ರಾಜ್ಯ

ಭಾರತವನ್ನು ಹಿಂದೂಗಳ ರಾಷ್ಟ್ರ ಮಾಡಲು ಆಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಗದಗ: ನಮ್ಮ ದೇಶದಲ್ಲಿ ಬರೀ ಹಿಂದುಗಳಿಲ್ಲಾ, ಕ್ರಿಶ್ಚಿಯನ್‌, ಮುಸ್ಲಿಂ, ಜೈನರು, ಬೌದ್ಧರು ಎಲ್ಲರೂ ಇದ್ದಾರೆ. ಕೇವಲ ಹಿಂದೂ ರಾಷ್ಟ್ರ ಎಂದು ಘೋಷಿಸಲು ಆಗುವುದಿಲ್ಲ. ಇದು ಬಿಜೆಪಿ ಸಿದ್ಧಾಂತ. ಭಾರತವನ್ನು ಹಿಂದೂಗಳ ರಾಷ್ಟ್ರ ಮಾಡಲು ಆಗುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತ ಉಳಿಯಬೇಕಾದರೇ ಹಿಂದೂ ರಾಷ್ಟ್ರವಾಗಬೇಕು ಎಂದು ಪೇಜಾವರ ಶ್ರೀಗಳು ಹೇಳಿಕೆಗೆ ಇದು ಬಿಜೆಪಿಯ ಘೋಷ ವಾಕ್ಯವಾಗಿದ್ದು, ೧೯೫೦ರಲ್ಲೊ ಜನಸಂಗ ಪ್ರಾರಂಭವಾದಾಗಲೇ ಹಿಂದೂ ರಾಷ್ಟ್ರವಾಗಬೇಕು ಎಂದು ಹೇಳಿದ್ದರು. ಆದರೆ ಹಿಂದೂ ದೇಶ ಮಾಡಲು ಆಗುವುದಿಲ್ಲ ಎಂದು ಸಿಎಂ ಹೇಳಿದರು.

ಇನ್ನೂ ಜನ ಶಕ್ತಿ ಯೋಜನೆಯಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ ಎಂಬ ಎಬಿವಿಪಿ ಆರೋಪಕ್ಕೆ, ಸುಳ್ಳು ಹೇಳುವುದೇ ಅವರ ಕೆಲಸ. ಬಿಜೆಪಿ ಸಂಘ ಪರಿವಾರದ ಎಬಿವಿಪಿ, ಭಜರಂಗದಳ, ಯುವ ಮೋರ್ಚಾ ಎಲ್ಲವೂ ಸುಳ್ಳಿನ ಕಾರ್ಖಾನೆಗಳು ಎಂದು ತಿಳಿಸಿದರು.

andolanait

Recent Posts

ಸಿಎಂಗೆ ವಿದ್ಯಾರ್ಥಿಗಳ ಪತ್ರ

ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…

2 hours ago

ದಿವ್ಯ ಎಂಬ ಅಂದಿನ ಕಾಲದ ಪಣ ಪರೀಕ್ಷೆ

ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…

2 hours ago

ಎಮ್ಮೆ ನಿನಗೆ ಸಾಟಿ ಇಲ್ಲ…

ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…

2 hours ago

ಭಾನುವಾರದ ಪುರವಣಿಗಳಲ್ಲಿ ಸಾಹಿತ್ಯ ಯಾಕೆ ಮಾಯ?

ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…

2 hours ago

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

13 hours ago