ವಾರಣಾಸಿ : ಜ್ಞಾನವಾಪಿ ಮಸೀದಿಯ ದಕ್ಷಿಣ ನೆಲಮಾಳಿಗೆಯಲ್ಲಿ ನಡೆಯುವ ಪೂಜೆಯನ್ನು ವಿರೋಧಿಸಿ ಶುಕ್ರವಾರ ತಮ್ಮ ಅಂಗಡಿಗಳನ್ನು ಮುಚ್ಚುವಂತೆ ಜ್ಞಾನವಾಪಿ ಮಸೀದಿಯನ್ನು ನಿರ್ವಹಿಸುವ ಅಂಜುಮನ್ ಇಂಟೆಝಾಮಿಯಾ ಮಸೀದಿ ಸಮಿತಿ (ಎಐಎಂಸಿ) ಮುಸ್ಲಿಂ ಸಮುದಾಯದ ಜನರಿಗೆ ಮನವಿ ಮಾಡಿದೆ.
ಮುಸ್ಲಿಂ ಸಮುದಾಯದ ಪ್ರಮುಖ ಸದಸ್ಯರು ಗುರುವಾರ ಧರ್ಮಗುರುಗಳೊಂದಿಗೆ ನಡೆಸಿದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಸಭೆಯ ಅಧ್ಯಕ್ಷತೆ ವಹಿಸಿದ್ದ ಶಹರ್-ಎ-ಮುಫ್ತಿ ಮತ್ತು ಎಐಎಂಸಿ ಪ್ರಧಾನ ಕಾರ್ಯದರ್ಶಿ ಮೌಲಾನಾ ಅಬ್ದುಲ್ ಬಟಿನ್ ನೊಮಾನಿ ಅವರು, ಶುಕ್ರವಾರ, ಎಲ್ಲಾ ಅಂಗಡಿಗಳು ಮತ್ತು ವ್ಯವಹಾರಗಳನ್ನು ಶಾಂತಿಯುತ ರೀತಿಯಲ್ಲಿ ಮುಚ್ಚಲಾಗುವುದು ಮತ್ತು ಸಮುದಾಯದ ಜನರು ಆಯಾ ನಗರಗಳು ಮತ್ತು ಪ್ರದೇಶಗಳಲ್ಲಿ ಉಳಿದುಕೊಂಡು ಪ್ರಾರ್ಥನೆಯಲ್ಲಿ ನಿರತರಾಗಿರಬೇಕು ಎಂದು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಮಹಿಳೆಯರು ತಮ್ಮ ಮನೆಗಳಲ್ಲಿಯೇ ಇದ್ದು ಪ್ರಾರ್ಥನೆ ಸಲ್ಲಿಸಬೇಕು. ಮದುವೆ ಮತ್ತು ಇತರ ಆಚರಣೆಗಳನ್ನು ಸರಳವಾಗಿ ಆಯೋಜಿಸಬೇಕು ಎಂದು ಶಹರ್-ಎ-ಮುಫ್ತಿ ಅಬ್ದುಲ್ ಬಟಿನ್ ನೊಮಾನಿ ಹೊರಡಿಸಿದ ಮನವಿಯಲ್ಲಿ ತಿಳಿಸಲಾಗಿದೆ.
ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ನಂತೆ 15…
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…