ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಏರಿಕೆಯ ಜೊತೆ ಜೊತೆಗೆ, ಕೊರೋನಾ ರೂಪಾಂತರಿ ಜೆಎನ್.1 ಆರ್ಭಟವೂ ಹೆಚ್ಚಾಗಿದೆ. ಕಳೆದ 24 ಗಂಟೆಯಲ್ಲಿ ಕರ್ನಾಟದಲ್ಲಿ 8 ಮಂದಿಗೆ ಜೆಎನ್.1 ಸೋಂಕು ದೃಢಪಟ್ಟಿದೆ.
ಈ ಕುರಿತಂತೆ INSACOG ದಿಂದ ವರದಿಯನ್ನು ಬಿಡುಗಡೆ ಮಾಡಿದ್ದು, ಕಳೆದ ಕೆಲವು ವಾರಗಳಿಂದ ಹಲವಾರು ರಾಜ್ಯಗಳು ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವನ್ನು ವರದಿ ಮಾಡುತ್ತಿವೆ.
ಒಂಬತ್ತು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಇಲ್ಲಿಯವರೆಗೆ ವೈರಸ್ನ ಜೆಎನ್ .1 ಉಪ-ರೂಪಾಂತರದ ಉಪಸ್ಥಿತಿಯನ್ನು ಪತ್ತೆ ಮಾಡಿವೆ ಎಂದು ಹೇಳಿದೆ.
ಕೇರಳ (83), ಗುಜರಾತ್ (34), ಗೋವಾ (18), ಕರ್ನಾಟಕ (8), ಮಹಾರಾಷ್ಟ್ರ (7), ರಾಜಸ್ಥಾನ (5), ತಮಿಳುನಾಡು (4), ತೆಲಂಗಾಣ (2) ಮತ್ತು ದೆಹಲಿ (1) ಈ ರಾಜ್ಯಗಳಾಗಿವೆ ಎಂದು ಭಾರತೀಯ ಸಾರ್ಸ್-ಕೋವ್-2 ಜೀನೋಮಿಕ್ಸ್ ಕನ್ಸೋರ್ಟಿಯಂ (ಐಎನ್ಎಸ್ಎಸಿಒಜಿ) ಎಂದು ಮಾಹಿತಿ ನೀಡಿದೆ.
ಡಿಸೆಂಬರ್ನಲ್ಲಿ ದೇಶದಲ್ಲಿ ದಾಖಲಾದ 145 ಕೋವಿಡ್ ಪ್ರಕರಣಗಳಲ್ಲಿ ಜೆಎನ್ .1 ಉಪಸ್ಥಿತಿ ಇದ್ದರೆ, ನವೆಂಬರ್ನಲ್ಲಿ ಅಂತಹ 17 ಪ್ರಕರಣಗಳು ಪತ್ತೆಯಾಗಿವೆ ಎಂದು ಇನ್ಸಾಕೋಗ್ನ ಅಂಕಿ ಅಂಶಗಳಿಂದ ತಿಳಿದು ಬಂದಿದೆ.
ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…
ಡಿಸೆಂಬರ್ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…
ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…
ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…