ರಾಜ್ಯ

ಅಪಘಾತದಲ್ಲಿ ಸಾವನಪ್ಪಿದವರಿಗೆ ನೀಡುವ ಪರಿಹಾರ ಮೊತ ಹೆಚ್ಚಳ: ರಾಮಲಿಂಗಾ ರೆಡ್ಡಿ

ಬೆಂಗಳೂರು: ಕೆಎಸ್ ಆರ್ ಟಿಸಿಯಿಂದ ಪ್ರಯಾಣಿಸುವ ವೇಳೆ ಉಂಟಾಗುವಂತ ಬಸ್ ಅಪಘಾತ ಸಂದರ್ಭದಲ್ಲಿ ಸಾವನ್ನಪ್ಪುವಂತ ಸಾರ್ವಜನಿಕರಿಗೆ ನೀಡುತ್ತಿದ್ದಂತ ಪರಿಹಾರದ ಮೊತ್ತವನ್ನು ರೂ.3 ಲಕ್ಷದಿಂದ 10 ಲಕ್ಷಕ್ಕೆ ಹೆಚ್ಚಳ ಮಾಡಿ ಆದೇಶಿಸಲಾಗಿದೆ.

ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳು ಅಪಘಾತಕ್ಕೀಡಾದಾಗ, ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ದುರದೃಷ್ಟವಶಾತ್ ಮೃತಪಟ್ಟಲ್ಲಿ, ಮೃತ ಪ್ರಯಾಣಿಕರ ಅವಲಂಬಿತರಿಗೆ ಹೆಚ್ಚಿನ ಆರ್ಥಿಕ ನೆರವು ನೀಡುವ ಸದ್ದುದೇಶವಾಗಿದೆ.

ಹೀಗಾಗಿ ಪ್ರಯಾಣಿಕರ ಅಪಘಾತ ಪರಿಹಾರ ನಿಧಿ ಟ್ರಸ್ಟ್ ವತಿಯಿಂದ ಪ್ರಸ್ತುತ ನೀಡಲಾಗುತ್ತಿರುವ ಆರ್ಥಿಕ ಪರಿಹಾರ ಮೊತ್ತವನ್ನು ರೂ.3,00,000/-(ರೂ.ಮೂರು ಲಕ್ಷ ಮಾತ್ರ) ದಿಂದ ರೂ.10,00,000/-(ರೂ.ಹತ್ತು ಲಕ್ಷ ಮಾತ್ರ) ಗಳಿಗೆ ದಿನಾಂಕ:01-01-2024 ರಿಂದ ಜಾರಿಗೆ ಬರುವಂತೆ ಹೆಚ್ಚಿಸಲಾಗಿದೆ ಎಂದಿದ್ದಾರೆ.

ಮೃತರ ಅವಲಂಬಿತರಿಗೆ ಹೆಚ್ಚುವರಿ ಪರಿಹಾರ ಮೊತ್ತವನ್ನು ನೀಡುವ ಸಲುವಾಗಿ ರೂ.50.00 ರಿಂದ ರೂ.99.00 ರವರೆಗಿನ ಮುಖ ಬೆಲೆಯ ಟಿಕೇಟ್ ಪಡೆದು ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವ ಪ್ರತಿ ಪ್ರಯಾಣಿಕರಿಂದ ತಲಾ ರೂ.1.00 (ರೂ.ಒಂದು ಮಾತ್ರ) ಮತ್ತು ರೂ.100.00 ಹಾಗೂ ಹೆಚ್ಚಿನ ಬೆಲೆಯ ಟಿಕೇಟ್ ಪಡೆದು ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವ ಪ್ರತಿ ಪ್ರಯಾಣಿಕರಿಂದ ತಲಾ ರೂ.2.00 ರಂತೆ (ರೂ.ಎರಡು ಮಾತ್ರ) ಅಪಘಾತ ಪರಿಹಾರ ನಿಧಿ ವಂತಿಕೆ ಸಂಗ್ರಹಣೆಯನ್ನೂ ಸಹ ದಿನಾಂಕ:01-01-2024 ರಿಂದ ಆಕರಿಸಲಾಗುವುದು ಎಂದು ತಿಳಿಸಿದ್ದಾರೆ.

ಈ‌ ಹಿಂದೆ ರೂ.100 ಮುಖ ಬೆಲೆಯ ಟಿಕೇಟ್ ಪಡೆದು ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಂದ ರೂ.1.00 ಅಪಘಾತ ಪರಿಹಾರ ನಿಧಿ ವಂತಿಕೆ ಸಂಗ್ರಹಣೆ ಮಾಡಲಾಗುತ್ತಿತ್ತು. ರೂ.1.00 ರಿಂದ ರೂ.49.00 ರವರೆಗಿನ ಮುಖ ಬೆಲೆಯ ಟಿಕೇಟ್ ಪಡೆದು ಪ್ರಯಾಣಿಸುವ ಪ್ರಯಾಣಿಕರಿಗೆ ಯಾವುದೇ ಅಪಘಾತ ಪರಿಹಾರ ನಿಧಿ ವಂತಿಕೆ ಇರುವುದಿಲ್ಲ ಎಂದಿದ್ದಾರೆ.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

4 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

4 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

4 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

4 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

5 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

5 hours ago