ರಾಜ್ಯ

ಪುರುಷರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ ; ಪುರುಷರ ಹಿತರಕ್ಷಣಾ ಸಮಿತಿ ಅಸ್ತಿತ್ವಕ್ಕೆ

ಮಂಡ್ಯ : ಆಧುನಿಕ ಜಗತ್ತಿನಲ್ಲಿ ಪುರುಷರ ಮೇಲಿನ ದೌರ್ಜನ್ಯ ಮತ್ತು ದಬ್ಬಾಳಿಗೆ ಹತ್ತಿಕ್ಕಲು ರಾಜ್ಯ ಮಾನವ ಹಕ್ಕುಗಳ ಪುರುಷರ ಹಿತರಕ್ಷಣಾ ಸಮಿತಿ ಅಸ್ತಿತ್ವಕ್ಕೆ ಬರುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಹೇಳಿದರು.

ನಗರದ ಪ್ರವಾಸಿಮಂದಿರದಲ್ಲಿ ಸಮಾನ ಮನಸ್ಕರು ಮತ್ತು ವಿವಿಧ ಸಂಘ-ಸಂಸ್ಥೆಗಳ ಮುಖಂಡರು-ವಿವಿಧ ಇಲಾಖೆಗಳ ನಿವೃತ್ತ ಅಧಿಕಾರಿಗಳ ಸಮ್ಮುಖದಲ್ಲಿ ಆಧುನಿಕ ಮಹಿಳೆಯರಿಂದ ಪುರುಷರ ಮೇಲಿನ ದೌರ್ಜನ್ಯ ಮತ್ತು ದಬ್ಬಾಳಿಕೆ ನಿಯಂತ್ರಣ ಮತ್ತು ಹೋರಾಟ ರೂಪಿಸುವ ಸಮಿತಿ ರಚನೆಯ ಪೂರ್ವಭಾವಿ ಸಭೆ ನಡೆದು ಹಲವು ನಿರ್ಣಯಗಳ ಕುರಿತು ಚರ್ಚಿಸಿದ ಬಳಿಕ ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಪುರುಷರ ಮೇಲಿನ ದೌರ್ಜನ್ಯಗಳನ್ನು ಗಂಭೀರವಾಗಿ ಯಾರೂ ಪರಿಗಣಿಸುತ್ತಿಲ್ಲ, ಈ ಕುರಿತು ಆಲೋಚನೆ ಮಾಡಿ ಸಫಲತೆ ಪಡೆಯಬೇಕಿದೆ, ಸಂಘಟನೆ ರಚನೆಗೊಳ್ಳಬೇಕಿದೆ ಎನ್ನುವ ಸುದೀರ್ಘ ಚರ್ಚೆ ನಡೆದಿದೆ. ಸಾಕಷ್ಟು ಮಂದಿ ಉತ್ತಮ ಸಲಹೆ ಅಭಿಪ್ರಾಯ-ಮಾರ್ಗಸೂಚನೆಗಳನ್ನು ನೀಡಿದ್ದಾರೆಂದು ತಿಳಿಸಿದರು.

ಸ್ವಾತಂತ್ರ ಬಂದ ನಂತರದಲ್ಲಿ ಹೆಣ್ಣುಮಕ್ಕಳಿಗೆ ಎಲ್ಲಾ ಕಾನೂನು ರಕ್ಷಣೆಗಳು ಹೆಚ್ಚಾಗಿವೆ, ಹಿಂದೆ ಪುರುಷರ ದೌರ್ಜನ್ಯ ಇತ್ತು, ಆ ನಂತರದ ದಿನಗಳಲ್ಲಿ ಸಾಕಷ್ಟು ಬದಲಾವಣೆಗಳು ಕಾನೂನಾತ್ಮಕವಾಗಿ ಬಂದವು. ಇದೀಗ ಕೆಲವು ಮಹಿಳೆಯರಿಂದ ತನ್ನ ಕೌಟುಂಬಿಕ ಜೀವನದಲ್ಲಿ ಪುರುಷರ ಮೇಲೆ ದೌರ್ಜನ್ಯಗಳು ನಡೆಯುತ್ತಿವೆ ಎಂದು ಎಚ್ಚರಿಸಿದರು.

ಪುರುಷರ ಮೇಲಿನ ದೌರ್ಜನ್ಯ ಜಗಜ್ಜಾಹಿರಾಗುವುದು ಸಾಮಾನ್ಯ. ಆದರೆ, ಹೆಣ್ಣು ಮಕ್ಕಳ ದೌರ್ಜನ್ಯ ಸಮಾಜಿಕವಾಗಿ ತೆರೆದುಕೊಳ್ಳುವುದು ಕಷ್ಟ, ಬಾಯಿಬಿಟ್ಟರೆ ಸಂಸಾರದ ಗುಟ್ಟು ರಟ್ಟು ಎನ್ನುವಂತಾಗಿದೆ ಪುರುಷರ ಪರಿಸ್ಥಿತಿಗಳು ಎಂದು ಅಭಿಪ್ರಾಯಪಟ್ಟರು.

ಬಳಿಕ ಮಾತನಾಡಿದ ಧ್ವನಿ ಲಯನ್ಸ್ ಸಂಸ್ಥೆ ಅಧ್ಯಕ್ಷೆ ಮತ್ತು ಕೌಟುಂಬಿಕ ಸಮಸ್ಯೆಗಳ ಸಮಾಲೋಚಕಿ ರಜನಿರಾಜ್, ಇತ್ತೀಚಿನ ದಿನಗಳಲ್ಲಿ ಕೌಟುಂಬಿಕ ಸಮಸ್ಯೆಗಳ ಸಾಲಿನಲ್ಲಿ ಪುರುಷರಿಗೆ ಆಗುತ್ತಿರುವ ದೌರ್ಜನ್ಯಗಳ ಪ್ರಕರಣ ಹೆಚ್ಚಾಗುತ್ತಿವೆ. ಮಹಿಳಾ ಆಯೋಗ ಇರುವಂತೆಯೇ ಪುರುಷ ಆಯೋಗ ರಚನೆಯಾಗಬೇಕಿದೆ ಎಂದು ಸಲಹೆ ನೀಡಿದರು.

ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೫ನೇ ಜನ್ಮದಿನಾಚರಣೆಯ ಸುದಿನದಲ್ಲಿ ಮಾನವ ಹಕ್ಕುಗಳ ಪುರುಷರ ಹಿತರಕ್ಷಣಾ ಸಮಿತಿ ಅಸ್ತಿತ್ವಕ್ಕೆ ಸಭೆ ನಡೆಯುತ್ತಿರುವುದು ಅವಿಸ್ಮರಣೀಯ. ಸಂಘಟನೆ ರೂಪುಗೊಂಡು ನೊಂದಣಿ ಮಾಡಿ, ನಂತರ ಹೋರಾಟ, ಸಮಾಲೋಚನೆ, ಕಾರ್ಯರೂಪಗಳ ಬಗ್ಗೆ ಚರ್ಚಿಸಸಲಾಗುವುದು ಎಂದು ತಿಳಿಸಿದರು.

ಪೊಲೀಸ್ ಇಲಾಖೆಯಲ್ಲಿ ಮಹಿಳಾ ಕುಂದುಕೊರತೆ ವಿಭಾಗ, ಮಹಿಳಾ ಠಾಣೆ ಇದೆ, ಎಲ್ಲಾ ಮಹಿಳಾ ಸಂಘಟನೆಗಳು ಮುಂಚೂಣಿಯಲ್ಲಿವೆ. ಪುರುಷರಿಗೆ ಯಾಕೆ ಇಷ್ಟು ರಕ್ಷಣಾತ್ಮಕ ಕಾನೂನು ಇಲ್ಲ. ಪುರುಷರ ಮೇಲೆ ಆಗುವ ದೌರ್ಜನ್ಯಗಳ ನಿಯಂತ್ರಣ ಮಾಡುವವರು, ದೌರ್ಜನ್ಯಕ್ಕೊಳಗಾದ ಒಬ್ಬಂಟಿ ಪುರುಷರ ರಕ್ಷಣೆ ಹೇಗೆ ನಡೆಯುತ್ತದೆ ಎನ್ನುವ ಪ್ರಶ್ನೆಗಳು ಸಮಾಜದಲ್ಲಿ ಎದ್ದಿವೆ ಎಂದು ಹೇಳಿದರು.

ಇಂತಹ ದೌರ್ಜನ್ಯ-ದಬ್ಬಾಳಿಕೆ ನಿಲ್ಲಿಸಲು ಪುರುಷರ ಹಿತರಕ್ಷಣಾ ಸಮಿತಿ ಅತ್ಯವಶ್ಯಕ. ರಾಜ್ಯ, ಜಿಲ್ಲೆಯಿಂದ ಆರಂಭಗೊಳ್ಳಲಿದೆ. ಮಂಡ್ಯ ಜಿಲ್ಲೆಯಿಂದಲೇ ರಾಜ್ಯಮಟ್ಟ ಮತ್ತು ಜಿಲ್ಲಾ ಮಟ್ಟದ ಸಮಿತಿಗಳು ರಚನೆಗೊಳ್ಳಲಿ ಎಂದು ಸಲಹೆ ನೀಡಿದರು.

ಸಭೆಯಲ್ಲಿ ವಿವಿಧ ಸಂಘನೆಗಳ ಮುಖಂಡರಾದ ಎನ್.ವೈ.ಕೆ ನಿವೃತ್ತ ಅಧಿಕಾರಿ ಎಂ.ಎನ್.ನಟರಾಜು, ನಿವೃತ್ತ ಅಧಿಕಾರಿ ಎಚ್.ಎಂ.ಬಸವರಾಜು, ಪ್ರೊ.ಜಿ.ಟಿ.ವೀರಪ್ಪ, ನಿವೃತ್ತ ಪೊಲೀಸ್ ಅಧಿಕಾರಿ ಸತೀಶ್, ಹಿರಿಯ ವಕೀಲ ಮಲ್ಲಿಕಾರ್ಜುನಯ್ಯ, ಎಂ.ಗುರುಪ್ರಸಾದ್, ಪತ್ರಕರ್ತ ಎಂ.ಶಿವಕುಮಾರ್, ಬೆಟ್ಟಹಳ್ಳಿ ಮಂಜುನಾಥ್, ಶಂಕುಂತಲಾ, ನಿಚಿತಾಗೌಡ, ಅರಸು ಮತ್ತಿತರರಿದ್ದರು.

ಆಂದೋಲನ ಡೆಸ್ಕ್

Recent Posts

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

17 mins ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

1 hour ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

1 hour ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

2 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

3 hours ago

ರಾಜ್ಯದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ; ಪಾರದರ್ಶನ ನೇಮಕಾತಿಗೆ ಎಚ್‌ಡಿಕೆ ಆಗ್ರಹ

ಬೆಂಗಳೂರು : ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಪಾರದರ್ಶಕ ನೇಮಕಾತಿ ಮಾಡಬೇಕಾದ ಕರ್ನಾಟಕ ಲೋಕಸೇವಾ ಆಯೋಗ ಅಕ್ರಮಗಳಲ್ಲಿ ಮುಳುಗಿದೆ. ಸರ್ಕಾರ ಒಂದೇ…

3 hours ago