ರಾಜ್ಯ

ನವೆಂಬರ್‌-ಡಿಸೆಂಬರ್‌ ನಲ್ಲಿ ಹೆಚ್ಚಾದ ಮಾನವ-ಹುಲಿ ಸಂಘರ್ಷ

ಹಳೇ ಮೈಸೂರು ಭಾಗದಲ್ಲಿ ಅದರಲ್ಲೂ ಪ್ರಮುಖವಾಗಿ ಮೈಸೂರು, ಚಾಮರಾಜನಗರ ಭಾಗಗಳಲ್ಲಿ ಚಳಿಗಾಲ ಆರಂಭದಲ್ಲಿಯೇ ಮಾನವ-ಪ್ರಾಣಿ ಸಂಘರ್ಷ ಹೆಚ್ಚಾಗಿದೆ. ವರ್ಷದ ಕೊನೆಯಲ್ಲಿ ಉಳಿದ ತಿಂಗಳುಗಳಿಗಿಂತ ಸಂಘರ್ಷಗಳ ಸಂಖ್ಯೆ ಏರಿಕೆ ಕಂಡಿದೆ. ಕಾಡಂಚಿನ ಗ್ರಾಮಗಳಲ್ಲಿನ ಜಾನುವಾರುಗಳು, ಮಾನವರ ಮೇಲೆ ದಾಳಿ ನಡೆಯುತ್ತಿದ್ದು, ಮಾನವ-ಪ್ರಾಣಿ ಸಂಘರ್ಷ ಮಾಹಿತಿ ಇಲ್ಲಿದೆ.

ನ.2ರಂದು ಬಂಡೀಪುರದ ಹೆಡಿಯಾಲ ಓಂಕಾರ ವಲಯದ ಮಹಾದೇವನಗರಲ್ಲಿ ರೈತನ ಮೇಲೆ ಹುಲಿ ದಾಳಿ ನಡೆಸಿತು. ರೊಚ್ಚಿಗೆದ್ದ ರೈತರು ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ನ.6ರಂದು ಕಾಡಬೇಗೂರು ಕಾಲೋನಿಯಲ್ಲಿ ಕೃಷಿಕ ಬಾಲಾಜಿ ನಾಯಕ ಎಂಬುವರನ್ನು ಹುಲಿ ಕೊಂದುಹಾಕಿತ್ತು..

ನ.24ರಂದು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದಲ್ಲಿ ಗಾಯಗೊಂಡಿದ್ದ ಗಂಡು ಹುಲಿಯೊಂದು ಮೃತಪಟ್ಟಿದೆ.

ನ.24ರಂದು ನಂಜನಗೂಡು ತಾಲೂಕಿನ ಬಳ್ಳೂರು ಹುಂಡಿ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ ದನ ಮೇಯಿಸುತ್ತಿದ್ದ ರತ್ನಮ್ಮ (49) ಅವರ ಮೇಲೆ ಹುಲಿ ದಾಳಿ ನಡೆಸಿ ಬಲಿ ತೆಗೆದುಕೊಂಡಿತ್ತು.

ನ.28ರಂದು ಬಂಡೀಪುರದ ಹೆಡಿಯಾಲ ಓಂಕಾರ ವಲಯದಲ್ಲಿ ದನಗಾಯಿ ಮಹಿಳೆಯನ್ನು ಬಲಿ ಪಡೆದಿದ್ದ ಹುಲಿಯನ್ನ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದರು.

ನ.29ರಂದು ಮೈಸೂರು ತಾಲೂಕಿನಲ್ಲೂ ಹುಲಿ ಕಾಣಿಸಿಕೊಂಡಿತ್ತು. ಸೆರೆಗೆ ಸತತವಾಗಿ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸುತ್ತಿದೆ.

ಡಿ.6ರಿಂದ ನಾಗರಹೊಳೆ ಕಾಡಂಚಿನ ಶೆಟ್ಟಿಹಳ್ಳಿ ನೇಗತ್ತೂರು ಗ್ರಾಮದ ಬಳಿ ಹುಲಿ ಕಂಡಿದ್ದು, ಕಾಡಿಗಟ್ಟುವ ಕೆಲಸ ನಡೆಯುತ್ತಿದೆ.

ಡಿ.8 ಕೊತ್ತಲವಾಡಿ ಗ್ರಾಮದ ಕಂದಾಯ ಇಲಾಖೆ ಜಮೀನಿನ ಪೊದೆಯೊಂದರಲ್ಲಿ ಎರಡು ಹುಲಿಗಳ ಕಳೇಬರ ಪತ್ತೆಯಾಗಿತ್ತು.

ಡಿ.12ರಂದು ಗುಂಡ್ಲುಪೇಟೆ ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ಆಡಿನ ಕಣಿವೆ ಗ್ರಾಮದ ಬಸವಯ್ಯ (55) ನನ್ನು ಕೊಂದು ಹಾಕಿತ್ತು.

2022ರ ನವೆಂಬರ್‌-ಡಿಸೆಂಬರ್‌ ಹುಲಿ ದಾಳಿಗಳು.
ನವೆಂಬರ್‌ 8, 2022: ಹಸುವೊಂದು ಮೇವು ಮೇಯುವಾಗ ದಾಳಿ ಮಾಡಿ ಬಲಿ ತೆಗೆದುಕೊಂಡ ಘಟನೆ ಹನಗೋಡು ಸಮೀಪದ ಬಿ ಆರ್ ಕಾವಲು ಅರಣ್ಯದಲ್ಲಿ ನಡೆದಿತ್ತು. ಗೌಡಿಕೆರೆ ಗ್ರಾಮದ ಶೇಖರ್ ಎಂಬುವವರಿಗೆ ಸೇರಿದ ಹಸುವನ್ನು ಕೊಂದಿರುವ ಹುಲಿ ಸುಮಾರು ಅಂದಾಜು 200 ಮೀ. ನಷ್ಟು ಎಳೆದೊಯ್ದು ಬಿಟ್ಟು ಹೋಗಿತ್ತು.

