ರಾಜ್ಯ

ರಾಜ್ಯದಲ್ಲಿ ಹೆಚ್ಚಾದ ಮದ್ಯ ಸೇವನೆ: ಸರ್ಕಾರಕ್ಕೆ ಭಾರಿ ಆದಾಯ

ಬೆಂಗಳೂರು:  ಕರ್ನಾಟಕದಲ್ಲಿ ‘ಮದ್ಯ’ ಸೇವನೆ ಹೆಚ್ಚಳವಾಗಿದ್ದು, ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಭರ್ಜರಿ ಆದಾಯ ಹರಿದು ಬಂದಿದೆ.

ಹೌದು, ಬಿಯರ್ ಜೊತೆಗೆ ಇತರೆ ಮಾದರಿಯ ಮದ್ಯ ಮಾರಾಟದ ಪ್ರಮಾಣ 0.43 ಶೇ. ಹೆಚ್ಚಳವಾಗಿದ್ದು, ಗ್ಯಾರಂಟಿ ಯೋಜನೆಗಳನ್ನು ನೀಡಿ ಬೇರೆ ಯೋಜನೆಗಳಿಗೆ ಹಣ ನೀಡಲು ಕಷ್ಟಪಡುತ್ತಿದ್ದ ಸರ್ಕಾರಕ್ಕೆ ಮದ್ಯ ಪ್ರಿಯರು ಬೂಸ್ಟ್ ನೀಡಿದ್ದಾರೆ.

ಮದ್ಯ ದರ ಏರಿಕೆಯಾದರೂ ತಲೆ ಕೆಡಿಸಿಕೊಳ್ಳದ ಮದ್ಯ ಪ್ರಿಯರು ಕುಡಿಯುವದನ್ನು ಕಡಿಮೆ ಮಾಡಲಿಲ್ಲ. ಕಳೆದ ವರ್ಷ ದಿನಕ್ಕೆ 80 ಕೋಟಿ ರೂ. ಸರಾಸರಿ ಆದಾಯ ಬರುತ್ತಿತ್ತು.ಈಗ ಒಂದು ದಿನಕ್ಕೆ 90 ಕೋಟಿ ರೂ,ಗೆ ಏರಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಅದರಲ್ಲಿಯೂ ಚಳಿಗಾಲ ಶುರುವಾಗ್ತಿದ್ದಂತೆ ರಾಜ್ಯದಲ್ಲಿ ಬಿಯರ್ ಗೆ ಭಾರೀ ಬೇಡಿಕೆ ಬಂದಿದ್ದು, ನವೆಂಬರ್ನಲ್ಲಿ ಬರೋಬ್ಬರಿ 6 ಲಕ್ಷ ಬಿಯರ್ ಬಾಕ್ಸ್ಗಳು ಸೇಲ್ ಆಗಿದೆ ಎಂದು ಮೂಲಗಳು ತಿಳಿಸಿದೆ.

ಕಳೆದ ವರ್ಷ ನವೆಂಬರ್ ತಿಂಗಳಲ್ಲಿ 29.95 ಲಕ್ಷ ಬಾಕ್ಸ್ ಸೇಲ್ ಆಗಿದ್ರೆ , ಈ ವರ್ಷ ನವೆಂಬರ್ ನಲ್ಲಿ 35.05 ಲಕ್ಷ ಬಾಕ್ಸ್ ಮಾರಾಟವಾಗಿದೆ. 2023 ನವೆಂಬರ್ ನಲ್ಲಿ 2,855 ಕೋಟಿ ರೂ. ಆದಾಯ ಬಂದಿದೆ.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

11 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

11 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

11 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

11 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

11 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

11 hours ago