ವಾರಣಾಸಿ : ಜ್ಞಾನವಾಪಿ ಮಸೀದಿಯ ದಕ್ಷಿಣ ನೆಲಮಾಳಿಗೆಯಲ್ಲಿ ನಡೆಯುವ ಪೂಜೆಯನ್ನು ವಿರೋಧಿಸಿ ಶುಕ್ರವಾರ ತಮ್ಮ ಅಂಗಡಿಗಳನ್ನು ಮುಚ್ಚುವಂತೆ ಜ್ಞಾನವಾಪಿ ಮಸೀದಿಯನ್ನು ನಿರ್ವಹಿಸುವ ಅಂಜುಮನ್ ಇಂಟೆಝಾಮಿಯಾ ಮಸೀದಿ ಸಮಿತಿ (ಎಐಎಂಸಿ) ಮುಸ್ಲಿಂ ಸಮುದಾಯದ ಜನರಿಗೆ ಮನವಿ ಮಾಡಿದೆ.
ಮುಸ್ಲಿಂ ಸಮುದಾಯದ ಪ್ರಮುಖ ಸದಸ್ಯರು ಗುರುವಾರ ಧರ್ಮಗುರುಗಳೊಂದಿಗೆ ನಡೆಸಿದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಸಭೆಯ ಅಧ್ಯಕ್ಷತೆ ವಹಿಸಿದ್ದ ಶಹರ್-ಎ-ಮುಫ್ತಿ ಮತ್ತು ಎಐಎಂಸಿ ಪ್ರಧಾನ ಕಾರ್ಯದರ್ಶಿ ಮೌಲಾನಾ ಅಬ್ದುಲ್ ಬಟಿನ್ ನೊಮಾನಿ ಅವರು, ಶುಕ್ರವಾರ, ಎಲ್ಲಾ ಅಂಗಡಿಗಳು ಮತ್ತು ವ್ಯವಹಾರಗಳನ್ನು ಶಾಂತಿಯುತ ರೀತಿಯಲ್ಲಿ ಮುಚ್ಚಲಾಗುವುದು ಮತ್ತು ಸಮುದಾಯದ ಜನರು ಆಯಾ ನಗರಗಳು ಮತ್ತು ಪ್ರದೇಶಗಳಲ್ಲಿ ಉಳಿದುಕೊಂಡು ಪ್ರಾರ್ಥನೆಯಲ್ಲಿ ನಿರತರಾಗಿರಬೇಕು ಎಂದು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಮಹಿಳೆಯರು ತಮ್ಮ ಮನೆಗಳಲ್ಲಿಯೇ ಇದ್ದು ಪ್ರಾರ್ಥನೆ ಸಲ್ಲಿಸಬೇಕು. ಮದುವೆ ಮತ್ತು ಇತರ ಆಚರಣೆಗಳನ್ನು ಸರಳವಾಗಿ ಆಯೋಜಿಸಬೇಕು ಎಂದು ಶಹರ್-ಎ-ಮುಫ್ತಿ ಅಬ್ದುಲ್ ಬಟಿನ್ ನೊಮಾನಿ ಹೊರಡಿಸಿದ ಮನವಿಯಲ್ಲಿ ತಿಳಿಸಲಾಗಿದೆ.
ನವೀನ್ ಡಿಸೋಜ ಗುಡ್ಡದ ಮೇಲೆ ಅವೈಜ್ಞಾನಿಕವಾಗಿ ಸುರಿದಿದ್ದ ಕಸ ವಿಂಗಡಣೆ ಕೆಲಸ ಚುರುಕು ಮಡಿಕೇರಿ: ವಾಯು ಗುಣಮಟ್ಟದಲ್ಲಿ ದೇಶದಲ್ಲೇ ಹೆಸರಾಗಿರುವ…
ಇತ್ತೀಚಿನ ದಿನಮಾನಗಳಲ್ಲಿ ಸಕ್ಕರೆ ಕಾಯಿಲೆ ಎಂಬುದು ಸಾಮಾನ್ಯವಾಗಿ ಬಿಟ್ಟಿದೆ. ಈ ಕಾಯಿಲೆ ಗಂಭೀರ ಸ್ವರೂಪ ಪಡೆದುಕೊಂಡಾಗ ಗ್ಯಾಂಗ್ರಿನ್ ರೂಪ ಪಡೆದುಕೊಳ್ಳುತ್ತದೆ.…
ಎಸ್.ಎಸ್.ಭಟ್ ನಂಜನಗೂಡು: ಮೈಸೂರು ನಗರದಿಂದ ನಂಜನಗೂಡಿಗೆ ತೆರಳುವ ಬಸ್ ಹತ್ತುವ ಪ್ರಯಾಣಿಕ ಆಘಾತಕ್ಕೆ ಒಳಗಾಗುವುದು ಗ್ಯಾರಂಟಿ. ಮೈಸೂರು ಬಸ್ ನಿಲ್ದಾಣದಿಂದ…
ಮಂಜು ಕೋಟೆ ಕೋಟೆ ತಾಲ್ಲೂಕು ಕುರುಬ ಸಮಾಜದ ಅಧ್ಯಕ್ಷರಾಗಿ ಮೊಳಿಯೂರು ಆನಂದ್ ಮುಂದುವರಿಕೆಗೆ ನ್ಯಾಯಾಲಯದ ತೀರ್ಪು ಎಚ್.ಡಿ.ಕೋಟೆ: ತಾಲ್ಲೂಕು ಕುರುಬ…
ಕೆ.ಬಿ.ರಮೇಶನಾಯಕ ಬಡವರಿಗೆ ಕೈಗೆಟುಕುವ ದರದಲ್ಲಿ ಗುಣಮಟ್ಟದ ಆಹಾರ ಒದಗಿಸುವ ಉದ್ದೇಶ ಮೈಸೂರು: ಬಡವರ ಕೈಗೆಟುಕುವ ದರದಲ್ಲಿ ಗುಣಮಟ್ಟದ ತಿಂಡಿ, ಊಟವನ್ನು…