ರಾಜ್ಯ

ಖಾಸಗಿ ಇಂಜಿನಿಯರಿಂಗ್‌ ಪ್ರವೇಶಾತಿ ಶುಲ್ಕ ಹೆಚ್ಚಳ

ಬೆಂಗಳೂರು: ಖಾಸಗಿ ಇಂಜಿನಿಯರಿಂಗ್‌ ಪ್ರವೇಶಾತಿ ಶುಲ್ಕವನ್ನು ಶೇ.10 ರಷ್ಟು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಶಾಕ್‌ ಕೊಟ್ಟಿದೆ.

ಖಾಸಗಿ, ಅನುದಾನ ರಹಿತ ತಾಂತ್ರಿಕ ಶಿಕ್ಷಣ ಸಂಸ್ಥೆಗಳ ಶುಲ್ಕ ಹೆಚ್ಚಳ ಮಾಡಲಾಗಿದ್ದು, ಈ ಮೂಲಕ ಹೆಚ್ಚುವರಿ ಶುಲ್ಕದಿಂದ ವಿದ್ಯಾರ್ಥಿಗಳಿಗೆ ಆರ್ಥಿಕ ಹೊರೆ ಹೆಚ್ಚಾಗಲಿದೆ.

ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌ ಮತ್ತು ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ್‌ ನೇತೃತ್ವದಲ್ಲಿ ಖಾಸಗಿ ಅನುದಾನಿತ, ಅನುದಾನರಹಿತ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಒಕ್ಕೂಟದ ಪದಾಧಿಕಾರಿಗಳೊಂದಿಗೆ ಶುಕ್ರವಾರ(ಜೂ.14) ನಡೆದ ಸಭೆಯಲ್ಲಿ ಈ ನಿರ್ಧಾರ ಮಾಡಲಾಗಿದೆ.

ಶುಲ್ಕವನ್ನು ಶೇ.15 ರಷ್ಟು ಹೆಚ್ಚಿಸಲು ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಒತ್ತಾಯಿಸಿತ್ತು. ಆದರೆ ಅಂತಿಮವಾಗಿ 2024-25 ನೇ ಸಾಲಿನ ಇಂಜಿನಿಯರಿಂಗ್‌, ಆರ್ಕಿಟೆಕ್ಚರ್‌ ಕಾಲೇಜು, ವೃತ್ತಿಪರ ಕೋರ್ಸ್‌ಗಳ ಶುಲ್ಕವನ್ನು ಶೇ.10 ಹೆಚ್ಚಿಸಲು ನಿರ್ಧರಿಸಲಾಯಿತು.

ಕಳೆದ ಶೈಕ್ಷಣಿಕ ಸಾಲಿನಲ್ಲಿ ಖಾಸಗಿ ಇಂಜಿನಿಯರಿಂಗ್‌ ಕಾಲೇಜು ಮತ್ತು ಡೀಮ್ಡ್‌ ವಿಶ್ವವಿದ್ಯಾಲಯಗಳಲ್ಲಿರುವ ಸರ್ಕಾರಿ ಕೋಟಾದ ಸೀಟುಗಳಿಗೂ ಪ್ರವೇಶಾತಿ ಶುಲ್ಕ ಶೇ.7 ಹೆಚ್ಚಳ ಮಾಡಲಾಗಿತ್ತು. ಸರ್ಕಾರಿ ಕಾಲೇಜುಗಳಲ್ಲಿ 40 ಸಾವಿರ ರೂ ಶುಲ್ಕ ಹೆಚ್ಚಿಸಲಾಗಿತ್ತು. ಸರ್ಕಾರಿ ಅನುದಾನಿತ ಇಂಜಿನಿಯರಿಂಗ್‌ ಕಾಲೇಜುಗಳ ಶುಲ್ಕ 67-68 ಸಾವಿರ ರೂ, ಖಾಸಗಿ ಇಂಜಿನಿಯರಿಂಗ್‌ ಕಾಲೇಜುಗಳ ಶುಲ್ಕ ಟೈಪ್‌ ಒಂದರಲ್ಲಿ 69 ಸಾವಿರ ಹಾಗೂ ಟೈಪ್‌ 2 ರಲ್ಲಿ 76 ಸಾವಿರ ರೂ ಹೆಚ್ಚಳ ಮಾಡಲಾಗಿತ್ತು. ಜೊತೆಗೆ ಡೀಮ್ಡ್‌ ಮತ್ತು ಖಾಸಗಿ ವಿವಿ ಖಾಸಗಿ ಕಾಲೇಜುಗಳ ಶುಲ್ಕ 1.69ಲಕ್ಷ ರೂ ಮಾಡಲಾಗಿತ್ತು.

ಇವೆಲ್ಲಾದರ ಹೊರತಾಗಿಯೂ ಖಾಸಗಿ ಕೋಟ ಸೀಟುಗಳಿಗೆ ಆಯಾ ಕಾಲೇಜುಗಳು ಮನ ಬಂದಷ್ಟು ಶುಲ್ಕ ಪಡೆಯುತ್ತಿದ್ದವು. ಕೆಲವೊಂದು ಪ್ರತಿಷ್ಠಿತಿ ಕಾಲೇಜುಗಳಲ್ಲಂತೂ ಇಂಜಿನಿಯರಿಂಗ್‌ ಸೀಟು ಪಡೆಯಲು 6 ರಿಂದ 7 ಲಕ್ಷ ರೂ ನೀಡಬೇಕಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

11 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

11 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

12 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

12 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

12 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

12 hours ago