ರಾಜ್ಯ

ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಅವಮಾನವಾಗುತ್ತಿದೆ: ಸಚಿವ ಪ್ರಿಯಾಂಕ್‌ ಖರ್ಗೆ

ಕಲಬುರ್ಗಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ವಿದೇಶಾಂಗ ಸಚಿವ ಜೈಶಂಕರ್ ಅವರ ವಿದೇಶ ನೀತಿಯಿಂದಾಗಿ ಅಮೇರಿಕಾದ ವಿದೇಶಾಂಗ ಸಚಿವರು ಸೇರಿದಂತೆ ಪ್ರತಿಯೊಬ್ಬರು ಭಾರತದ ಬಗ್ಗೆ ಹಗುರವಾಗಿ ಮಾತನಾಡುಂತಾಗಿದೆ. ಇದರಿಂದಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಬಗ್ಗೆ ಅವಮಾನ ಅನುಭವಿಸುವಂತಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ವರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹರಿಹಾಯ್ದರು.

ಕಲಬುರ್ಗಿಯ ಐವಾನ್ ಇ ಶಾಹಿ ಅತಿಥಿ ಗೃಹದಲ್ಲಿ ತಮ್ಮನ್ನು ಭೇಟಿ ಮಾಡಿದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.

ಅಮೇರಿಕಾದ ವಿದೇಶಾಂಗ ಅಧಿಕಾರಿಯೊಬ್ಬರು ನಾವು ಭಾರತವನ್ನು ಬೆಳೆಯಲು ಬಿಡುವುದಿಲ್ಲ. ಯುದ್ದದ ಪರಿಣಾಮದಿಂದಾಗಿ ಭಾರತ, ರಷ್ಯಾದಿಂದ 30 ದಿನಗಳ ವರೆಗೆ ತೈಲ ಖರೀದಿಸಲು ಅನುಮತಿ ನೀಡಿದ್ದೇವೆ ಎಂದು ಹೇಳಿಕೆ ನೀಡಿದ್ದಾರೆ‌. ಭಾರತಕ್ಕೆ ಅನುಮತಿ ನೀಡಲು ಅವರು ಯಾರು? ಮೋದಿ, ಜೈಶಂಕರ್ ಸೇರಿದಂತೆ ಬಿಜೆಪಿ ನಾಯಕರು ಯಾರೊಬ್ಬರು ಈ ಬಗ್ಗೆ ಪ್ರತಿಕ್ರಿಯೆ ನೀಡಿಲ್ಲ. ಭಾರತದ ಬಗ್ಗೆ ಹಗುರವಾಗಿ ಮಾತನಾಡುತ್ತಿರುವುದರಿಂದಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಅವಮಾನವಾಗುತ್ತಿದೆ ಎಂದು ಖರ್ಗೆ ಟೀಕಿಸಿದರು.

ಪ್ರಶ್ನೆಯೊಂದಕ್ಕೆ‌ ಉತ್ತರಿಸುತ್ತಿದ್ದ ಸಚಿವರು, ನಾನು ಮನಸ್ಸು ಮಾಡಿದರೆ ಮೋದಿ ಅವರ ರಾಜಕೀಯ ಭವಿಷ್ಯ ಹಾಳು ಮಾಡಬಲ್ಲೆ. ಆದರೆ, ಮೋದಿ ನನ್ನ ಸ್ನೇಹಿತರು ಹಾಗಾಗಿ ನಾನು ಹಾಗೆ ಮಾಡುವುದಿಲ್ಲ ” ಎಂದು ಅಮೇರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಹೇಳಿದ್ದಾರೆ ಇದಕ್ಕೂ ಕೂಡಾ ಮೋದಿ ಪ್ರತಿಕ್ರಿಯೆ ನೀಡಿಲ್ಲ. ಯಾಕೆ ಅವರು ಮಾತಮಾಡುತ್ತಿಲ್ಲ, ಮೋದಿಯವರ ಬಗ್ಗೆ ಎಫ್ಸ್ಟೀನ್ ಫೈಲ್ ನಲ್ಲಿ ಏನಾದರೂ ಇದೆಯಾ ? ಎಂದು ಪ್ರಿಯಾಂಕ್ ಖರ್ಗೆ ವ್ಯಂಗ್ಯ ವಾಡಿದರು.

