ರಾಜ್ಯ

ಅಪಘಾತದಲ್ಲಿ ಸಾವನಪ್ಪಿದವರಿಗೆ ನೀಡುವ ಪರಿಹಾರ ಮೊತ ಹೆಚ್ಚಳ: ರಾಮಲಿಂಗಾ ರೆಡ್ಡಿ

ಬೆಂಗಳೂರು: ಕೆಎಸ್ ಆರ್ ಟಿಸಿಯಿಂದ ಪ್ರಯಾಣಿಸುವ ವೇಳೆ ಉಂಟಾಗುವಂತ ಬಸ್ ಅಪಘಾತ ಸಂದರ್ಭದಲ್ಲಿ ಸಾವನ್ನಪ್ಪುವಂತ ಸಾರ್ವಜನಿಕರಿಗೆ ನೀಡುತ್ತಿದ್ದಂತ ಪರಿಹಾರದ ಮೊತ್ತವನ್ನು ರೂ.3 ಲಕ್ಷದಿಂದ 10 ಲಕ್ಷಕ್ಕೆ ಹೆಚ್ಚಳ ಮಾಡಿ ಆದೇಶಿಸಲಾಗಿದೆ.

ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳು ಅಪಘಾತಕ್ಕೀಡಾದಾಗ, ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ದುರದೃಷ್ಟವಶಾತ್ ಮೃತಪಟ್ಟಲ್ಲಿ, ಮೃತ ಪ್ರಯಾಣಿಕರ ಅವಲಂಬಿತರಿಗೆ ಹೆಚ್ಚಿನ ಆರ್ಥಿಕ ನೆರವು ನೀಡುವ ಸದ್ದುದೇಶವಾಗಿದೆ.

ಹೀಗಾಗಿ ಪ್ರಯಾಣಿಕರ ಅಪಘಾತ ಪರಿಹಾರ ನಿಧಿ ಟ್ರಸ್ಟ್ ವತಿಯಿಂದ ಪ್ರಸ್ತುತ ನೀಡಲಾಗುತ್ತಿರುವ ಆರ್ಥಿಕ ಪರಿಹಾರ ಮೊತ್ತವನ್ನು ರೂ.3,00,000/-(ರೂ.ಮೂರು ಲಕ್ಷ ಮಾತ್ರ) ದಿಂದ ರೂ.10,00,000/-(ರೂ.ಹತ್ತು ಲಕ್ಷ ಮಾತ್ರ) ಗಳಿಗೆ ದಿನಾಂಕ:01-01-2024 ರಿಂದ ಜಾರಿಗೆ ಬರುವಂತೆ ಹೆಚ್ಚಿಸಲಾಗಿದೆ ಎಂದಿದ್ದಾರೆ.

ಮೃತರ ಅವಲಂಬಿತರಿಗೆ ಹೆಚ್ಚುವರಿ ಪರಿಹಾರ ಮೊತ್ತವನ್ನು ನೀಡುವ ಸಲುವಾಗಿ ರೂ.50.00 ರಿಂದ ರೂ.99.00 ರವರೆಗಿನ ಮುಖ ಬೆಲೆಯ ಟಿಕೇಟ್ ಪಡೆದು ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವ ಪ್ರತಿ ಪ್ರಯಾಣಿಕರಿಂದ ತಲಾ ರೂ.1.00 (ರೂ.ಒಂದು ಮಾತ್ರ) ಮತ್ತು ರೂ.100.00 ಹಾಗೂ ಹೆಚ್ಚಿನ ಬೆಲೆಯ ಟಿಕೇಟ್ ಪಡೆದು ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವ ಪ್ರತಿ ಪ್ರಯಾಣಿಕರಿಂದ ತಲಾ ರೂ.2.00 ರಂತೆ (ರೂ.ಎರಡು ಮಾತ್ರ) ಅಪಘಾತ ಪರಿಹಾರ ನಿಧಿ ವಂತಿಕೆ ಸಂಗ್ರಹಣೆಯನ್ನೂ ಸಹ ದಿನಾಂಕ:01-01-2024 ರಿಂದ ಆಕರಿಸಲಾಗುವುದು ಎಂದು ತಿಳಿಸಿದ್ದಾರೆ.

ಈ‌ ಹಿಂದೆ ರೂ.100 ಮುಖ ಬೆಲೆಯ ಟಿಕೇಟ್ ಪಡೆದು ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಂದ ರೂ.1.00 ಅಪಘಾತ ಪರಿಹಾರ ನಿಧಿ ವಂತಿಕೆ ಸಂಗ್ರಹಣೆ ಮಾಡಲಾಗುತ್ತಿತ್ತು. ರೂ.1.00 ರಿಂದ ರೂ.49.00 ರವರೆಗಿನ ಮುಖ ಬೆಲೆಯ ಟಿಕೇಟ್ ಪಡೆದು ಪ್ರಯಾಣಿಸುವ ಪ್ರಯಾಣಿಕರಿಗೆ ಯಾವುದೇ ಅಪಘಾತ ಪರಿಹಾರ ನಿಧಿ ವಂತಿಕೆ ಇರುವುದಿಲ್ಲ ಎಂದಿದ್ದಾರೆ.

andolanait

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

7 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

9 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

9 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

10 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

11 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

11 hours ago