ರಾಜ್ಯ

ಸಾಲುಮರದ ತಿಮ್ಮಕ್ಕ ಗೌರವಾರ್ಥ ರಾಜ್ಯದ 114 ಸ್ಥಳಗಳಲ್ಲಿ ತಲಾ 114 ಸಸಿ ನೆಟ್ಟು ಪೋಷಣೆ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: 114 ವರ್ಷ ಜೀವಿಸಿದ್ದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ಗೌರವಾರ್ಥ ರಾಜ್ಯದ 114 ಸ್ಥಳಗಳಲ್ಲಿ 114 ಸಸಿ ನೆಟ್ಟು ಪೋಷಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅವರು, ಮರಗಳನ್ನೇ ಮಕ್ಕಳಂತೆ ಮಮಕಾರದಿಂದ ಬೆಳೆಸಿ ವಿಶ್ವಕ್ಕೇ ವೃಕ್ಷಗಳ ಮಹತ್ವ ಸಾರಿದ ಸಾಲುಮರದ ತಿಮ್ಮಕ್ಕ ಅವರ ಹೆಸರಲ್ಲಿ ಸಸಿ ನೆಡುವ ಮೂಲಕ ಅರಣ್ಯ ಇಲಾಖೆ ಗೌರವ ಸಲ್ಲಿಸಲಿದೆ ಎಂದರು.

ಇದನ್ನು ಓದಿ: ಕಲಾಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಅಂತ್ಯಕ್ರಿಯೆ : ಈಶ್ವರ ಖಂಡ್ರೆ

ಇಲಾಖೆ ಅವರನ್ನು ಪರಿಸರ ರಾಯಭಾರಿಯಾಗಿ ಪುರಸ್ಕರಿಸಿತ್ತು. ಅಜ್ಜಿಯ ಪ್ರೇರಣೆಯಿಂದ ನೂರಾರು ಜನರು ತಮ್ಮ ಕೈಲಾದಷ್ಟು ಸಸಿ ನೆಟ್ಟು ಪೋಷಿಸುತ್ತಿದ್ದಾರೆ. ಲಕ್ಷಾಂತರ ಪರಿಸರ ಪ್ರೇಮಿಗಳಿಗೆ ಪ್ರೇರಣೆಯಾಗಿದ್ದ ತಿಮ್ಮಕ್ಕ ಅವರ ನಿಧನದಿಂದ ರಾಜ್ಯ ನಿಷ್ಠಾವಂತ ಪರಿಸರ ಕಾಳಜಿಯ ಮಹಾಜೀವಿಯನ್ನು ಕಳೆದುಕೊಂಡಿದೆ ಎಂದು ದುಃಖ ವ್ಯಕ್ತಪಡಿಸಿದರು. ಸಾಲುಮರದ ತಿಮ್ಮಕ್ಕ ಅವರ ಹೆಸರಿನಲ್ಲಿ ಪ್ರಶಸ್ತಿ ನೀಡಲಾಗುವುದು ಎಂದು ಈಶ್ವರ ಬಿ ಖಂಡ್ರೆ ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಸಂಧಾನ ಯಶಸ್ವಿ : ಮುಷ್ಕರ ಹಿಂಪಡೆದ ವೈದ್ಯರು

 ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ  (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು…

4 hours ago

ಪರಿಷತ್‌ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಜೆಡಿಎಸ್‌ಗೆ 1 ಸೀಟು

ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು…

5 hours ago

ಎಲ್‌ಪಿಜಿ ಸಿಲಿಂಡರ್‌ ವ್ಯತ್ಯಯ, ಬೆಲೆ ಏರಿಕೆ : ಬಾಯಿ ಬಿಡದ ಬಿಜೆಪಿ ; ಡಿ.ಕೆ.ಶಿವಕುಮಾರ್‌ ಆರೋಪ

ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…

6 hours ago

ಹುಲಿ ದಾಳಿಗೆ ಹಸು ಬಲಿ ; ರೈತ ಪಾರು

ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…

6 hours ago

ಎಲ್‌ಪಿಜಿ ಕೊರತೆ | ಕೇಂದ್ರದಿಂದ 1955ರ ಕಾಯ್ದೆ ಜಾರಿ ; ಏನಿದು ಅಗತ್ಯ ಸರಕು ಕಾಯ್ದೆ?

ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…

6 hours ago

ನ್ಯಾಯಾಂಗ ಭ್ರಷ್ಟಾಚಾರ ಕುರಿತ ಅಧ್ಯಾಯ ವಿವಾದ ; ಸಾರ್ವಜನಿಕ ಕ್ಷಮೆ ಯಾಚಿಸಿದ ಎನ್‌ಸಿಇಆರ್‌ಟಿ

ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…

6 hours ago