ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಹಾಗೂ ರೂಪಾಂತರ ವೈರಸ್ JN.1 ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದೆ. ಜನವರಿ ಮಧ್ಯಭಾಗದಲ್ಲಿ ಇನ್ನಷ್ಟು ಪ್ರಕರಣಗಳು ಹೆಚ್ಚಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಮುನ್ನೆಚ್ಚರಿಕಾ ಕ್ರಮವಾಗಿ ವ್ಯಾಕ್ಸಿನ್ ಆರಂಭಿಸಲು ನಿರ್ಧರಿಸಿದೆ.
ಜನವರಿ 2ರಿಂದ ರಾಜ್ಯಾದ್ಯಂತ ಮತ್ತೆ ಕೋವಿಡ್ ವ್ಯಾಕ್ಸಿನ್ ಅಭಿಯಾನ ಆರಂಭವಾಗಲಿದೆ. ರಾಜ್ಯದಲ್ಲಿ ಉಚಿತ ಕೋರ್ಬಿವ್ಯಾಕ್ಸಿನ್ ನೀಡಲು ಸರ್ಕಾರ ನಿರ್ಧರಿಸಿದೆ. ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ರಾಜ್ಯ ಸರ್ಕಾರ ವ್ಯಾಕ್ಸಿನ್ ಅಭಿಯಾನ ಆರಂಭಿಸುತ್ತಿದೆ.’
ಈಗಾಗಲೇ ರಾಜ್ಯದಲ್ಲಿ ಮೊದಲ ಮತ್ತು ಎರಡನೇ ಹಂತದ ಡೋಸ್ 100% ಪಡೆದಿದ್ದಾರೆ. ಆದರೆ ಪ್ರಿಕಾಶನರಿ ವ್ಯಾಕ್ಸಿನ್ ಶೇ.27 ಜನರು ಮಾತ್ರ ಪಡೆದಿದ್ದಾರೆ. ಸಧ್ಯ ರಾಜ್ಯದಲ್ಲಿ 1.5 ಕೋಟಿಗೂ ಹೆಚ್ಚು ಜನರು ಮೂರನೇ ಡೋಸ್ ವ್ಯಾಕ್ಸಿನ್ ತೆಗೆದುಕೊಂಡಿಲ್ಲ. ಹೀಗಾಗಿ ಈಗ ಮತ್ತೆ ಮುನ್ನೆಚ್ಚರಿಕಾ ಲಸಿಕೆ ನೀಡಲು ಆರೋಗ್ಯ ಇಲಾಖೆ ಮುಂದಾಗಿದೆ. ಪ್ರಾಥಮಿಕ ಹಂತದಲ್ಲಿ 30 ಸಾವಿರ ಕೋರ್ಬಿವ್ಯಾಕ್ಸಿನ್ ಲಸಿಕೆ ಖರೀದಿಗೆ ಸರ್ಕಾರ ಮುಂದಾಗಿದೆ.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…