ಬೆಂಗಳೂರು : ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್ಎಸ್ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರು ಭಾರತ ಹಿಂದೂ ರಾಷ್ಟ್ರವಾಗಲಿದೆ ಎಂದು ಹೇಳಿರುವುದಕ್ಕೆ ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಭಾರತವು ಸರ್ವ ಜಾತಿ ಮತ್ತು ಧರ್ಮಗಳನ್ನು ಸಮಾನವಾಗಿ ಒಳಗೊಂಡಂತಹ ಜಾತ್ಯತೀತ ದೇಶ. ಇದನ್ನೇ ನಮ್ಮ ದೇಶದ ಸಂವಿಧಾನ ಸ್ಪಷ್ಟವಾಗಿ ಹೇಳಿದೆ. ಆದರೆ ಒಂದು ದಿನವೂ ಈ ದೇಶದ ಸಂವಿಧಾನದ ಪುಟಗಳಲ್ಲಿ ಏನಿದೆ ಎಂಬುದನ್ನು ಕಣ್ಣೆತ್ತಿಯೂ ನೋಡದೇ ಬರೀ ಮನುಸ್ಮೃತಿಯನ್ನೇ ಪ್ರತಿಪಾದಿಸುವ ಭಾಗವತ್ ಅವರಿಗೆ ಧರ್ಮ ಎಂದರೆ ಏನೆಂಬುದು ಈವರೆಗೂ ತಿಳಿದಿಲ್ಲ ಎಂದಿದ್ದಾರೆ.
ಇದನ್ನೂ ಓದಿ :-ಕೆಂಪುಕೋಟೆ ಬಳಿ ಸ್ಫೋಟ ; ದಿಲ್ಲಿಯಲ್ಲಿ ಹೈ ಅಲರ್ಟ್
ಈ ನೆಲದಲ್ಲಿ ಸ್ವಾಮಿ ವಿವೇಕಾನಂದರಿಂದ ಹಿಡಿದು ಬಹಳಷ್ಟು ಮಂದಿ ಸಂತರು, ಧರ್ಮ ಎಂದರೆ ಏನು ಎಂಬ ಸಂಗತಿಯನ್ನು ಸ್ಪಷ್ಟವಾಗಿ ಹೇಳಿ ಹೋಗಿದ್ದಾರೆ. ಜೊತೆಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅಂತಹ ಮಹನೀಯರೂ ತಮಗೆ ಕುಡಿಯಲು ನೀರುಕೊಡದ, ತಮ್ಮನ್ನು ಸಮಾನವಾಗಿ ಕಾಣದ ಹಿಂದೂ ಧರ್ಮದ ಅಮಾನವೀಯತೆಯನ್ನು ಪ್ರಶ್ನಿಸಿ, ಆ ಧರ್ಮವನ್ನೇ ತೊರೆದು ಬೌದ್ಧ ಧರ್ಮವನ್ನು ಸ್ವೀಕರಿಸಿದ್ದಾರೆ. ಹೀಗಿರುವಾಗ ಭಾರತ ಹಿಂದೂ ರಾಷ್ಟ್ರ ಆಗುತ್ತದೆ ಎಂದು ಆಗಾಗ್ಗೆ ಹೇಳುತ್ತಲೇ ಇರುವ ಮೋಹನ್ ಭಾಗವತ್ ಅವರು ಮೊದಲು ದೇಶದ ಜನರ ಕ್ಷಮೆ ಯಾಚಿಸಲಿ ಎಂದು ಅವರು ಒತ್ತಾಯಿಸಿದ್ದಾರೆ.
ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…
ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…
ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…
ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…
ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…