ನವೆಂಬರ್‌ 22, 2022: ಕೊಡಗಿನ ಸ್ವಾತಿ ಕುಟ್ಟಯ್ಯ ಒಡೆತನದ ಕೊಟ್ಟಿಗೆಗೆ ನುಗ್ಗಿದ್ದ ಹುಲಿ ಹಸು ಮೇಲೆ ದಾಳಿ ನಡೆಸಿತ್ತು.

ಡಿಸೆಂಬರ್‌ 14, 2022: ಮೈಸೂರಿನ ಬಳ್ಳೂರು ಹುಂಡಿ ಬಳಿ ದನ ಮೇಯಿಸುತ್ತಿರುವಾಗ ಸ್ವಾಮಿ ದಾಸಯ್ಯ ಎಂಬುವವರ ಮೇಲೆ ಹುಲಿ ದಾಳಿ ನಡೆಸಿತ್ತು. ಈ ವೇಳೆ ಜತೆಗಿದ್ದ ದನಗಾಹಿಗಳಿಬ್ಬರು ಕಲ್ಲು ತೂರಿದ ಮೇಲೆ ಹುಲಿ ದಾಸಯ್ಯ ಅವರನ್ನು ಬಿಟ್ಟು ಹೋಗಿತ್ತು. ಆದರೆ ಪಂಜದಿಂದ ಹೊಡೆದು ತೀವ್ರವಾಗಿ ಗಾಯಗೊಳಿಸಿತ್ತು.

andolanait

Recent Posts

ಮಂಡ್ಯ: ಕನ್ನಡ ಶಾಲೆಗಳ ಉಳಿವಿಗೆ ಹೋರಾಟ: ವಾಟಾಳ್‌ ನಾಗರಾಜ್‌ ಬಂಧನ

ಮಂಡ್ಯ: ಜಿಲ್ಲೆಯ 1463 ಕನ್ನಡ ಶಾಲೆಗಳನ್ನು ಉಳಿಸಿ ಹಾಗೂ ಉಧ್ಯಮ ಶಾಲೆಗಳಿಗೆ ಅನುದಾನ ನೀಡಬೇಕೆಂದು ಆಗ್ರಹಿಸಿ ಮಂಡ್ಯ ನಗರದ ಸಂಜಯ…

14 mins ago

ಸಫಾರಿ ಸ್ಥಗಿತ, ಪುನರಾರಂಭ ಸಮರ್ಥಿಸಿಕೊಂಡ ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಕಳೆದ ನವೆಂಬರ್‌ನಲ್ಲಿ ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಸಫಾರಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿ, ಈಗ ಷರತ್ತುಬದ್ಧವಾಗಿ ಪುನಾರಂಭ ಮಾಡಿರುವುದನ್ನು ಅರಣ್ಯ,…

37 mins ago

ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವ: ಅದ್ಧೂರಿಯಾಗಿ ಜರುಗಿದ ಅಗ್ನಿ ಕುಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮ ದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ…

51 mins ago

ಕೊಡಗು| 13 ದಿನಗಳ ಅವಧಿಯಲ್ಲಿ ಕಾಡಾನೆ ದಾಳಿಗೆ ಮೂರನೇ ಬಲಿ: ಕಾಫಿ ಬೆಳೆಗಾರ ದಾರುಣ ಸಾವು

ಕೊಡಗು: ಕೊಡಗಿನಲ್ಲಿ ಕಾಡಾನೆ - ಮಾನವ ಸಂಘರ್ಷ ಅವ್ಯಾಹತವಾಗಿ ಮುಂದುವರೆದಿದ್ದು ಕಾಫಿ ಬೆಳೆಗಾರರೊಬ್ಬರು ಹತರಾಗಿದ್ದಾರೆ. ವಿರಾಜಪೇಟೆ ತಾಲ್ಲೂಕಿನ ಹಳೇ ಸಿದ್ದಾಪುರದ…

1 hour ago

ಮಂಡ್ಯ ಕೋರ್ಟ್‌ಗೆ ಮತ್ತೆ ಬಾಂಬ್ ಬೆದರಿಕೆ : ಸ್ಥಳಕ್ಕೆ ಪೊಲೀಸ್-ಬಾಂಬ್ ಸ್ಕ್ವಾಡ್ ದೌಡು

ಮಂಡ್ಯ : ಮಂಡ್ಯ ಜಿಲ್ಲಾ ನ್ಯಾಯಾಲಯಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ ಬಂದಿದ್ದು, ಇ-ಮೇಲ್ ಮೂಲಕ “ಕೋರ್ಟ್‌ನಲ್ಲಿ ಬಾಂಬ್ ಇಟ್ಟಿದ್ದೇವೆ” ಎಂದು…

2 hours ago

ಯುದ್ಧ ನಿಲ್ಲಿಸಲು 3 ಷರತ್ತು ಮುಂದಿಟ್ಟ ಇರಾನ್‌!

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೆನ್ನಲ್ಲೇ ಅಮೆರಿಕಾ ಹಾಗೂ ಇಸ್ರೇಲ್ ಜೊತೆ ನಡೆಯುತ್ತಿರುವ ಸಂಘರ್ಷವನ್ನು ಅಂತ್ಯಗೊಳಿಸಲು…

2 hours ago