ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ ಗಣನೀಯ ಪರಿಣಾಮ ಬೀರುತ್ತಿದೆ.
ತಾಪಮಾನ ಏರಿಕೆಯಿಂದ ಹೀಟ್ ವೇವ್ ಮತ್ತು ಹೀಟ್ ಸ್ಟ್ರೋಕ್ ಅಪಾಯ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಈ ಅಪಾಯವನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಆರೋಗ್ಯ ಇಲಾಖೆ ಕೆಲವು ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಆದೇಶಿಸಿದೆ
ಜನರ ಆರೋಗ್ಯ ಕಾಪಾಡಲು ಹಾಗೂ ತುರ್ತು ಪರಿಸ್ಥಿತಿಯನ್ನು ಎದುರಿಸಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲು ಆರೋಗ್ಯ ಇಲಾಖೆ ಸೂಚನೆ ನೀಡಲಾಗಿದೆ.
ಜಿಲ್ಲೆ ಜಿಲ್ಲೆಯ ಆರೋಗ್ಯ ಅಧಿಕಾರಿಗಳಿಗೆ ವಿಶೇಷ ಮಾರ್ಗಸೂಚಿ ಕಳುಹಿಸಲಾಗಿದ್ದು ಅವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ತಿಳಿಸಲಾಗಿದೆ.
ಆರೋಗ್ಯ ಇಲಾಖೆ ನಿರ್ದೇಶನದ ಪ್ರಕಾರ, ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ Heat stroke Management Room ಸ್ಥಾಪನೆ ಕಡ್ಡಾಯವಾಗಿದೆ. ಈ ವಿಶೇಷ ಕೊಠಡಿಗಳು ಏಪ್ರಿಲ್.1 ರಿಂದ ಮೇ.31ರವರೆಗೆ ಸಕ್ರಿಯವಾಗಿರಬೇಕು. ಈ ಅವಧಿಯಲ್ಲಿ ಹೀಟ್ ಸ್ಟ್ರೋಕ್ ಸಂಬಂಧಿತ ಎಲ್ಲಾ ತುರ್ತು ಪ್ರಕರಣಗಳಿಗೆ ಇಲ್ಲಿಯೇ ತಕ್ಷಣ ಚಿಕಿತ್ಸೆ ನೀಡುವ ವ್ಯವಸ್ಥೆ ಇರಬೇಕು ಎಂದು ತಿಳಿಸಲಾಗಿದೆ.
ಇನ್ನು ಬೆಳಿಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಅಗತ್ಯವಿದ್ದರಷ್ಟೇ ಹೊರಗೆ ಬನ್ನಿ. ಬಾಯಾರಿಕೆಯಾಗದಿದ್ದರೂ ಆಗಾಗ್ಗೆ ನೀರು ಕುಡಿಯಿರಿ. ತಂಪು ಪಾನೀಯಗಳನ್ನು ಕುಡಿಯಿರಿ ಎಂದು ಸಲಹೆ ನೀಡಿದೆ.
೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…
ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…
‘ಸಪೋರ್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್ವೇ ಯೋಜನೆಗೆ ವೇಗ ದೊರೆತಿದೆ.…
ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…