ರಾಜ್ಯ

ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಅವಮಾನವಾಗುತ್ತಿದೆ: ಸಚಿವ ಪ್ರಿಯಾಂಕ್‌ ಖರ್ಗೆ

ಕಲಬುರ್ಗಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ವಿದೇಶಾಂಗ ಸಚಿವ ಜೈಶಂಕರ್ ಅವರ ವಿದೇಶ ನೀತಿಯಿಂದಾಗಿ ಅಮೇರಿಕಾದ ವಿದೇಶಾಂಗ ಸಚಿವರು ಸೇರಿದಂತೆ ಪ್ರತಿಯೊಬ್ಬರು ಭಾರತದ ಬಗ್ಗೆ ಹಗುರವಾಗಿ ಮಾತನಾಡುಂತಾಗಿದೆ. ಇದರಿಂದಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಬಗ್ಗೆ ಅವಮಾನ ಅನುಭವಿಸುವಂತಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ವರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹರಿಹಾಯ್ದರು.

ಕಲಬುರ್ಗಿಯ ಐವಾನ್ ಇ ಶಾಹಿ ಅತಿಥಿ ಗೃಹದಲ್ಲಿ ತಮ್ಮನ್ನು ಭೇಟಿ ಮಾಡಿದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.

ಅಮೇರಿಕಾದ ವಿದೇಶಾಂಗ ಅಧಿಕಾರಿಯೊಬ್ಬರು ನಾವು ಭಾರತವನ್ನು ಬೆಳೆಯಲು ಬಿಡುವುದಿಲ್ಲ. ಯುದ್ದದ ಪರಿಣಾಮದಿಂದಾಗಿ ಭಾರತ, ರಷ್ಯಾದಿಂದ 30 ದಿನಗಳ ವರೆಗೆ ತೈಲ ಖರೀದಿಸಲು ಅನುಮತಿ ನೀಡಿದ್ದೇವೆ ಎಂದು ಹೇಳಿಕೆ ನೀಡಿದ್ದಾರೆ‌. ಭಾರತಕ್ಕೆ ಅನುಮತಿ ನೀಡಲು ಅವರು ಯಾರು? ಮೋದಿ, ಜೈಶಂಕರ್ ಸೇರಿದಂತೆ ಬಿಜೆಪಿ ನಾಯಕರು ಯಾರೊಬ್ಬರು ಈ ಬಗ್ಗೆ ಪ್ರತಿಕ್ರಿಯೆ ನೀಡಿಲ್ಲ. ಭಾರತದ ಬಗ್ಗೆ ಹಗುರವಾಗಿ ಮಾತನಾಡುತ್ತಿರುವುದರಿಂದಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಅವಮಾನವಾಗುತ್ತಿದೆ ಎಂದು ಖರ್ಗೆ ಟೀಕಿಸಿದರು.

ಪ್ರಶ್ನೆಯೊಂದಕ್ಕೆ‌ ಉತ್ತರಿಸುತ್ತಿದ್ದ ಸಚಿವರು, ನಾನು ಮನಸ್ಸು ಮಾಡಿದರೆ ಮೋದಿ ಅವರ ರಾಜಕೀಯ ಭವಿಷ್ಯ ಹಾಳು ಮಾಡಬಲ್ಲೆ. ಆದರೆ, ಮೋದಿ ನನ್ನ ಸ್ನೇಹಿತರು ಹಾಗಾಗಿ ನಾನು ಹಾಗೆ ಮಾಡುವುದಿಲ್ಲ ” ಎಂದು ಅಮೇರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಹೇಳಿದ್ದಾರೆ ಇದಕ್ಕೂ ಕೂಡಾ ಮೋದಿ ಪ್ರತಿಕ್ರಿಯೆ ನೀಡಿಲ್ಲ. ಯಾಕೆ ಅವರು ಮಾತಮಾಡುತ್ತಿಲ್ಲ, ಮೋದಿಯವರ ಬಗ್ಗೆ ಎಫ್ಸ್ಟೀನ್ ಫೈಲ್ ನಲ್ಲಿ ಏನಾದರೂ ಇದೆಯಾ ? ಎಂದು ಪ್ರಿಯಾಂಕ್ ಖರ್ಗೆ ವ್ಯಂಗ್ಯ ವಾಡಿದರು.