ಈ ಹಿಂದೆ ಮಧ್ಯಪ್ರಾಚ್ಯಗಳ ವಿಚಾರದಲ್ಲಿ ಅಮೇರಿಕಾ ಮಧ್ಯೆ ಪ್ರವೇಶಿಸಿದಾಗ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಅವರು ಆ ಬಗ್ಗೆ ಆಕ್ಷೇಪ ಎತ್ತಿದ್ದರು. ಅಂತಹ ಎದೆಗಾರಿಕೆ ಮೋದಿಗೆ ಯಾಕೆ ಇಲ್ಲ? ಎಂದು ಪ್ರಶ್ನಿಸಿದ ಸಚಿವರು, ಸಚಿವ ಪ್ರಹ್ಲಾದ್ ಜೋಷಿ ಸೇರಿದಂತೆ ಬಿಜೆಪಿವರು ನೆಹರು , ಸೋನಿಯಾ, ರಾಹುಲ್ ಗಾಂಧಿ ಬಗ್ಗೆ ಮಾತನಾಡುತ್ತಾರೆ. ಸ್ವತಃ ಮೋದಿ ಸಿನೆಮಾ ನಟ ನಟಿಯರ ಮದುವೆ, ಕ್ರಿಕೆಟ್ ತಂಡಕ್ಕೆ ಶುಭಾಶಯ ಕೋರಲು ಹೋಗುತ್ತಾರೆ. ಆದರೆ, ವಿದೇಶಾಂಗ ನೀತಿಗಖ ಬಗ್ಗೆ ಭಾರತ ದಿಟ್ಟ‌ನಿಲುವಿನ ಬಗ್ಗೆ ಮಾತನಾಡಲು‌ ಅವರಿಗೆ ಸಮಯವಿಲ್ಲ ಎಂದು ಕುಟುಕಿದರು.

ಗೃಹ ಬಳಕೆ‌ ಸಿಲಿಂಡರ್ ಬೆಲೆ ಏರಿಕೆ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಆ ಬಗ್ಗೆ ಕೇಂದ್ರ ಸಚಿವರು ಉತ್ತರಿಸಲಿ. ಬೆಲೆ ಏರಿಕೆಯ ಮಾಸ್ಟರ್ ಸ್ಟೋಕ್ ಬಗ್ಗೆ‌ ಬಿಜೆಪಿಯವರು ಉತ್ತರಿಸಲಿ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಸವಾಲು ಹಾಕಿದರು.

ಕಾಲೇಜುಗಳಲ್ಲಿ‌ ಚುನಾವಣೆ ನಡೆಸುವ ವಿಚಾರಕ್ಕೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದ ಪ್ರಿಯಾಂಕ್ ಖರ್ಗೆ, ಚುನಾವಣೆಗೆ ಪೋಷಕರ ವಿರೋಧ ಸೇರಿದಂತೆ ಎಲ್ಲ ವಿಚಾರಗಳ ಬಗ್ಗೆ ಕೂಲಂಕುಷ ಪರಿಶೀಲನೆ ನಡೆಸಲಾಗುತ್ತದೆ. ಜೆಎನ್ ಯೂ ಸೇರಿದಂತೆ ಬಹುತೇಕ ‌ಶೈಕ್ಷಣಿಕ ಕೇಂದ್ರಗಳಲ್ಲಿ‌ ವಿದ್ಯಾರ್ಥಿ ಸಂಘಕ್ಕೆ‌ ಚುನಾವಣೆ ನಡೆಸಲಾಗುತ್ತಿದೆ. ಎಲ್ಲ ಹಂತದ ಪರಿಶೀಲನೆ ನಂತರ‌ ರೂಪಿಸಲಾದ ನಿಯಮಗಳ ಪ್ರಕಾರ ಎನ್ ಎಸ್ ಐ ಯೂ, ಎಬಿ ವಿಪಿ ಸಂಘಗಳು ಒಪ್ಪಬೇಕಾಗುತ್ತದೆ ಎಂದರು.

ಗ್ರಾಮಪಂಚಾಯತ್ ಅಡಿಯಲ್ಲಿ ಬಿಲ್ ಕಲೆಕ್ಟರ್ ಹಾಗೂ ಡಾಟಾ ಆಪರೇಟರ್ ಅವರುಗಳು ನೇಮಕಾತಿಗೆ ಸಂಬಂಧಿಸಿದಂತೆ ಪ್ರಾವಿಷನಲ್ ಲಿಸ್ಟ್ ಇನ್ನೂ ನೆನೆಗುದಿಗೆ ಬಿದ್ದಿರುವ ಕುರಿತು ಉತ್ತರಿಸಿದ ಸಚಿವರು ಈ ಬಗ್ಗೆ ಒಂದು ವಾರದಲ್ಲೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

10 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

11 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

13 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

13 hours ago

ಹನೂರು ಎನ್‌ಕೌಂಟರ್‌ ಬೆನ್ನಲ್ಲೇ ಕಳ್ಳಬೇಟೆ ಕಡಿವಾಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…

17 hours ago

ಟೋಲ್ ಬಳಿ ಸೈನ್ ಬೋರ್ಡ್‌ಗೆ ಖಾಸಗಿ ಬಸ್ ಡಿಕ್ಕಿ; ಇಬ್ಬರು ದುರ್ಮರಣ, 20ಕ್ಕೂ ಹೆಚ್ಚು ಜನರಿಗೆ ಗಾಯ

ಮಂಡ್ಯ: ಟೋಲ್‌ ಬಳಿಯ ಸೈನ್ ಬೋರ್ಡ್‌ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ…

17 hours ago