Mysore
36
few clouds

Social Media

ಗುರುವಾರ, 09 ಏಪ್ರಿಲ 2026
Light
Dark

ಅಯೋಧ್ಯೆ ರಾಮ ಮಂದಿರ ಉದ್ಘಾಟನೆ : ಸಿದ್ದರಾಮಯ್ಯಗೆ ಆಹ್ವಾನ!

ಬೆಂಗಳೂರು: ಜ.೨೨ರಂದು ನಡೆಯಲಿರುವ ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಂಪುಟದ ಎಲ್ಲ ಸಚಿವರನ್ನು ಉತ್ತರ ಪ್ರದೇಶ ಕೃಷಿ ಸಚಿವ ಸೂರ್ಯಪ್ರತಾಪ್ ಸಾಹಿ ಆಹ್ವಾನ ನೀಡಿದರು.

ಅರಮನೆ ಮೈದಾನದಲ್ಲಿ ಕೃಷಿ ಇಲಾಖೆ ಸಹಯೋಗದಲ್ಲಿ ನಡೆದ ‘ಸಿರಿಧಾನ್ಯ ಮೇಳ’ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸೂರ್ಯಪ್ರತಾಪ್ ಸಾಹಿ ಅವರು ಸಿದ್ದರಾಮಯ್ಯ ಹಾಗೂ ಸಂಪುಟ ಸಚಿವರಿಗೆ ರಾಮಮಂದಿರ ಉದ್ಘಾಟನೆಗೆ ಆಹ್ವಾನಿಸಿದ್ದಾರೆ.

ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸೇರಿದಂತೆ ಎಲ್ಲರೂ ಆಗಮಿಸುವ ಮೂಲಕ ಸಾಕ್ಷಿಯಾಗಬೇಕು ಎಂದು ಸಚಿವ ಸಾಹಿ ಮನವಿ ಮಾಡಿದರು.

ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸ್ಮರಣಿಕೆ ನೀಡಿ ಶಾಲು ಹಾಕಿ ಗೌರವಿಸಿದರು. ಈ ವೇಳೆ ಕೇಂದ್ರದ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಸೇರಿದಂತೆ ಸಚಿವರು, ಶಾಸಕರು ಸಹಿತ ಹಲವು ಗಣ್ಯರು ಪಾಲ್ಗೊಂಡಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!