ರಾಜ್ಯ

ಭಾರತ ಹಿಂದೂ ರಾಷ್ಟ್ರ : ಭಾಗವತ್‌ ಹೇಳಿಕೆಗೆ ಎಚ್‌ಸಿಎಂ ಆಕ್ಷೇಪ

ಬೆಂಗಳೂರು : ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರು ಭಾರತ ಹಿಂದೂ ರಾಷ್ಟ್ರವಾಗಲಿದೆ ಎಂದು ಹೇಳಿರುವುದಕ್ಕೆ ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಭಾರತವು ಸರ್ವ ಜಾತಿ ಮತ್ತು ಧರ್ಮಗಳನ್ನು ಸಮಾನವಾಗಿ ಒಳಗೊಂಡಂತಹ ಜಾತ್ಯತೀತ ದೇಶ. ಇದನ್ನೇ ನಮ್ಮ ದೇಶದ ಸಂವಿಧಾನ ಸ್ಪಷ್ಟವಾಗಿ ಹೇಳಿದೆ. ಆದರೆ ಒಂದು ದಿನವೂ ಈ ದೇಶದ ಸಂವಿಧಾನದ ಪುಟಗಳಲ್ಲಿ ಏನಿದೆ ಎಂಬುದನ್ನು ಕಣ್ಣೆತ್ತಿಯೂ ನೋಡದೇ ಬರೀ ಮನುಸ್ಮೃತಿಯನ್ನೇ ಪ್ರತಿಪಾದಿಸುವ ಭಾಗವತ್ ಅವರಿಗೆ ಧರ್ಮ ಎಂದರೆ ಏನೆಂಬುದು ಈವರೆಗೂ ತಿಳಿದಿಲ್ಲ ಎಂದಿದ್ದಾರೆ.

ಇದನ್ನೂ ಓದಿ :-ಕೆಂಪುಕೋಟೆ ಬಳಿ ಸ್ಫೋಟ ; ದಿಲ್ಲಿಯಲ್ಲಿ ಹೈ ಅಲರ್ಟ್‌

ಈ ನೆಲದಲ್ಲಿ ಸ್ವಾಮಿ ವಿವೇಕಾನಂದರಿಂದ ಹಿಡಿದು ಬಹಳಷ್ಟು ಮಂದಿ ಸಂತರು, ಧರ್ಮ ಎಂದರೆ ಏನು ಎಂಬ ಸಂಗತಿಯನ್ನು ಸ್ಪಷ್ಟವಾಗಿ ಹೇಳಿ ಹೋಗಿದ್ದಾರೆ. ಜೊತೆಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅಂತಹ ಮಹನೀಯರೂ ತಮಗೆ ಕುಡಿಯಲು ನೀರುಕೊಡದ, ತಮ್ಮನ್ನು ಸಮಾನವಾಗಿ ಕಾಣದ ಹಿಂದೂ ಧರ್ಮದ ಅಮಾನವೀಯತೆಯನ್ನು ಪ್ರಶ್ನಿಸಿ, ಆ ಧರ್ಮವನ್ನೇ ತೊರೆದು ಬೌದ್ಧ ಧರ್ಮವನ್ನು ಸ್ವೀಕರಿಸಿದ್ದಾರೆ. ಹೀಗಿರುವಾಗ ಭಾರತ ಹಿಂದೂ ರಾಷ್ಟ್ರ ಆಗುತ್ತದೆ ಎಂದು ಆಗಾಗ್ಗೆ ಹೇಳುತ್ತಲೇ ಇರುವ ಮೋಹನ್ ಭಾಗವತ್ ಅವರು ಮೊದಲು ದೇಶದ ಜನರ ಕ್ಷಮೆ ಯಾಚಿಸಲಿ ಎಂದು ಅವರು ಒತ್ತಾಯಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

1 hour ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

10 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

10 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

10 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

10 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

10 hours ago