ರಾಜ್ಯ

ಪುರುಷರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ ; ಪುರುಷರ ಹಿತರಕ್ಷಣಾ ಸಮಿತಿ ಅಸ್ತಿತ್ವಕ್ಕೆ

ಮಂಡ್ಯ : ಆಧುನಿಕ ಜಗತ್ತಿನಲ್ಲಿ ಪುರುಷರ ಮೇಲಿನ ದೌರ್ಜನ್ಯ ಮತ್ತು ದಬ್ಬಾಳಿಗೆ ಹತ್ತಿಕ್ಕಲು ರಾಜ್ಯ ಮಾನವ ಹಕ್ಕುಗಳ ಪುರುಷರ ಹಿತರಕ್ಷಣಾ ಸಮಿತಿ ಅಸ್ತಿತ್ವಕ್ಕೆ ಬರುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಹೇಳಿದರು.

ನಗರದ ಪ್ರವಾಸಿಮಂದಿರದಲ್ಲಿ ಸಮಾನ ಮನಸ್ಕರು ಮತ್ತು ವಿವಿಧ ಸಂಘ-ಸಂಸ್ಥೆಗಳ ಮುಖಂಡರು-ವಿವಿಧ ಇಲಾಖೆಗಳ ನಿವೃತ್ತ ಅಧಿಕಾರಿಗಳ ಸಮ್ಮುಖದಲ್ಲಿ ಆಧುನಿಕ ಮಹಿಳೆಯರಿಂದ ಪುರುಷರ ಮೇಲಿನ ದೌರ್ಜನ್ಯ ಮತ್ತು ದಬ್ಬಾಳಿಕೆ ನಿಯಂತ್ರಣ ಮತ್ತು ಹೋರಾಟ ರೂಪಿಸುವ ಸಮಿತಿ ರಚನೆಯ ಪೂರ್ವಭಾವಿ ಸಭೆ ನಡೆದು ಹಲವು ನಿರ್ಣಯಗಳ ಕುರಿತು ಚರ್ಚಿಸಿದ ಬಳಿಕ ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಪುರುಷರ ಮೇಲಿನ ದೌರ್ಜನ್ಯಗಳನ್ನು ಗಂಭೀರವಾಗಿ ಯಾರೂ ಪರಿಗಣಿಸುತ್ತಿಲ್ಲ, ಈ ಕುರಿತು ಆಲೋಚನೆ ಮಾಡಿ ಸಫಲತೆ ಪಡೆಯಬೇಕಿದೆ, ಸಂಘಟನೆ ರಚನೆಗೊಳ್ಳಬೇಕಿದೆ ಎನ್ನುವ ಸುದೀರ್ಘ ಚರ್ಚೆ ನಡೆದಿದೆ. ಸಾಕಷ್ಟು ಮಂದಿ ಉತ್ತಮ ಸಲಹೆ ಅಭಿಪ್ರಾಯ-ಮಾರ್ಗಸೂಚನೆಗಳನ್ನು ನೀಡಿದ್ದಾರೆಂದು ತಿಳಿಸಿದರು.

ಸ್ವಾತಂತ್ರ ಬಂದ ನಂತರದಲ್ಲಿ ಹೆಣ್ಣುಮಕ್ಕಳಿಗೆ ಎಲ್ಲಾ ಕಾನೂನು ರಕ್ಷಣೆಗಳು ಹೆಚ್ಚಾಗಿವೆ, ಹಿಂದೆ ಪುರುಷರ ದೌರ್ಜನ್ಯ ಇತ್ತು, ಆ ನಂತರದ ದಿನಗಳಲ್ಲಿ ಸಾಕಷ್ಟು ಬದಲಾವಣೆಗಳು ಕಾನೂನಾತ್ಮಕವಾಗಿ ಬಂದವು. ಇದೀಗ ಕೆಲವು ಮಹಿಳೆಯರಿಂದ ತನ್ನ ಕೌಟುಂಬಿಕ ಜೀವನದಲ್ಲಿ ಪುರುಷರ ಮೇಲೆ ದೌರ್ಜನ್ಯಗಳು ನಡೆಯುತ್ತಿವೆ ಎಂದು ಎಚ್ಚರಿಸಿದರು.

ಪುರುಷರ ಮೇಲಿನ ದೌರ್ಜನ್ಯ ಜಗಜ್ಜಾಹಿರಾಗುವುದು ಸಾಮಾನ್ಯ. ಆದರೆ, ಹೆಣ್ಣು ಮಕ್ಕಳ ದೌರ್ಜನ್ಯ ಸಮಾಜಿಕವಾಗಿ ತೆರೆದುಕೊಳ್ಳುವುದು ಕಷ್ಟ, ಬಾಯಿಬಿಟ್ಟರೆ ಸಂಸಾರದ ಗುಟ್ಟು ರಟ್ಟು ಎನ್ನುವಂತಾಗಿದೆ ಪುರುಷರ ಪರಿಸ್ಥಿತಿಗಳು ಎಂದು ಅಭಿಪ್ರಾಯಪಟ್ಟರು.

