ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಸಿಇಓಗಳಿಗೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪತ್ರ ಬರೆದಿದ್ದಾರೆ.
ಪತ್ರದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಇರುವ ಸೌಲಭ್ಯಗಳನ್ನು ಪ್ರಚಾರ ಮಾಡುವ ಮೂಲಕ ದಾಖಲಾತಿ ಅಭಿಯಾನ ನಡೆಸುವಂತೆ ಮನವಿ ಮಾಡಲಾಗಿದೆ. ಡಿಸಿಗಳು ಮತ್ತು ಸಿಇಓ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಪತ್ರದಲ್ಲಿ ಉಲ್ಲೇಖ ಮಾಡಲಾಗಿದೆ.
ಯಾವ ಮಗುವು ಶಿಕ್ಷಣದಿಂದ ವಂಚಿತವಾಗದಂತೆ ಜಿಲ್ಲಾದ್ಯಂತ ವ್ಯವಸ್ಥಿತವಾಗಿ ದಾಖಲಾತಿ ಆಂದೋಲನವನ್ನು ಹಮ್ಮಿಕೊಳ್ಳಬೇಕು. ಪ್ರತಿ ಗ್ರಾಮದಲ್ಲಿ ಎಸ್ಡಿಎಂಸಿ ಸದಸ್ಯರು, ಶಿಕ್ಷಕರು ಮತ್ತು ಹಳೆಯ ವಿದ್ಯಾರ್ಥಿಗಳ ಸಹಕಾರದೊಂದಿಗೆ ಮನೆ ಮನೆಗೆ ಭೇಟಿ ನೀಡಿ, ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸಲು ಮನವೊಲಿಸಬೇಕು. ಶಾಲೆಗಳಲ್ಲಿ ಹಳೆಯ ವಿದ್ಯಾರ್ಥಿಗಳ ವಾಟ್ಸಾಪ್ ಗ್ರೂಪ್ಗಳ ಮೂಲಕ ಶಾಲಾ ಅಭಿವೃದ್ಧಿ ಮತ್ತು ದಾಖಲಾತಿ ಹೆಚ್ಚಿಸುವಲ್ಲಿ ಅವರ ನೆರವು ಪಡೆಯಬೇಕು. ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಯಾವುದೇ ತರಗತಿಗಳಿಗೆ ದಾಖಲಾತಿ ಮಾಡಿಕೊಳ್ಳಬೇಕು ಎಂದು ಮಧು ಬಂಗಾರಪ್ಪ ತಿಳಿಸಿದ್ದಾರೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…