ಉತ್ತರ ಕನ್ನಡ : ಉತ್ತರಕನ್ನಡ ಜಿಲ್ಲೆಯಾದ್ಯಂತ ವರುಣ ಆರ್ಭಟ ಜೋರಾಗಿದ್ದು, ಜನರ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ನಿರಂತರ ಮಳೆಯಿಂದಾಗಿ ಶರಾವತಿ, ಗುಂಡಬಾಳ, ಕಾಳಿ ನದಿಗಳು ತುಂಬಿ ಹರಿಯುತ್ತಿದೆ. ಶರಾವತಿ ಹಾಗೂ ಗುಂಡಬಾಳ ನದಿ ತೀರದ ಪ್ರದೇಶದಲ್ಲಿ ಪ್ರವಾಹ ಉಂಟಾಗಿದ್ದು,ಕಡತೋಕ, ಬಾಸ್ಕೇರಿ, ಹಾಡಗೇರಿ ಸೇರಿ ಹಡಿನಬಾಳ ಗ್ರಾಮಕ್ಕೆ ಜಲದಿಗ್ಬಂಧನವಾಗಿದೆ.
ಭಾರೀ ಮಳೆಯಿಂದಾಗಿ ತೋಟ, ಗದ್ದೆಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಬೆಳ ನಾಶವಾಗಿ ರೈತರು ಕಂಗಾಲಾಗಿ ಹೋಗಿದ್ದಾರೆ. ಇನ್ನು ಕೆಲವು ಗ್ರಾಮದಲ್ಲಿ ಮನೆಗಳಿಗೆ ನೀರು ನುಗ್ಗಿ ಮನೆಯಲ್ಲಿರುವ ವಸ್ತುಗಳೆಲ್ಲವೂ ನೀರಿನಲ್ಲಿ ಮುಳುಗಡೆಯಾಗಿದೆ.
ಇನ್ನು ಹೊನ್ನಾವರ, ಕುಮಟಾ ತಾಲೂಕಿನಲ್ಲಿ ಭಾರೀ ಮಳೆಯಿಂದ ಪ್ರವಾಹವಾಗಿದೆ. ಹೊನ್ನಾವರ ತಾಲೂಕಿನ ನದಿಗಳು ಉಕ್ಕಿಹರಿಯುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಎನ್ ಡಿಆರ್ ಎಫ್ ತಂಡ ಜಿಲ್ಲೆಯಲ್ಲಿಯೇ ಬೀಡುಬಿಟ್ಟಿದೆ.
ನವದೆಹಲಿ: ನೀಟ್-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…
ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಂದು ಪ್ರಧಾನಿ…
ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್ ವಾಂಗ್ಚುಕ್ ಅವರನ್ನು ಇಲ್ಲಿನ ಸಫ್ದರ್ಜಂಗ್…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…
ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…
ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್ ಮುಂದುವರಿಯಲಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದೀಪ್ಕೆ…