ರಾಜ್ಯ

ಸೀಸನಲ್‌ ಫ್ಲೂ ಹೆಚ್ಚಳ : ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು : ರಾಜ್ಯದಲ್ಲಿ ಸೀಸನಲ್ ಫ್ಲೂ ಹೆಚ್ಚಳ ಆಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.

ಡಿಸೆಂಬರ್, ಜನವರಿಯಿಂದ ಮಾರ್ಚ್ ತನಕ ಸೀಸನಲ್ ಫ್ಲೂ ಹೆಚ್ಚಳದ ಭೀತಿ ಇರುವ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲು ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಸೋಂಕಿತರ ಎಂಜಿಲಿನಿಂದ ಹರಡುವ ಸೋಂಕು ಇದಾಗಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ.

ಮಕ್ಕಳು, ಹಿರಿಯರು, ಗರ್ಭಿಣಿಯರು, ಕೋಮಾರ್ಬಿಟೀಸ್ ಪೇಶೆಂಟ್‌ಗಳಿಗೆ ಹೆಚ್ಚಿನ ಅಪಾಯ ಉಂಟಾಗುವ ಸಾಧ್ಯತೆಯಿದ್ದು, ಜ್ವರ, ಕೆಮ್ಮು, ಕೆಂಪು ಗುಳ್ಳೆ, ಹಸಿವು ಆಗದಿರುವುದು, ಮೈ-ಕೈ ನೋವು, ಶೀತ, ಒಣ ಕೆಮ್ಮು ಇದರ ಪ್ರಮುಖ ಗುಣ ಲಕ್ಷಣಗಳಾಗಿವೆ. ಸೀಸನಲ್ ಫ್ಲೂ ಸಾಮಾನ್ಯವಾಗಿ ಒಂದು ವಾರ ಕಾಲ ಇರುತ್ತದೆ. ಕೆಲವೊಂದು ಸಲ ೩ ವಾರಗಳ ಕಾಲ ಇರಲಿದೆ. ಹೀಗಾಗಿ ಎಲ್ಲಾ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಕ್ರಮ ವಹಿಸಲು ಸೂಚನೆ ನೀಡಲಾಗಿದೆ.

ಇದನ್ನು ಓದಿ: ಕರ್ನಾಟಕದಲ್ಲಿ ಮೈಕೊರೆಯುವ ಚಳಿ : 7ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ಸೀಸನಲ್ ಫ್ಲೂ ಲಕ್ಷಣಗಳು
ಆರೋಗ್ಯ ತಜ್ಞರ ಪ್ರಕಾರ, ಸೀಸನಲ್ ಫ್ಲೂನ ಪ್ರಮುಖ ಲಕ್ಷಣಗಳಲ್ಲಿ ಜ್ವರ, ಕೆಮ್ಮು, ಶೀತ, ಒಣ ಕೆಮ್ಮು, ಮೈ-ಕೈ ನೋವು, ತಲೆನೋವು, ಹಸಿವು ಕಡಿಮೆಯಾಗುವುದು ಸೇರಿವೆ. ಸಾಮಾನ್ಯವಾಗಿ ಈ ಸೋಂಕು ಒಂದು ವಾರದೊಳಗೆ ನಿಯಂತ್ರಣಕ್ಕೆ ಬರಬಹುದು, ಕೆಲವರಲ್ಲಿ ಇದು ೨-೩ ವಾರಗಳವರೆಗೂ ಮುಂದುವರಿಯುವ ಸಾಧ್ಯತೆ ಇದೆ. ಲಕ್ಷಣಗಳು ತೀವ್ರವಾಗಿದ್ದರೆ ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಅತ್ಯಗತ್ಯವಾಗಿದೆ.

ಸೂಚನೆಗಳು ಏನು?
*ಐಎಲ್‌ಐ, ಸಾರಿ ಪ್ರಕರಣಗಳ ಬಗ್ಗೆ ಗಮನ ಹರಿಸಲು ಸೂಚನೆ
* ಪ್ರತಿ ದಿನ ಕನಿಷ್ಠ ೫ರಷ್ಟು ಐಎಲ್‌ಐ ಕೇಸ್, ೧೦೦ರಷ್ಟು ಸಾರಿ ಕೇಸ್‌ಗಳ ಪರೀಕ್ಷೆ ಮಾಡಬೇಕು
*ಎಲ್ಲಾ ಪ್ರಯೋಗಾಲಯಗಳಲ್ಲಿ ಸೂಕ್ತ ಟೆಸ್ಟಿಂಗ್ ಕಿಟ್ ಇರಿಸಿಕೊಳ್ಳಲು ಸೂಚನೆ
*ಅಗತ್ಯ ಔಷಧಗಳ ಶೇಖರಣೆ, ಪಿಪಿಇ ಕಿಟ್ ಗಳು, ಎನ್೯೫ ಮಾಸ್ಕ್ ಸೇರಿ ಅಗತ್ಯ ಔಷಧಗಳ ಶೇಖರಣೆಗೆ ಸೂಚನೆ
*ಮಾತ್ರೆಗಳನ್ನು ದಾಸ್ತಾನ ಮಾಡಿ ಅಗತ್ಯಕ್ಕೆ ತಕ್ಕಂತೆ ಪ್ರಿಸ್ಕ್ರೈಬ್ ಮಾಡಬೇಕು
* ಇನ್-ಯೆನ್ಜಾ ಲಸಿಕೆ ಶೇಖರಣೆ, ಹೆಲ್ತ್ ಕೇರ್ ವರ್ಕರ್ಸ್, ಗರ್ಭಿಣಿಯರು, ಹೈ ರಿಸ್ಕ್ ರೋಗಿಗಳು ಸೂಕ್ತ ಲಸಿಕೆ ಪಡೆಯುವಂತೆ ಸಲಹೆ
*ಕ್ಲಿನಿಕಲ್ ಮ್ಯಾನೇಜ್ಮೆಂಟ್ ಹಾಗೂ ಕ್ರಿಟಿಕಲ್ ಕೇರ್ ಸಿದ್ಧತೆ, ವೆಂಟಿಲೇಟರ್‌ಗಳ ಸಿದ್ಧತೆಗೆ ಸಲಹೆ
ಕಮ್ಯುನಿಟಿ ಅವೇರ್ನೆಸ್, ರಿಯಲ್ ಟೈಮ್ ಮಾನಿಟರಿಂಗ್ ನಡೆಸುವಂತೆ ಸಲಹೆ

ಆಂದೋಲನ ಡೆಸ್ಕ್

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

9 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

9 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

9 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

9 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

21 hours ago