ಗದಗ: ನಮ್ಮ ದೇಶದಲ್ಲಿ ಬರೀ ಹಿಂದುಗಳಿಲ್ಲಾ, ಕ್ರಿಶ್ಚಿಯನ್, ಮುಸ್ಲಿಂ, ಜೈನರು, ಬೌದ್ಧರು ಎಲ್ಲರೂ ಇದ್ದಾರೆ. ಕೇವಲ ಹಿಂದೂ ರಾಷ್ಟ್ರ ಎಂದು ಘೋಷಿಸಲು ಆಗುವುದಿಲ್ಲ. ಇದು ಬಿಜೆಪಿ ಸಿದ್ಧಾಂತ. ಭಾರತವನ್ನು ಹಿಂದೂಗಳ ರಾಷ್ಟ್ರ ಮಾಡಲು ಆಗುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತ ಉಳಿಯಬೇಕಾದರೇ ಹಿಂದೂ ರಾಷ್ಟ್ರವಾಗಬೇಕು ಎಂದು ಪೇಜಾವರ ಶ್ರೀಗಳು ಹೇಳಿಕೆಗೆ ಇದು ಬಿಜೆಪಿಯ ಘೋಷ ವಾಕ್ಯವಾಗಿದ್ದು, ೧೯೫೦ರಲ್ಲೊ ಜನಸಂಗ ಪ್ರಾರಂಭವಾದಾಗಲೇ ಹಿಂದೂ ರಾಷ್ಟ್ರವಾಗಬೇಕು ಎಂದು ಹೇಳಿದ್ದರು. ಆದರೆ ಹಿಂದೂ ದೇಶ ಮಾಡಲು ಆಗುವುದಿಲ್ಲ ಎಂದು ಸಿಎಂ ಹೇಳಿದರು.
ಇನ್ನೂ ಜನ ಶಕ್ತಿ ಯೋಜನೆಯಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ ಎಂಬ ಎಬಿವಿಪಿ ಆರೋಪಕ್ಕೆ, ಸುಳ್ಳು ಹೇಳುವುದೇ ಅವರ ಕೆಲಸ. ಬಿಜೆಪಿ ಸಂಘ ಪರಿವಾರದ ಎಬಿವಿಪಿ, ಭಜರಂಗದಳ, ಯುವ ಮೋರ್ಚಾ ಎಲ್ಲವೂ ಸುಳ್ಳಿನ ಕಾರ್ಖಾನೆಗಳು ಎಂದು ತಿಳಿಸಿದರು.
ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…
ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…
ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…
ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…
ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…