ಕೋಲಾರ : ಕೋಲಾರದಿಂದ ಇಂದು ಅಧಿಕೃತವಾಗಿ ಪ್ರಚಾರ ಆರಂಭಿಸಿದ್ದು, ಜನರ ಪ್ರತಿಕ್ರಿಯೆ ಬಹಳ ಚೆನ್ನಾಗಿದೆ. ಎಲ್ಲಾ ಜಾತಿಯ ಜನರು, ಮಧ್ಯಮ ವರ್ಗದವರು ನಮ್ಮ ಪರವಾಗಿದ್ದಾರೆ. ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಅಧಿಕ ಅಂತರದಿಂದ ಗೆಲ್ಲಲಿದ್ದಾರೆ ಎಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಅವರು ಇಂದು ಮುಳಬಾಗಿಲು ನಗರದಲ್ಲಿ ಲೋಕಸಭಾ ಅಭ್ಯರ್ಥಿಯಾದ ಡಾ. ಕೆ.ವಿ ಗೌತಮ್ ಅವರ ಪರ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮಗಳಿಗೆ ಮಾತನಾಡಿದ ಅವರು, 5300 ಕೋಟಿ ಕೊಡುವುದಾಗಿ ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಹೇಳಿದ್ದರು. ಒಂದು ರೂಪಾಯಿಯನ್ನಾದರೂ ಕೊಟ್ಟಿದ್ದಾರೆಯೇ? 15 ನೇ ಹಣಕಾಸು ಯೋಜನೆಯು 5495 ಕೋಟಿ ಕೊಡುವುದಾಗಿ ಹೇಳಿ ಕೊಟ್ಟಿಲ್ಲಾ. ಪೇರಿಫೆರಲ್ ರಿಂಗ್ ರೋಡ್ ಹಾಗೂ ಕೆರೆಗಳ ಅಭವೃದ್ಧಿಗೆ ತಲಾ 3000 ಕೋಟಿ ರೂ.ಕೊಡುವುದಾಗಿ ಹೇಳಿದ್ದರು. ಕೊಟ್ಟರೇ? 15 ಲಕ್ಷ ರೂ ವಿದೇಶಗಳಿಂದ ತಂದು ಪ್ರತಿಯೊಬ್ಬರಿಗೂ ಕೊಟ್ಟರೇ?2 ಕೋಟಿ ಉದ್ಯೋಗ ಪ್ರತಿ ವರ್ಷ ಸೃಷ್ಟಿಸುವುದಾಗಿ ಹೇಳಿದ್ದರು. ರೈತರ ಆದಾಯ ದ್ವಿಗುಣ ಮಾಡುವುದೆಂದು ಹೇಳಿದ್ದರು ಮಾಡಿದರೆ ಅಚ್ಚೇ ದಿನ್ ಆಯೇಗಾ, ಎಂದರು, ಬೆಲೆ ಕಡಿಮೆ ಮಾಡುವುದಾಗಿ ಹೇಳಿದರು ಮಾಡಿದರೆ. ಬಿಜೆಪಿಗೆ ಏತಕ್ಕಾಗಿ ಮತ ನೀಡಬೇಕು ಎಂದು ಮುಖ್ಯಮಂತ್ರಿಗಳು ಸಾಲು ಸಾಲು ಪ್ರಶ್ನೆಗಳನ್ನು ಕೇಳಿದರು.
ಲೋಕಸಭಾ ಚುನಾವಣೆಯ ನಂತರ ಸರ್ಕಾರ ಬಿದ್ದು ಹೋಗಲಿದೆ ಎಂದು ಬಿಜೆಪಿ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿ 136 ಸ್ಥಾನಗಳನ್ನು ಗೆದ್ದು 43% ಮತಗಳನ್ನು ಕಾಂಗ್ರೆಸ್ ಗಳಿಸಿದೆ. ಬಿಜೆಪಿ 64 ಗೆದ್ದಿದ್ದಾರೆ. ಇನ್ನಷ್ಟು ಜನ ನಮ್ಮ ಪಕ್ಷವನ್ನು ಸೇರಲಿದ್ದಾರೆ. ಸರ್ಕಾರ ಬಿದ್ದುಹೋಗುವ ಪ್ರಶ್ನೆ ಉದ್ಭಿಸುವುದಿಲ್ಲ ಎಂದರು. ಐದು ವರ್ಷಗಳೂ ಕೂಡ ಗ್ಯಾರಂಟಿಗಳು ಜಾರಿಯಾಗಲಿವೆ ಎಂದರು.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…