ಬೆಂಗಳೂರು: ಪಹಲ್ಗಾಮ್ ಉಗ್ರರ ದಾಳಿಗೆ ಪ್ರತೀಕಾರವಾಗಿ ಪಾಕ್ ವಿರುದ್ಧ ಭಾರತ ಮತ್ತಷ್ಟು ಸೇಡು ತೀರಿಸಿಕೊಳ್ಳಬೇಕು ಎಂದು ಕಾಂಗ್ರೆಸ್ ನಾಯಕ ಆರ್.ವಿ.ದೇಶಪಾಂಡೆ ಹೇಳಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕರ ಗುಂಡಿನ ದಾಳಿಗೆ ಸಿಲುಕಿ 26 ಮಂದಿ ಅಮಾಯಕರು ಸಾವನ್ನಪ್ಪಿದ್ದರು.
ಈ ಬೆನ್ನಲ್ಲೇ ಭಾರತವು ಪಾಕ್ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದಕ್ಕೆ ಹೆದರಿದ ಪಾಕ್ ಯುದ್ಧ ವಿರಾಮಕ್ಕೆ ಮನವಿ ಮಾಡಿತ್ತು. ಆದರೂ ಪಾಕ್ ಸೇನೆ ಉದ್ದೇಶ ಪೂರ್ವಕವಾಗಿ ಭಾರತದ ಮೇಲೆ ಫೈರಿಂಗ್ ಮಾಡಿದೆ. ಈ ಮೂಲಕ ಕದನ ವಿರಾಮ ಉಲ್ಲಂಘನೆ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ:- ಕದನ ವಿರಾಮದ ಬಳಿಕ ಸಹಜ ಸ್ಥಿತಿಗೆ ಮರಳುತ್ತಿರುವ ಜಮ್ಮು ಮತ್ತು ಕಾಶ್ಮೀರ
ಇನ್ನು ನಮ್ಮ ಸೇನಾಪಡೆ ಪಾಕ್ಗೆ ತಕ್ಕ ಉತ್ತರ ಕೊಟ್ಟಿದೆ. ನಮ್ಮ 3 ಸೇನಾಪಡೆಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ಆದರೂ ಪಾಕಿಸ್ತಾನ ಪ್ರತಿ ಬಾರಿ ಅಧಿಕ ಪ್ರಸಂಗತನ ಮಾಡುತ್ತಿದೆ. ಕೇಂದ್ರ ಸರ್ಕಾರದ ನಿರ್ಣಯವನ್ನು ನಾನು ಮೆಚ್ಚುತ್ತೇನೆ ಎಂದು ಹಾಡಿ ಹೊಗಳಿದ್ದಾರೆ.
ಪಹಲ್ಗಾಮ್ ಹತ್ಯೆಗೆ ಇನ್ನೂ ಹೆಚ್ಚಿಗೆ ಸೇಡು ತೀರಿಸಿಕೊಳ್ಳಬೇಕು. ಭಾರತ ಸರ್ಕಾರ, ಸೇನೆ ಉತ್ತಮ ಕೆಲಸ ಮಾಡುತ್ತಿದ್ದಾರೆ. ಅದನ್ನು ಮೆಚ್ಚಬೇಕು. ಈಗಾಗಲೇ ನಮ್ಮ ಸೇನೆ ಎಚ್ಚರಿಕೆ ಕೊಟ್ಟಿದೆ ಎಂದರು.
ಮೈಸೂರು : ಶಿಷ್ಯವೇತನಕ್ಕೆ ಆಗ್ರಹಿಸಿ ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರು ನಡೆಸುತ್ತಿರುವ ಹೋರಾಟವನ್ನು ತೀವ್ರಗೊಳಿಸಲು ಭಾನುವಾರ ಬೆಳಿಗ್ಗೆ 11ಕ್ಕೆ ವಿಶ್ವವಿದ್ಯಾನಿಲಯದ ಕ್ರಾಫರ್ಡ್…
ಮುಂಬೈ : ಇಲ್ಲಿನ ಪರ್ಭಾನಿಯಲ್ಲಿರುವ ನಿರ್ಮಾಣ ಹಂತದ ಹನುಮನ ದೇವಾಲಯದ ಛಾವಣಿ ಕುಸಿದು 7 ಭಕ್ತರು ಸಾವನ್ನಪ್ಪಿದ್ದು, 30ಕ್ಕೂ ಅಧಿಕ…
ಸಿದ್ದಾಪುರ : ಟಿಂಬರ್ ಯೂನಿಯನ್ ಸಭೆಯಲ್ಲಿ ಮಾರಾಮಾರಿ ನಡೆದು ಇಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಆರೋಪದಡಿ ಐವರ ವಿರುದ್ಧ ಸಿದ್ದಾಪುರ…
ಹನೂರು : ಅನೇಕ ದಿನಗಳಿಂದ ಸಾಕುಪ್ರಾಣಿಗಳನ್ನು ಕೊಂದು ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆಗೆ ತಲೆ ನೋವಾಗಿದ್ದ ಚಿರತೆಯನ್ನು ಕೊನೆಗೂ ಸೆರೆ…
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…
ಬೈರುತ್: ಲೆಬನಾನ್ ಮೇಲೆ ಇಸ್ರೇಲ್ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…