ಬೆಂಗಳೂರು : ಮಕ್ಕಳಲ್ಲಿ ಹೆಚ್ಚುತ್ತಿರುವ ಮೊಬೈಲ್ ಗೀಳು ಕಡಿಮೆ ಮಾಡಿ, ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶದಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಇದೇ ಮೊದಲ ಬಾರಿಗೆ ಶಿಕ್ಷಣ ಇಲಾಖೆ ಮೊಬೈಲ್ ಸ್ವಿಚ್ ಆಫ್ ಹಾಗೂ ಟಿ.ವಿ. ಬಂದ್ ಮಾಡಿಸುವ ಡಿಜಿಟಲ್ ಲಾಕ್ ಪ್ರಯೋಗಕ್ಕೆ ಮುಂದಾಗಿದೆ.
ಸದ್ಯ ಇದನ್ನು ಹಾವೇರಿ ಜಿಲ್ಲೆಯಲ್ಲಿ ಮಾತ್ರ ಪ್ರಯೋಗಿಕವಾಗಿ ಜಾರಿ ಮಾಡಲಾಗಿದ್ದು,ಇಲ್ಲಿ ಬರುವ ಪರಿಣಾಮವನ್ನು ನೋಡಿಕೊಂಡು ಮುಂದಿನ ಕೆಲವೇ ದಿನಗಳಲ್ಲಿ ಹಂತ ಹಂತವಾಗಿ ರಾಜ್ಯದದ್ಯಾಂತ ಜಾರಿ ಮಡುವ ಯೋಜನೆಯನ್ನು ಶಿಕ್ಷಣ ಇಲಾಖೆ ಹಾಕಿಕೊಂಡಿದೆ.
ಪ್ರತಿ ದಿನ ಸಂಜೆ 7 ಗಂಟೆಯಿಂದ 9ರವರೆಗೆ ಎರಡು ಗಂಟೆ ಮೊಬೈಲ್ ಮತ್ತು ಟಿವಿ ಸ್ವಿಚ್ ಆಫ್ ಮಾಡಿಸುವಂತೆ ಸೂಚಿಸಿದೆ. ಪ್ರತಿ ಹಂತದಲ್ಲಿಯೂ ಪೋಷಕರಿಗೆ ಜಾಗೃತಿ ಮೂಡಿಸಬೇಕು. ಡಂಗೂರು ಬಾರಿಸಿ ಪೋಷಕರಿಗೆ ಜಾಗೃತಿ ಮಾಡಿಸುವಂತೆ ಸುತ್ತೋಲೆ ಹೊರಡಿಸಲಾಗಿದೆ.
ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿರುವ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಓದಿಗೆ ಅನುಕೂಲ ಕಲ್ಪಿಸುವುದಕ್ಕಾಗಿ, ಪ್ರತಿ ಗ್ರಾಮದಲ್ಲಿಯೂ ನಿತ್ಯ ಸಂಜೆ 7 ಗಂಟೆಯಿಂದ ರಾತ್ರಿ 9 ಗಂಟೆಯವರೆಗೂ ಮೊಬೈಲ್ ಸ್ವಿಚ್ ಆಫ್ ಮಾಡುವಂತೆ ಹಾಗೂ ಟಿ.ವಿ. ಆಫ್ ಮಾಡುವಂತೆ ಢಂಗುರದ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿ’ ಎಂದು ಅಧಿಕಾರಿಗಳು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ (ಪಿಡಿಒ), ಕ್ಷೇತ್ರ ಶಿಕ್ಷಣಾಧಿಕಾರಿಗಳು ಪತ್ರ ಬರೆದಿದ್ದಾರೆ.
ಎಸ್ಎಸ್ಎಲ್ಸಿ ಓದುವ ಮಕ್ಕಳಿರುವ ಮನೆಗಳಲ್ಲಿ ಕಡ್ಡಾಯವಾಗಿ ಡಿಜಿಟಲ್ ಲಾಕ್ ಪ್ರಯೋಗ ಪಾಲಿಸುವಂತೆ ಕೋರಲಾಗುತ್ತಿದೆ.‘ಮುಂಬರುವ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಯ ಮಕ್ಕಳ ಫಲಿತಾಂಶ ಸುಧಾರಣೆಗೆ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದೀಗ, ಡಿಜಿಟಲ್ ಲಾಕ್ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದೆ. ಈ ಬಗ್ಗೆ ಪಂಚಾಯಿತಿ ಅಧಿಕಾರಿಗಳಿಗೂ ಪತ್ರ ಬರೆಯಲಾಗಿದ್ದು, ಪ್ರಯೋಗಕ್ಕೆ ಕೈ ಜೋಡಿಸುವಂತೆ ಕೋರಲಾಗಿದೆ.
ಆಧುನಿಕ ಯುಗದಲ್ಲಿ ಮೊಬೈಲ್ ಹಾಗೂ ಟಿ.ವಿ. ಬಳಕೆ ಹೆಚ್ಚಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ಮನೆಯಲ್ಲಿ ಓದಲು ಆಗುತ್ತಿಲ್ಲ. ಓದಿಗೆ ಅಡೆತಡೆ ಉಂಟಾಗುತ್ತಿದೆ. ಮಕ್ಕಳ ಓದಿಗೆ ಸಹಕರಿಸಬೇಕಾದ ಜವಾಬ್ದಾರಿ ಪೋಷಕರ ಮೇಲಿದೆ. ಸಂಜೆ 7 ಗಂಟೆಯಿಂದ ರಾತ್ರಿ 9 ಗಂಟೆಯ ಅವಧಿಯಲ್ಲಿ ಪೋಷಕರು ಹಾಗೂ ಮನೆಯಲ್ಲಿರುವವರು ಮೊಬೈಲ್–ಟಿ.ವಿ. ಬಂದ್ ಮಾಡಿ, ಮಕ್ಕಳ ಓದಿಗೆ ಸಹಕರಿಸಬೇಕು’ ಎಂದು ಅವರು ಕೋರಲಾಗಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…
ಬೆಂಗಳೂರು: ನೀಟ್ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…
ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…
ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…
ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…