ಬೆಂಗಳೂರು: ಹಿಟ್ ಅಂಡ್ ರನ್ ಕೇಸ್ನಲ್ಲಿ ಹತ್ತು ವರ್ಷ ಜೈಲು ಹಾಗೂ ಏಳು ಲಕ್ಷ ರೂ. ದಂಡ ವಿಧಿಸುವ ಕೇಂದ್ರ ಸರ್ಕಾರದ ಕನೂನನ್ನು ವಿರೋಧಿಸಿ ಜನವರಿ ೧೭ ರಿಂದ ಅನಿರ್ದಿಷ್ಟಾವಧಿ ಲಾರಿ ಮುಷ್ಕರ ನಡೆಸಲಾಗುವುದು ಎಂದು ಲಾರಿ ಮಾಲೀಕರ ಸಂಘ ತಿಳಿಸಿದೆ.
ಬೆಂಗಳೂರಿನಲ್ಲಿಂದು ಲಾರಿ ಸಂಘದ ಅಧ್ಯಕ್ಷ ನವೀನ್ ರೆಡ್ಡಿ ಮಾತನಾಡಿ, ಎಲ್ಲೇ, ಯಾವುದೇ ಅಪಘಾತವಾದರೂ ಮೊದಲು ಲಾರಿ ಚಾಲಕರ ಮೇಲೆಯೇ ದಾಳಿಗಳಾಗುತ್ತವೆ. ಲಾರಿಯ ಹಿಂಬದಿ ಚಕ್ರಕ್ಕೆ ಬೈಕ್ ಸಿಲುಕಿದಾಗ ಲಾರಿಯನ್ನು ತಕ್ಷಣ ನಿಲ್ಲಿಸುವುದು ಸುಲಭದ ಕೆಲಸವಲ್ಲ. ಅಂತಹ ಸ್ಥಳದಲ್ಲಿ ಲಾರಿ ನಿಲ್ಲಿಸಿದರೇ ಚಾಲಕನ ಮೇಲೆ ವಿನಾಕಾರಣ ಹಲ್ಲೆಗಳು ನಡೆಯುತ್ತವೆ. ಅಂತಹ ಸಮಯದಲ್ಲಿ ಆತ್ಮ ರಕ್ಷಣೆಗಾಗಿ ಸ್ಥಳೀಯ ಪೊಲೀಸ್ ಠಾಣೆಗೆ ಹೋಗುತ್ತಾರೆ. ಇಂತಹ ಘಟನೆಗಳನ್ನು ಹಿಟ್ ಅಂಡ್ ರನ್ ಎನ್ನುವುದು ಎಷ್ಟು ಸರಿ?. ಕೇಂದ್ರ ಸರ್ಕಾರ ಕೂಡಲೇ ಈ ಕಾನೂನನ್ನು ಹಿಂಪಡೆಯಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಕೇಂದ್ರ ಸರ್ಕಾರದ ಈ ಹೊಸ ನಿಯಮದಿಂದಾಗಿ ಟ್ರಕ್ ಚಾಲಕರು ಅನಗತ್ಯ ಕಿರುಕುಳವನ್ನು ಎದುರಿಸಬೇಕಾಗುತ್ತದೆ ಆಲ್ ಇಂಡಿಯಾ ಮೋಟಾರ್ ಟ್ರಾನ್ಸ್ಪೋರ್ಟ್ ಕಾಂಗ್ರೆಸ್ ಕೂಡ ಹೇಳಿದ್ದು, ಕೇಂದ್ರ ಈ ಕಾನೂನನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದೆ. ಜೊತೆಗೆ ಕರ್ನಾಟಕ ಹೊರತುಪಡಿಸಿ ಮಹಾರಾಷ್ಟ್ರ ಮಾತ್ರವಲ್ಲದೆ ಮಧ್ಯಪ್ರದೇಶ, ಗುಜರಾತ್, ಹರಿಯಾಣ, ಪಂಜಾಬ್, ಉತ್ತರ ಪ್ರದೇಶ, ಹಿಮಾಚಲ, ರಾಜಸ್ಥಾನಗಳಲ್ಲಿಯೂ ಲಾರಿ ಮುಷ್ಕರ ನಡೆಯಲಿದೆ ಎಂದು ಹೇಳಿದರು.
ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…
ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…
ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…