ರಾಜ್ಯ

ಭಾರತ ಹಿಂದೂ ರಾಷ್ಟ್ರ : ಭಾಗವತ್‌ ಹೇಳಿಕೆಗೆ ಎಚ್‌ಸಿಎಂ ಆಕ್ಷೇಪ

ಬೆಂಗಳೂರು : ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರು ಭಾರತ ಹಿಂದೂ ರಾಷ್ಟ್ರವಾಗಲಿದೆ ಎಂದು ಹೇಳಿರುವುದಕ್ಕೆ ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಭಾರತವು ಸರ್ವ ಜಾತಿ ಮತ್ತು ಧರ್ಮಗಳನ್ನು ಸಮಾನವಾಗಿ ಒಳಗೊಂಡಂತಹ ಜಾತ್ಯತೀತ ದೇಶ. ಇದನ್ನೇ ನಮ್ಮ ದೇಶದ ಸಂವಿಧಾನ ಸ್ಪಷ್ಟವಾಗಿ ಹೇಳಿದೆ. ಆದರೆ ಒಂದು ದಿನವೂ ಈ ದೇಶದ ಸಂವಿಧಾನದ ಪುಟಗಳಲ್ಲಿ ಏನಿದೆ ಎಂಬುದನ್ನು ಕಣ್ಣೆತ್ತಿಯೂ ನೋಡದೇ ಬರೀ ಮನುಸ್ಮೃತಿಯನ್ನೇ ಪ್ರತಿಪಾದಿಸುವ ಭಾಗವತ್ ಅವರಿಗೆ ಧರ್ಮ ಎಂದರೆ ಏನೆಂಬುದು ಈವರೆಗೂ ತಿಳಿದಿಲ್ಲ ಎಂದಿದ್ದಾರೆ.

ಇದನ್ನೂ ಓದಿ :-ಕೆಂಪುಕೋಟೆ ಬಳಿ ಸ್ಫೋಟ ; ದಿಲ್ಲಿಯಲ್ಲಿ ಹೈ ಅಲರ್ಟ್‌

ಈ ನೆಲದಲ್ಲಿ ಸ್ವಾಮಿ ವಿವೇಕಾನಂದರಿಂದ ಹಿಡಿದು ಬಹಳಷ್ಟು ಮಂದಿ ಸಂತರು, ಧರ್ಮ ಎಂದರೆ ಏನು ಎಂಬ ಸಂಗತಿಯನ್ನು ಸ್ಪಷ್ಟವಾಗಿ ಹೇಳಿ ಹೋಗಿದ್ದಾರೆ. ಜೊತೆಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅಂತಹ ಮಹನೀಯರೂ ತಮಗೆ ಕುಡಿಯಲು ನೀರುಕೊಡದ, ತಮ್ಮನ್ನು ಸಮಾನವಾಗಿ ಕಾಣದ ಹಿಂದೂ ಧರ್ಮದ ಅಮಾನವೀಯತೆಯನ್ನು ಪ್ರಶ್ನಿಸಿ, ಆ ಧರ್ಮವನ್ನೇ ತೊರೆದು ಬೌದ್ಧ ಧರ್ಮವನ್ನು ಸ್ವೀಕರಿಸಿದ್ದಾರೆ. ಹೀಗಿರುವಾಗ ಭಾರತ ಹಿಂದೂ ರಾಷ್ಟ್ರ ಆಗುತ್ತದೆ ಎಂದು ಆಗಾಗ್ಗೆ ಹೇಳುತ್ತಲೇ ಇರುವ ಮೋಹನ್ ಭಾಗವತ್ ಅವರು ಮೊದಲು ದೇಶದ ಜನರ ಕ್ಷಮೆ ಯಾಚಿಸಲಿ ಎಂದು ಅವರು ಒತ್ತಾಯಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ನಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

4 hours ago

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

6 hours ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

6 hours ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

6 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

7 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

7 hours ago