್ಯಪ್ಪ ಭಕ್ತರಿಗೆ ವಂಚನೆ : ನಕಲಿ ವೆಬ್‌ಸೈಟ್ ಪತ್ತೆ

ಡಿಸೆಂಬರ್.‌27ರಂದು ಮಧ್ಯಾಹ್ನ ತಂಗ ಅಂಗಿ ತೊಡಿಸಿ ಮಂಡಲ ಪೂಜೆ ನಡೆಸಲಾಗುತ್ತದೆ. ಡಿಸೆಂಬರ್.‌27ರಂದು ರಾತ್ರಿ 11 ಗಂಟೆಗೆ ಹರಿವರಾಸನಂ ಗಾಯನದೊಂದಿಗೆ ದೇವಾಲಯ ಮುಚ್ಚಲಾಗುತ್ತದೆ.

ಡಿಸೆಂಬರ್.‌30ರಂದು ಸಂಜೆ 5 ಗಂಟೆಗೆ ಮಕರ ಜ್ಯೋತಿ ಉತ್ಸವಕ್ಕಾಗಿ ಮತ್ತೆ ದೇವಾಲಯ ತೆರೆಯಲಾಗುತ್ತದೆ ಎಂದು ತಂತ್ರಿ ಕಂಠಿರರ್‌ ಮಹೇಶ್‌ ಮೋಹನರ್‌ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…

2 hours ago

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

4 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

4 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

9 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

9 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

9 hours ago