ಈ ಹಿಂದೆ ಮಧ್ಯಪ್ರಾಚ್ಯಗಳ ವಿಚಾರದಲ್ಲಿ ಅಮೇರಿಕಾ ಮಧ್ಯೆ ಪ್ರವೇಶಿಸಿದಾಗ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಅವರು ಆ ಬಗ್ಗೆ ಆಕ್ಷೇಪ ಎತ್ತಿದ್ದರು. ಅಂತಹ ಎದೆಗಾರಿಕೆ ಮೋದಿಗೆ ಯಾಕೆ ಇಲ್ಲ? ಎಂದು ಪ್ರಶ್ನಿಸಿದ ಸಚಿವರು, ಸಚಿವ ಪ್ರಹ್ಲಾದ್ ಜೋಷಿ ಸೇರಿದಂತೆ ಬಿಜೆಪಿವರು ನೆಹರು , ಸೋನಿಯಾ, ರಾಹುಲ್ ಗಾಂಧಿ ಬಗ್ಗೆ ಮಾತನಾಡುತ್ತಾರೆ. ಸ್ವತಃ ಮೋದಿ ಸಿನೆಮಾ ನಟ ನಟಿಯರ ಮದುವೆ, ಕ್ರಿಕೆಟ್ ತಂಡಕ್ಕೆ ಶುಭಾಶಯ ಕೋರಲು ಹೋಗುತ್ತಾರೆ. ಆದರೆ, ವಿದೇಶಾಂಗ ನೀತಿಗಖ ಬಗ್ಗೆ ಭಾರತ ದಿಟ್ಟ‌ನಿಲುವಿನ ಬಗ್ಗೆ ಮಾತನಾಡಲು‌ ಅವರಿಗೆ ಸಮಯವಿಲ್ಲ ಎಂದು ಕುಟುಕಿದರು.

ಗೃಹ ಬಳಕೆ‌ ಸಿಲಿಂಡರ್ ಬೆಲೆ ಏರಿಕೆ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಆ ಬಗ್ಗೆ ಕೇಂದ್ರ ಸಚಿವರು ಉತ್ತರಿಸಲಿ. ಬೆಲೆ ಏರಿಕೆಯ ಮಾಸ್ಟರ್ ಸ್ಟೋಕ್ ಬಗ್ಗೆ‌ ಬಿಜೆಪಿಯವರು ಉತ್ತರಿಸಲಿ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಸವಾಲು ಹಾಕಿದರು.

ಕಾಲೇಜುಗಳಲ್ಲಿ‌ ಚುನಾವಣೆ ನಡೆಸುವ ವಿಚಾರಕ್ಕೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದ ಪ್ರಿಯಾಂಕ್ ಖರ್ಗೆ, ಚುನಾವಣೆಗೆ ಪೋಷಕರ ವಿರೋಧ ಸೇರಿದಂತೆ ಎಲ್ಲ ವಿಚಾರಗಳ ಬಗ್ಗೆ ಕೂಲಂಕುಷ ಪರಿಶೀಲನೆ ನಡೆಸಲಾಗುತ್ತದೆ. ಜೆಎನ್ ಯೂ ಸೇರಿದಂತೆ ಬಹುತೇಕ ‌ಶೈಕ್ಷಣಿಕ ಕೇಂದ್ರಗಳಲ್ಲಿ‌ ವಿದ್ಯಾರ್ಥಿ ಸಂಘಕ್ಕೆ‌ ಚುನಾವಣೆ ನಡೆಸಲಾಗುತ್ತಿದೆ. ಎಲ್ಲ ಹಂತದ ಪರಿಶೀಲನೆ ನಂತರ‌ ರೂಪಿಸಲಾದ ನಿಯಮಗಳ ಪ್ರಕಾರ ಎನ್ ಎಸ್ ಐ ಯೂ, ಎಬಿ ವಿಪಿ ಸಂಘಗಳು ಒಪ್ಪಬೇಕಾಗುತ್ತದೆ ಎಂದರು.