ಬಳಿಕ ಮಾತನಾಡಿದ ಧ್ವನಿ ಲಯನ್ಸ್ ಸಂಸ್ಥೆ ಅಧ್ಯಕ್ಷೆ ಮತ್ತು ಕೌಟುಂಬಿಕ ಸಮಸ್ಯೆಗಳ ಸಮಾಲೋಚಕಿ ರಜನಿರಾಜ್, ಇತ್ತೀಚಿನ ದಿನಗಳಲ್ಲಿ ಕೌಟುಂಬಿಕ ಸಮಸ್ಯೆಗಳ ಸಾಲಿನಲ್ಲಿ ಪುರುಷರಿಗೆ ಆಗುತ್ತಿರುವ ದೌರ್ಜನ್ಯಗಳ ಪ್ರಕರಣ ಹೆಚ್ಚಾಗುತ್ತಿವೆ. ಮಹಿಳಾ ಆಯೋಗ ಇರುವಂತೆಯೇ ಪುರುಷ ಆಯೋಗ ರಚನೆಯಾಗಬೇಕಿದೆ ಎಂದು ಸಲಹೆ ನೀಡಿದರು.

ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೫ನೇ ಜನ್ಮದಿನಾಚರಣೆಯ ಸುದಿನದಲ್ಲಿ ಮಾನವ ಹಕ್ಕುಗಳ ಪುರುಷರ ಹಿತರಕ್ಷಣಾ ಸಮಿತಿ ಅಸ್ತಿತ್ವಕ್ಕೆ ಸಭೆ ನಡೆಯುತ್ತಿರುವುದು ಅವಿಸ್ಮರಣೀಯ. ಸಂಘಟನೆ ರೂಪುಗೊಂಡು ನೊಂದಣಿ ಮಾಡಿ, ನಂತರ ಹೋರಾಟ, ಸಮಾಲೋಚನೆ, ಕಾರ್ಯರೂಪಗಳ ಬಗ್ಗೆ ಚರ್ಚಿಸಸಲಾಗುವುದು ಎಂದು ತಿಳಿಸಿದರು.

ಪೊಲೀಸ್ ಇಲಾಖೆಯಲ್ಲಿ ಮಹಿಳಾ ಕುಂದುಕೊರತೆ ವಿಭಾಗ, ಮಹಿಳಾ ಠಾಣೆ ಇದೆ, ಎಲ್ಲಾ ಮಹಿಳಾ ಸಂಘಟನೆಗಳು ಮುಂಚೂಣಿಯಲ್ಲಿವೆ. ಪುರುಷರಿಗೆ ಯಾಕೆ ಇಷ್ಟು ರಕ್ಷಣಾತ್ಮಕ ಕಾನೂನು ಇಲ್ಲ. ಪುರುಷರ ಮೇಲೆ ಆಗುವ ದೌರ್ಜನ್ಯಗಳ ನಿಯಂತ್ರಣ ಮಾಡುವವರು, ದೌರ್ಜನ್ಯಕ್ಕೊಳಗಾದ ಒಬ್ಬಂಟಿ ಪುರುಷರ ರಕ್ಷಣೆ ಹೇಗೆ ನಡೆಯುತ್ತದೆ ಎನ್ನುವ ಪ್ರಶ್ನೆಗಳು ಸಮಾಜದಲ್ಲಿ ಎದ್ದಿವೆ ಎಂದು ಹೇಳಿದರು.

ಇಂತಹ ದೌರ್ಜನ್ಯ-ದಬ್ಬಾಳಿಕೆ ನಿಲ್ಲಿಸಲು ಪುರುಷರ ಹಿತರಕ್ಷಣಾ ಸಮಿತಿ ಅತ್ಯವಶ್ಯಕ. ರಾಜ್ಯ, ಜಿಲ್ಲೆಯಿಂದ ಆರಂಭಗೊಳ್ಳಲಿದೆ. ಮಂಡ್ಯ ಜಿಲ್ಲೆಯಿಂದಲೇ ರಾಜ್ಯಮಟ್ಟ ಮತ್ತು ಜಿಲ್ಲಾ ಮಟ್ಟದ ಸಮಿತಿಗಳು ರಚನೆಗೊಳ್ಳಲಿ ಎಂದು ಸಲಹೆ ನೀಡಿದರು.

