_B Y Vijayendra
ಬೆಂಗಳೂರು: ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟುತ್ತೇನೆಂದು ಹೇಳಿರುವ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ತಡಮಾಡದೇ ಮುಸ್ಲಿಂ ಧರ್ಮಕ್ಕೆ ಮತಾಂತರವಾಗಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸವಾಲು ಹಾಕಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ಕೆ.ಸಂಗಮೇಶ್, ಈ ಜನ್ಮದಲ್ಲಿ ಹಿಂದೂವಾಗಿ ಹುಟ್ಟಿದ್ದಾರೆ. ಮೊದಲು ಹುಟ್ಟಿರುವ ಧರ್ಮದ ಋಣ ತೀರಿಸುವ ಕೆಲಸ ಮಾಡಲಿ. ನಂತರ ಮುಸ್ಲಿಂ ಆಗಿ ಹುಟ್ಟುವ ಮಾತನಾಡಲಿ ಎಂದು ತಿರುಗೇಟು ನೀಡಿದರು.
ಈ ಜನ್ಮದಲ್ಲೇ ನೀವು ಮುಸ್ಲಿಂ ಆಗಿ ಹುಟ್ಟಬೇಕಿತ್ತು. ಅದನ್ನು ತಡೆದವರು ಯಾರು?, ನಿಮಗೆ ಮುಂದಿನ ಜನ ಬೇಡ. ತಕ್ಷಣವೇ ಮತಾಂತರವಾದರೆ ಮುಸ್ಲಿಮರಾಗಿ ಬಿಡುತ್ತೀರಿ. ಇದೆಲ್ಲಾ ಓಲೈಕೆಯ ದ್ವಂದ್ವ ಮಾತುಗಳು. ಸಂಗಮೇಶ್ ಮಾತುಗಳನ್ನು ಭದ್ರಾವತಿಯಲ್ಲಿ ಮುಸ್ಲಿಮರೇ ಗಂಭೀರವಾಗಿ ಪರಿಗಣಿಸುವುದಿಲ್ಲ. ಇದು ರಾಜಕೀಯ ಬೂಟಾಟಿಕೆ ಎಂದು ತಿರುಗೇಟು ಕೊಟ್ಟರು.
ಇನ್ನು ಮುಂದುವರಿದು ಮಾತನಾಡಿದ ಅವರು, ರಾಜ್ಯದಲ್ಲಿ ಸರ್ಕಾರವೇ ಅಶಾಂತಿ ಸೃಷ್ಟಿಸುವ ಕೆಲಸ ಮಾಡುತ್ತಿದೆ. ಇದಕ್ಕೆ ಸರ್ಕಾರವೇ ನೇರಹೊಣೆ. ಹಿಂದೂಗಳು ನೆಮ್ಮದಿಯಿಂದ ಗಣೇಶ ಹಬ್ಬ ಆಚರಣೆ ಮಾಡಲು ಸಾಧ್ಯವಾಗುತ್ತಿಲ್ಲ. ನಮ್ಮನ್ನು ಎರಡನೇ ದರ್ಜೆಯ ಪ್ರಜೆಗಳಂತೆ ನೋಡಿಕೊಳ್ಳುತ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…
ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…
ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…
ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…
ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…