ರಾಜ್ಯ

ಮಕ್ಕಳಲ್ಲಿ ಹೆಚ್ಚುತ್ತಿರುವ ಮೊಬೈಲ್‌ ಗೀಳು : ಡಿಜಿಟಲ್‌ ಲಾಕ್‌ ಪ್ರಯೋಗಕ್ಕೆ ಮುಂದಾದ ಸರ್ಕಾರ

ಬೆಂಗಳೂರು : ಮಕ್ಕಳಲ್ಲಿ ಹೆಚ್ಚುತ್ತಿರುವ ಮೊಬೈಲ್ ಗೀಳು ಕಡಿಮೆ ಮಾಡಿ, ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶದಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಇದೇ ಮೊದಲ ಬಾರಿಗೆ ಶಿಕ್ಷಣ ಇಲಾಖೆ ಮೊಬೈಲ್ ಸ್ವಿಚ್ ಆಫ್ ಹಾಗೂ ಟಿ.ವಿ. ಬಂದ್ ಮಾಡಿಸುವ ಡಿಜಿಟಲ್ ಲಾಕ್ ಪ್ರಯೋಗಕ್ಕೆ ಮುಂದಾಗಿದೆ.

ಸದ್ಯ ಇದನ್ನು ಹಾವೇರಿ ಜಿಲ್ಲೆಯಲ್ಲಿ ಮಾತ್ರ ಪ್ರಯೋಗಿಕವಾಗಿ ಜಾರಿ ಮಾಡಲಾಗಿದ್ದು,ಇಲ್ಲಿ ಬರುವ ಪರಿಣಾಮವನ್ನು ನೋಡಿಕೊಂಡು ಮುಂದಿನ ಕೆಲವೇ ದಿನಗಳಲ್ಲಿ ಹಂತ ಹಂತವಾಗಿ ರಾಜ್ಯದದ್ಯಾಂತ ಜಾರಿ ಮಡುವ ಯೋಜನೆಯನ್ನು ಶಿಕ್ಷಣ ಇಲಾಖೆ ಹಾಕಿಕೊಂಡಿದೆ.

ಪ್ರತಿ ದಿನ ಸಂಜೆ 7 ಗಂಟೆಯಿಂದ 9ರವರೆಗೆ ಎರಡು ಗಂಟೆ ಮೊಬೈಲ್ ಮತ್ತು ಟಿವಿ ಸ್ವಿಚ್ ಆಫ್ ಮಾಡಿಸುವಂತೆ ಸೂಚಿಸಿದೆ. ಪ್ರತಿ ಹಂತದಲ್ಲಿಯೂ ಪೋಷಕರಿಗೆ ಜಾಗೃತಿ ಮೂಡಿಸಬೇಕು. ಡಂಗೂರು ಬಾರಿಸಿ ಪೋಷಕರಿಗೆ ಜಾಗೃತಿ ಮಾಡಿಸುವಂತೆ ಸುತ್ತೋಲೆ ಹೊರಡಿಸಲಾಗಿದೆ.

ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿರುವ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳ ಓದಿಗೆ ಅನುಕೂಲ ಕಲ್ಪಿಸುವುದಕ್ಕಾಗಿ, ಪ್ರತಿ ಗ್ರಾಮದಲ್ಲಿಯೂ ನಿತ್ಯ ಸಂಜೆ 7 ಗಂಟೆಯಿಂದ ರಾತ್ರಿ 9 ಗಂಟೆಯವರೆಗೂ ಮೊಬೈಲ್ ಸ್ವಿಚ್ ಆಫ್ ಮಾಡುವಂತೆ ಹಾಗೂ ಟಿ.ವಿ. ಆಫ್ ಮಾಡುವಂತೆ ಢಂಗುರದ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿ’ ಎಂದು ಅಧಿಕಾರಿಗಳು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ (ಪಿಡಿಒ), ಕ್ಷೇತ್ರ ಶಿಕ್ಷಣಾಧಿಕಾರಿಗಳು ಪತ್ರ ಬರೆದಿದ್ದಾರೆ.

ಎಸ್‍ಎಸ್‍ಎಲ್‍ಸಿ ಓದುವ ಮಕ್ಕಳಿರುವ ಮನೆಗಳಲ್ಲಿ ಕಡ್ಡಾಯವಾಗಿ ಡಿಜಿಟಲ್ ಲಾಕ್ ಪ್ರಯೋಗ ಪಾಲಿಸುವಂತೆ ಕೋರಲಾಗುತ್ತಿದೆ.‘ಮುಂಬರುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಜಿಲ್ಲೆಯ ಮಕ್ಕಳ ಫಲಿತಾಂಶ ಸುಧಾರಣೆಗೆ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದೀಗ, ಡಿಜಿಟಲ್ ಲಾಕ್ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದೆ. ಈ ಬಗ್ಗೆ ಪಂಚಾಯಿತಿ ಅಧಿಕಾರಿಗಳಿಗೂ ಪತ್ರ ಬರೆಯಲಾಗಿದ್ದು, ಪ್ರಯೋಗಕ್ಕೆ ಕೈ ಜೋಡಿಸುವಂತೆ ಕೋರಲಾಗಿದೆ.

ಆಧುನಿಕ ಯುಗದಲ್ಲಿ ಮೊಬೈಲ್ ಹಾಗೂ ಟಿ.ವಿ. ಬಳಕೆ ಹೆಚ್ಚಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ಮನೆಯಲ್ಲಿ ಓದಲು ಆಗುತ್ತಿಲ್ಲ. ಓದಿಗೆ ಅಡೆತಡೆ ಉಂಟಾಗುತ್ತಿದೆ. ಮಕ್ಕಳ ಓದಿಗೆ ಸಹಕರಿಸಬೇಕಾದ ಜವಾಬ್ದಾರಿ ಪೋಷಕರ ಮೇಲಿದೆ. ಸಂಜೆ 7 ಗಂಟೆಯಿಂದ ರಾತ್ರಿ 9 ಗಂಟೆಯ ಅವಧಿಯಲ್ಲಿ ಪೋಷಕರು ಹಾಗೂ ಮನೆಯಲ್ಲಿರುವವರು ಮೊಬೈಲ್–ಟಿ.ವಿ. ಬಂದ್ ಮಾಡಿ, ಮಕ್ಕಳ ಓದಿಗೆ ಸಹಕರಿಸಬೇಕು’ ಎಂದು ಅವರು ಕೋರಲಾಗಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

2 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

2 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

2 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

2 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

2 hours ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

2 hours ago