ರಾಜ್ಯ

ಫೆಬ್ರವರಿ ಮೊದಲ ವಾರದಲ್ಲಿ ಅರ್ಜುನ ಸ್ಮಾರಕ ಉದ್ಘಾಟನೆ: ಅರಣ್ಯ ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಹುತಾತ್ಮನಾದ ದಸರಾ ಆನೆ ಅರ್ಜುನನ ಸ್ಮಾರಕವನ್ನು ಫೆಬ್ರವರಿ ಮೊದಲ ವಾರದಲ್ಲಿ ಉದ್ಘಾಟನೆ ಮಾಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಹೇಳಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಹುತಾತ್ಮ ಅರ್ಜುನ ಆನೆಯ ಸ್ಮಾರಕ ಸಂಪೂರ್ಣ ಸಿದ್ಧವಾಗಿದ್ದು, ಹಾಸನ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಸಮಾಲೋಚಿಸಿ ಫೆಬ್ರವರಿ ಮೊದಲ ವಾರದಲ್ಲಿ ಉದ್ಘಾಟಿಸಲಾಗುವುದು ಎಂದರು.

ಹುತಾತ್ಮ ಅರ್ಜುನನ ಸ್ಮಾರಕವನ್ನು ಡಿಸೆಂಬರ್.4ರ ಪ್ರಥಮ ಪುಣ್ಯ ತಿಥಿಯೊಳಗಾಗಿ ನೆರವೇರಿಸುವ ಉದ್ದೇಶ ಇತ್ತು. ಆದರೆ, ತಾಂತ್ರಿಕ ಕಾರಣಗಳಿಂದ ತಡವಾಗಿದೆ. ಸ್ಮಾರಕ ಅರಣ್ಯ ಪ್ರದೇಶದಲ್ಲಿದ್ದು, ಸಾರ್ವಜನಿಕರು ಸ್ಮಾರಕ ದರ್ಶನಕ್ಕೆ ಬರಲು ತೊಡಕಾಗದ ರೀತಿಯಲ್ಲಿ ಕ್ರಮ ವಹಿಸಲಾಗುವುದು ಎಂದರು.‌

ಇನ್ನು ಮುಂದುವರಿದು ಮಾತನಾಡಿದ ಅವರು, ಕಾಕನಕೋಟೆಯಲ್ಲಿ 1968ರಲ್ಲಿ ನಡೆದ ಖೆಡ್ಡ ಕಾರ್ಯಾಚರಣೆಯಲ್ಲಿ ಸೆರೆಹಿಡಿಯಲಾಗಿದ್ದ ಅರ್ಜುನ ನಾಗರಹೊಳೆ ಅರಣ್ಯ ವ್ಯಾಪ್ತಿಯಲ್ಲಿರುವ ಬಳ್ಳೆ ಆನೆ ಶಿಬಿರದಲ್ಲಿದ್ದ ಹಿನ್ನೆಲೆಯಲ್ಲಿ ಬಳ್ಳೆಯಲ್ಲೂ ಕೂಡ ಸ್ಮಾರಕ ನಿರ್ಮಿಸಲಾಗಿದ್ದು, ಫೆಬ್ರವರಿ ಅಂತ್ಯ ಅಥವಾ ಮಾರ್ಚ್ ಮೊದಲ ವಾರದಲ್ಲಿ ಆ ಸ್ಮಾರಕವನ್ನೂ ಸಾರ್ವಜನಿಕರ ವೀಕ್ಷಣೆಗೆ ಮುಕ್ತಗೊಳಿಸಲಾಗುವುದು ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

7 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

9 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

10 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

11 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

13 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

14 hours ago