ಬೆಂಗಳೂರು: ಕೆಎಸ್ ಆರ್ ಟಿಸಿಯಿಂದ ಪ್ರಯಾಣಿಸುವ ವೇಳೆ ಉಂಟಾಗುವಂತ ಬಸ್ ಅಪಘಾತ ಸಂದರ್ಭದಲ್ಲಿ ಸಾವನ್ನಪ್ಪುವಂತ ಸಾರ್ವಜನಿಕರಿಗೆ ನೀಡುತ್ತಿದ್ದಂತ ಪರಿಹಾರದ ಮೊತ್ತವನ್ನು ರೂ.3 ಲಕ್ಷದಿಂದ 10 ಲಕ್ಷಕ್ಕೆ ಹೆಚ್ಚಳ ಮಾಡಿ ಆದೇಶಿಸಲಾಗಿದೆ.
ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳು ಅಪಘಾತಕ್ಕೀಡಾದಾಗ, ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ದುರದೃಷ್ಟವಶಾತ್ ಮೃತಪಟ್ಟಲ್ಲಿ, ಮೃತ ಪ್ರಯಾಣಿಕರ ಅವಲಂಬಿತರಿಗೆ ಹೆಚ್ಚಿನ ಆರ್ಥಿಕ ನೆರವು ನೀಡುವ ಸದ್ದುದೇಶವಾಗಿದೆ.
ಹೀಗಾಗಿ ಪ್ರಯಾಣಿಕರ ಅಪಘಾತ ಪರಿಹಾರ ನಿಧಿ ಟ್ರಸ್ಟ್ ವತಿಯಿಂದ ಪ್ರಸ್ತುತ ನೀಡಲಾಗುತ್ತಿರುವ ಆರ್ಥಿಕ ಪರಿಹಾರ ಮೊತ್ತವನ್ನು ರೂ.3,00,000/-(ರೂ.ಮೂರು ಲಕ್ಷ ಮಾತ್ರ) ದಿಂದ ರೂ.10,00,000/-(ರೂ.ಹತ್ತು ಲಕ್ಷ ಮಾತ್ರ) ಗಳಿಗೆ ದಿನಾಂಕ:01-01-2024 ರಿಂದ ಜಾರಿಗೆ ಬರುವಂತೆ ಹೆಚ್ಚಿಸಲಾಗಿದೆ ಎಂದಿದ್ದಾರೆ.
ಮೃತರ ಅವಲಂಬಿತರಿಗೆ ಹೆಚ್ಚುವರಿ ಪರಿಹಾರ ಮೊತ್ತವನ್ನು ನೀಡುವ ಸಲುವಾಗಿ ರೂ.50.00 ರಿಂದ ರೂ.99.00 ರವರೆಗಿನ ಮುಖ ಬೆಲೆಯ ಟಿಕೇಟ್ ಪಡೆದು ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವ ಪ್ರತಿ ಪ್ರಯಾಣಿಕರಿಂದ ತಲಾ ರೂ.1.00 (ರೂ.ಒಂದು ಮಾತ್ರ) ಮತ್ತು ರೂ.100.00 ಹಾಗೂ ಹೆಚ್ಚಿನ ಬೆಲೆಯ ಟಿಕೇಟ್ ಪಡೆದು ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವ ಪ್ರತಿ ಪ್ರಯಾಣಿಕರಿಂದ ತಲಾ ರೂ.2.00 ರಂತೆ (ರೂ.ಎರಡು ಮಾತ್ರ) ಅಪಘಾತ ಪರಿಹಾರ ನಿಧಿ ವಂತಿಕೆ ಸಂಗ್ರಹಣೆಯನ್ನೂ ಸಹ ದಿನಾಂಕ:01-01-2024 ರಿಂದ ಆಕರಿಸಲಾಗುವುದು ಎಂದು ತಿಳಿಸಿದ್ದಾರೆ.
ಈ ಹಿಂದೆ ರೂ.100 ಮುಖ ಬೆಲೆಯ ಟಿಕೇಟ್ ಪಡೆದು ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಂದ ರೂ.1.00 ಅಪಘಾತ ಪರಿಹಾರ ನಿಧಿ ವಂತಿಕೆ ಸಂಗ್ರಹಣೆ ಮಾಡಲಾಗುತ್ತಿತ್ತು. ರೂ.1.00 ರಿಂದ ರೂ.49.00 ರವರೆಗಿನ ಮುಖ ಬೆಲೆಯ ಟಿಕೇಟ್ ಪಡೆದು ಪ್ರಯಾಣಿಸುವ ಪ್ರಯಾಣಿಕರಿಗೆ ಯಾವುದೇ ಅಪಘಾತ ಪರಿಹಾರ ನಿಧಿ ವಂತಿಕೆ ಇರುವುದಿಲ್ಲ ಎಂದಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್ಆರ್ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…
ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್ಮ್ಯಾನ್ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…
ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…