ಗ್ರಾಮಪಂಚಾಯತ್ ಅಡಿಯಲ್ಲಿ ಬಿಲ್ ಕಲೆಕ್ಟರ್ ಹಾಗೂ ಡಾಟಾ ಆಪರೇಟರ್ ಅವರುಗಳು ನೇಮಕಾತಿಗೆ ಸಂಬಂಧಿಸಿದಂತೆ ಪ್ರಾವಿಷನಲ್ ಲಿಸ್ಟ್ ಇನ್ನೂ ನೆನೆಗುದಿಗೆ ಬಿದ್ದಿರುವ ಕುರಿತು ಉತ್ತರಿಸಿದ ಸಚಿವರು ಈ ಬಗ್ಗೆ ಒಂದು ವಾರದಲ್ಲೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಡಿಕೇರಿ: ವಿದ್ಯುತ್ ತಂತಿ ಮೇಲೆ ಮರ ಬೀಳಿಸಿ ಕಾಡಾನೆಗಳ ಪುಂಡಾಟ

ಮಡಿಕೇರಿ: ಕೊಡಗಿನಲ್ಲಿ ವನ್ಯಜೀವಿ–ಮಾನವ ಸಂಘರ್ಷ ಮತ್ತೆ ಮುಂದುವರಿದಿದೆ. ಈ ಬಾರಿ ಕಾಡಾನೆಗಳ ಬುದ್ಧಿವಂತಿಕೆ ಹಾಗೂ ಉಪಾಯದಿಂದ ನಡೆದ ಘಟನೆ ಗ್ರಾಮಸ್ಥರಲ್ಲಿ…

11 hours ago

ಶ್ರೀಲಂಕಾ ಜೈಲಿನಲ್ಲಿ ಗ್ಯಾಂಗ್‌ ವಾರ್:‌ 25 ಕೈದಿಗಳು ಸಾವು

ಕೊಲಂಬೊ: ಶ್ರೀಲಂಕಾದ ಜೈಲಿನಲ್ಲಿ ಕೈದಿಗಳ ಎರಡು ಗುಂಪಿನ ಮಧ್ಯೆ ಗಲಾಟೆ ನಡೆದ ಪರಿಣಾಮ 25 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು…

11 hours ago

ಜನತೆಗೆ ಮತ್ತೊಂದು ಬ್ಯಾಡ್‌ನ್ಯೂಸ್:‌ ದುಬಾರಿಯಾಗಲಿದೆ ಸೇಬು

ನವದೆಹಲಿ: ಬೆಲೆ ಏರಿಕೆಯಿಂದ ಹೈರಾಣಾಗಿರುವ ಜನರಿಗೆ ಈಗ ಮತ್ತೊಂದು ಬ್ಯಾಡ್‌ ನ್ಯೂಸ್‌ ಸಿಕ್ಕಿದೆ. ಹವಾಮಾನ ವೈಪರೀತ್ಯದಿಂದಾಗಿ ಸೇಬು ಹಣ್ಣಿನ ಇಳುವರಿ…

11 hours ago

ಮೊಬೈಲ್‌ ಟಾರ್ಚ್‌ ಹಿಡಿದು ಬಸ್‌ ಚಾಲನೆ: ಮೂವರು ಅಮಾನತು

ಕಲಬುರ್ಗಿ: ಟಾರ್ಚ್‌ ಹಿಡಿದು ಬಸ್‌ ಚಾಲನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್‌ ಡ್ರೈವರ್‌ ಸೇರಿದಂತೆ ಮೂವರನ್ನು ಅಮಾನತು ಮಾಡಲಾಗಿದೆ. ತಾಂತ್ರಿಕ…

11 hours ago

ರಾಜ್ಯದಲ್ಲಿ ಚುರುಕು ಪಡೆದುಕೊಂಡ ಮಳೆ: ಜಲಾಶಯಗಳ ಒಳಹರಿವಿನಲ್ಲಿ ಏರಿಕೆ

ಬೆಂಗಳೂರು: ಕರ್ನಾಟಕದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮುಂಗಾರು ಮಳೆ ದಾಖಲಾಗದಿದ್ದರೂ, ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಉತ್ತರ…

12 hours ago

ಧಾರಾಕಾರ ಮಳೆಗೆ ತತ್ತರಿಸಿದ ಮುಂಬೈ

ಮುಂಬೈ: ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದೇಶದ ವಾಣಿಜ್ಯ ರಾಜಧಾನಿ ಮುಂಬೈ ತತ್ತರಿಸಿದೆ. ಮಳೆಯ ಆರ್ಭಟಕ್ಕೆ ನಗರದ…

12 hours ago