ರಾಜ್ಯ

ಜನವರಿ ೧೭ ರಿಂದ ಅನಿರ್ದಿಷ್ಟಾವಧಿ ಲಾರಿ ಮುಷ್ಕರ

ಬೆಂಗಳೂರು: ಹಿಟ್‌ ಅಂಡ್‌ ರನ್‌ ಕೇಸ್‌ನಲ್ಲಿ ಹತ್ತು ವರ್ಷ ಜೈಲು ಹಾಗೂ ಏಳು ಲಕ್ಷ ರೂ. ದಂಡ ವಿಧಿಸುವ ಕೇಂದ್ರ ಸರ್ಕಾರದ ಕನೂನನ್ನು ವಿರೋಧಿಸಿ ಜನವರಿ ೧೭ ರಿಂದ ಅನಿರ್ದಿಷ್ಟಾವಧಿ ಲಾರಿ ಮುಷ್ಕರ ನಡೆಸಲಾಗುವುದು ಎಂದು ಲಾರಿ ಮಾಲೀಕರ ಸಂಘ ತಿಳಿಸಿದೆ.

ಬೆಂಗಳೂರಿನಲ್ಲಿಂದು ಲಾರಿ ಸಂಘದ ಅಧ್ಯಕ್ಷ ನವೀನ್‌ ರೆಡ್ಡಿ ಮಾತನಾಡಿ, ಎಲ್ಲೇ, ಯಾವುದೇ ಅಪಘಾತವಾದರೂ ಮೊದಲು ಲಾರಿ ಚಾಲಕರ ಮೇಲೆಯೇ ದಾಳಿಗಳಾಗುತ್ತವೆ. ಲಾರಿಯ ಹಿಂಬದಿ ಚಕ್ರಕ್ಕೆ ಬೈಕ್‌ ಸಿಲುಕಿದಾಗ ಲಾರಿಯನ್ನು ತಕ್ಷಣ ನಿಲ್ಲಿಸುವುದು ಸುಲಭದ ಕೆಲಸವಲ್ಲ. ಅಂತಹ ಸ್ಥಳದಲ್ಲಿ ಲಾರಿ ನಿಲ್ಲಿಸಿದರೇ ಚಾಲಕನ ಮೇಲೆ ವಿನಾಕಾರಣ ಹಲ್ಲೆಗಳು ನಡೆಯುತ್ತವೆ. ಅಂತಹ ಸಮಯದಲ್ಲಿ ಆತ್ಮ ರಕ್ಷಣೆಗಾಗಿ ಸ್ಥಳೀಯ ಪೊಲೀಸ್‌ ಠಾಣೆಗೆ ಹೋಗುತ್ತಾರೆ. ಇಂತಹ ಘಟನೆಗಳನ್ನು ಹಿಟ್‌ ಅಂಡ್‌ ರನ್‌ ಎನ್ನುವುದು ಎಷ್ಟು ಸರಿ?. ಕೇಂದ್ರ ಸರ್ಕಾರ ಕೂಡಲೇ ಈ ಕಾನೂನನ್ನು ಹಿಂಪಡೆಯಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಕೇಂದ್ರ ಸರ್ಕಾರದ ಈ ಹೊಸ ನಿಯಮದಿಂದಾಗಿ ಟ್ರಕ್ ಚಾಲಕರು ಅನಗತ್ಯ ಕಿರುಕುಳವನ್ನು ಎದುರಿಸಬೇಕಾಗುತ್ತದೆ ಆಲ್ ಇಂಡಿಯಾ ಮೋಟಾರ್ ಟ್ರಾನ್ಸ್‌ಪೋರ್ಟ್ ಕಾಂಗ್ರೆಸ್ ಕೂಡ ಹೇಳಿದ್ದು, ಕೇಂದ್ರ ಈ ಕಾನೂನನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದೆ. ಜೊತೆಗೆ ಕರ್ನಾಟಕ ಹೊರತುಪಡಿಸಿ ಮಹಾರಾಷ್ಟ್ರ ಮಾತ್ರವಲ್ಲದೆ ಮಧ್ಯಪ್ರದೇಶ, ಗುಜರಾತ್, ಹರಿಯಾಣ, ಪಂಜಾಬ್, ಉತ್ತರ ಪ್ರದೇಶ, ಹಿಮಾಚಲ, ರಾಜಸ್ಥಾನಗಳಲ್ಲಿಯೂ ಲಾರಿ ಮುಷ್ಕರ ನಡೆಯಲಿದೆ ಎಂದು ಹೇಳಿದರು.

andolanait

Recent Posts

ಹಾಸನ: ಸಿಡಿಲು ಬಡಿದು ಮಹಿಳೆ ಸಾವು

ಹಾಸನ: ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದಿದೆ. ನೀಲಮ್ಮ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ…

9 hours ago

ಪಹಲ್ಗಾಮ್‌ ದಾಳಿಯಾಗಿ ನಾಳೆಗೆ 1 ವರ್ಷ: ಸೇನೆಯಿಂದ ಪೋಸ್ಟ್‌

ನವದೆಹಲಿ: ಬೈಸರನ್‌ ವ್ಯಾಲಿಗೆ ಪ್ರವಾಸಕ್ಕೆಂದು ಹೋಗಿದ್ದಾಗ 26 ಜನರು ಸಾವನ್ನಪ್ಪಿದ್ದ ಭಯೋತ್ಪಾದಕ ದಾಳಿಗೆ ನಾಳೆ ಒಂದು ವರ್ಷ. ಭಾರತೀಯ ಸೇನೆ…

9 hours ago

ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ: ಸಿಎಂ ಸಿದ್ದರಾಮಯ್ಯ

ಪಿರಿಯಾಪಟ್ಟಣ: ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ. ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ…

9 hours ago

ಪಾಲಹಳ್ಳಿ ಬೇಸಿಗೆ ಶಿಬಿರದಲ್ಲಿ ಮಕ್ಕಳೊಂದಿಗೆ ಸಂವಾದ ನಡೆಸಿದ ಸಚಿವ ಚಲುವರಾಯಸ್ವಾಮಿ

​ಶ್ರೀರಂಗಪಟ್ಟಣ: ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಬೇಸಿಗೆ ಶಿಬಿರಗಳು ಅತ್ಯುತ್ತಮ ವೇದಿಕೆಯಾಗಿದ್ದು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮಕ್ಕಳ ವ್ಯಕ್ತಿತ್ವ…

9 hours ago

ಕೇರಳ| ತ್ರಿಶೂರ್‌ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಸ್ಥಳದಲ್ಲಿ ಸ್ಫೋಟ: 13 ಮಂದಿ ಸಾವು

ತಿರುವನಂತಪುರಂ: ಕೇರಳದ ತ್ರಿಶೂರ್‌ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ.…

10 hours ago

ಹನೂರು| ಆದಿಶಕ್ತಿ ಮಾರಮ್ಮ ಜಾತ್ರೆಯಲ್ಲಿ ಡಿಜೆ ಬಳಕೆಗೆ ಅವಕಾಶ ನೀಡುವಂತೆ ಗ್ರಾಮಸ್ಥರ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಆದಿಶಕ್ತಿ ಮಾರಮ್ಮ ಜಾತ್ರಾ…

10 hours ago