ಸಭೆಯಲ್ಲಿ ವಿವಿಧ ಸಂಘನೆಗಳ ಮುಖಂಡರಾದ ಎನ್.ವೈ.ಕೆ ನಿವೃತ್ತ ಅಧಿಕಾರಿ ಎಂ.ಎನ್.ನಟರಾಜು, ನಿವೃತ್ತ ಅಧಿಕಾರಿ ಎಚ್.ಎಂ.ಬಸವರಾಜು, ಪ್ರೊ.ಜಿ.ಟಿ.ವೀರಪ್ಪ, ನಿವೃತ್ತ ಪೊಲೀಸ್ ಅಧಿಕಾರಿ ಸತೀಶ್, ಹಿರಿಯ ವಕೀಲ ಮಲ್ಲಿಕಾರ್ಜುನಯ್ಯ, ಎಂ.ಗುರುಪ್ರಸಾದ್, ಪತ್ರಕರ್ತ ಎಂ.ಶಿವಕುಮಾರ್, ಬೆಟ್ಟಹಳ್ಳಿ ಮಂಜುನಾಥ್, ಶಂಕುಂತಲಾ, ನಿಚಿತಾಗೌಡ, ಅರಸು ಮತ್ತಿತರರಿದ್ದರು.

ಆಂದೋಲನ ಡೆಸ್ಕ್

Recent Posts

ಡಿ.ಕೆ.ಶಿವಕುಮಾರ್‌ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್‌: ಬುಧವಾರ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಡಿ.ಕೆ.ಶಿವಕುಮಾರ್‌ ಅವರ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್‌ ಆಗಿದೆ. ಬುಧವಾರ ರಾಜ್ಯದ ನೂತನ ಸಿಎಂ ಆಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ…

11 mins ago

ಓದುಗರ ಪತ್ರ: ಕ್ರಿಕೆಟ್ ಕ್ರೀಡಾಂಗಣಕ್ಕೆ ಡಾ.ಅಂಬೇಡ್ಕರ್ ಹೆಸರಿಡಿ

ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಸೂರ್ಯನಗರದಲ್ಲಿ ನಿರ್ಮಾಣಗೊಳ್ಳಲಿರುವ ದೇಶದ ಎರಡನೇ ಅತಿದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ರಾಜ್ಯ ಸರ್ಕಾರದಿಂದ ಶಂಕುಸ್ಥಾಪನೆ ನೆರವೇರಿಸಲಾಗಿದೆ.…

51 mins ago

ಓದುಗರ ಪತ್ರ: ನಾಳಿನ ನೆರಳಿಗೆ ಇಂದೇ ಗಿಡ ನೆಡೋಣ

ಈ ಬಾರಿಯ ಬೇಸಿಗೆಯ ಧಗೆ ಮಧ್ಯಾಹ್ನದ ವೇಳೆ ಯಾರೂ ಹೊರಗಡೆ ಓಡಾಡದಂತೆ ಮಾಡಿದೆ. ವಾಹನ ಸವಾರರ ಸ್ಥಿತಿಯಂತೂ ಹೇಳತೀರದು. ರಸ್ತೆ…

53 mins ago

ಓದುಗರ ಪತ್ರ: ಸಿದ್ದರಾಮಯ್ಯನವರ ಆಡಳಿತ ಮಾದರಿ

ರಾಜ್ಯದಲ್ಲಿ ಅತ್ಯಂತ ಪ್ರಬಲ ನಾಯಕರಲ್ಲಿ ಸಿದ್ದರಾಮಯ್ಯನವರೂ ಕೂಡ ಒಬ್ಬರು. ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವುದರ ಮೂಲಕ ಅವರ ಆಡಳಿತ…

56 mins ago

ಸಿದ್ದು ರಾಜೀನಾಮೆ; ಒಂದು ಯುಗದ ಅಂತ್ಯ!

ಕೆ.ಪಿ.ನಾಗರಾಜ್, ಮೈಸೂರು ಕರ್ನಾಟಕ ರಾಜಕೀಯ ವ್ಯಾಕರಣವನ್ನೇ ಬದಲಾಯಿಸಿದ ಸಿದ್ದರಾಮಯ್ಯ ಮೈಸೂರು ರಾಜಕಾರಣ ಅಂದರೆ ಒಮ್ಮೆ ಒಡೆಯರ್ ಯುಗ, ನಂತರ ದೇವರಾಜ…

59 mins ago

ಗಾಂಧಿಯ ಸರಳತೆಯತ್ತ ನಡೆಯುತ್ತಿರುವ ಯುವಜನತೆ

ಮಹಾತ್ಮ ಗಾಂಧೀಜಿ ಅವರ ಆತ್ಮಕತೆಗೆ ನೂರು ವರ್ಷ ಸಂದಿರುವುದು ಸಂತಸದ ವಿಷಯ. ಇವತ್ತು ಗಾಂಧಿಜಿ ಅವರ ವಿಚಾರಕ್ಕೆ ಏನಾಗುತ್ತಿದೆ? ಆಚಾರಕ್ಕೆ…

4 hours ago