ರಾಜ್ಯ

ಭಾರತ ಒಲಂಪಿಕ್ ಪದಕದಲ್ಲೂ ನಂಬರ್ ಒನ್ ಆಗಬೇಕು : ಸಿ.ಎಂ ಕರೆ

ಮಂಗಳೂರು : ಜನಸಂಖ್ಯೆಯಲ್ಲಿ ದೇಶ ನಂಬರ್ ಒನ್. ಒಲಂಪಿಕ್ ಪದಕದಲ್ಲೂ ನಂಬರ್ ಒನ್ ಆಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ನ್ಯೂ ಉರ್ವ ಕ್ರೀಡಾಂಗಣದಲ್ಲಿ ನಡೆದ “ಚೀಫ್ ಮಿನಿಸ್ಟರ್ – ಮಂಗಳೂರು ಇಂಡಿಯಾ ಇಂಟರ್ ನ್ಯಾಷನಲ್ ಚಾಲೆಂಜ್ 2025 ಪಂದ್ಯಾವಳಿ”ಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಒಲಂಪಿಕ್ಸ್, ಪ್ಯಾರಾ ಒಲಂಪಿಕ್ಸ್ ಸೇರಿ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದವರಿಗೆ ರಾಜ್ಯ ಸರ್ಕಾರದ ಇಲಾಖೆಗಳಲ್ಲಿ ಎ ಗುಂಪಿನ ಹುದ್ದೆಗಳ ಜೊತೆಗೆ ಇತರೆ ಹುದ್ದೆಗಳನ್ನೂ ಮೀಸಲಿಟ್ಟಿದ್ದೇವೆ.

ಇದನ್ನೂ ಓದಿ:-ಭಾರತ ಒಲಂಪಿಕ್ ಪದಕದಲ್ಲೂ ನಂಬರ್ ಒನ್ ಆಗಬೇಕು : ಸಿ.ಎಂ ಕರೆ

DySP ಸೇರಿ ಇತರೆ ಪೊಲೀಸ್ ಹುದ್ದೆಗಳಲ್ಲೂ ಶೇ2 ರಷ್ಟಿದ್ದ ಹುದ್ದೆ ಮೀಸಲಾತಿಯನ್ನು ಶೇ3 ಕ್ಕೆ ಹೆಚ್ವಿಸಿದ್ದೇವೆ. ಜೊತೆಗೆ ಒಲಂಪಿಕ್ ನಲ್ಲಿ ಪದಕ ತಂದು ರಾಜ್ಯದ, ರಾಷ್ಟ್ರದ ಕೀರ್ತಿ ಹೆಚ್ಚಿಸುವವರಿಗೆ 5 ಕೋಟಿ ರೂಪಾಯಿ ಬಹುಮಾನವನ್ನೂ ಘೋಷಿಸಿದ್ದೇನೆ. ಇನ್ನೂ ಅಗತ್ಯವಾದ ಅನುಕೂಲಗಳನ್ನೆಲ್ಲಾ ಮಾಡಿಕೊಡಲು ಸರ್ಕಾರ ಸಿದ್ಧವಿದೆ. ಒಟ್ಟಿನಲ್ಲಿ ನೀವು ಪದಕ ತನ್ನಿ ಎಂದು ಕ್ರೀಡಾಪಟುಗಳಿಗೆ ಕರೆ ನೀಡಿದರು.

ವಿಶ್ವದ ಅತ್ಯಂತ ಜನಪ್ರಿಯ ಆಟಗಳಲ್ಲಿ ಬ್ಯಾಂಡ್ಮಿಂಟನ್ ಕೂಡ ಒಂದು. ಪ್ರಕಾಶ್ ಪಡುಕೋಣೆ, ಪುಲ್ಲೇಲ ಗೋಪಿಚಂದ್, ಸೈನಾ ನೆಹ್ವಾಲ್, ಪಿ.ವಿ.ಸಿಂಧು ಭಾರತೀಯ ಬ್ಯಾಡ್ಮಿಂಟನ್ ಗೆ ಅಡಿಪಾಯ ಹಾಕಿ ದೇಶಕ್ಕೆ ಕೀರ್ತಿ ತಂದಿದ್ದಾರೆ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ಮೆಚ್ಚುಗೆ ಸೂಚಿಸಿದರು.

ಈ ಪಂದ್ಯಾವಳಿ ನಡೆಯುತ್ತಿರುವ ಈ ಉರ್ವ ಒಳಾಂಗಣ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ ಮಾಡಿದ್ದು ನಾನೇ, ಉದ್ಘಾಟನೆ ಕೂಡ ನಾನೇ ಮಾಡಿದೆ. ನಮ್ಮ ಸರ್ಕಾರದ್ದೇ ಹಣ. ಹಿಂದಿನ ಬಿಜೆಪಿ ಸರ್ಕಾರ ಈ ಕ್ರೀಡಾಂಗಣ ಪೂರ್ಣಗೊಳ್ಳಲು ಸಹಕಾರ ನೀಡಲಿಲ್ಲ. ಆದರೆ ಮತ್ತೆ ನಾನೇ ಮುಖ್ಯಮಂತ್ರಿ ಆಗಿ ಬಂದು ಒಟ್ಟು 38 ಕೋಟಿ ರೂಪಾಯಿಗಳನ್ನು ನೀಡಿ ಕ್ರೀಡಾಂಗಣ ಪೂರ್ಣಗೊಳಿಸಲಾಯಿತು ಎಂದು ವಿವರಿಸಿದರು.

ಆಂದೋಲನ ಡೆಸ್ಕ್

Recent Posts

ಕ್ಯಾತನಹಳ್ಳಿಯಲ್ಲಿ ಅರ್ಧಕ್ಕೆ ನಿಂತ ಕಾಮಗಾರಿಗಳು

ಮಹೇಶ್ ಕರೋಠಿ ಕಿಕ್ಕೇರಿ: ಇಲ್ಲಿಗೆ ಸಮೀಪದ ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ್ಯಾತನಹಳ್ಳಿ ಗ್ರಾಮದಲ್ಲಿ ಕಳೆದ ೨-೩ ವರ್ಷಗಳಿಂದ ಹಲವು…

4 hours ago

ಓದುಗರ ಪತ್ರ: ಬಂದರು ಎಂದರೆ…

ನೆಂಟರಿಷ್ಟರು ಮನೆಗೆ ಬಂದರು ಎಂದರೆ... ಏನು ಎತ್ತ, ಹೇಗೆ ಅವರ ಆತಿಥ್ಯ? ಇಂಥ ಸಂಕಷ್ಟಗಳಿಗೆಲ್ಲಾ ಕಾರಣ,ಬಂದ್ ಆಗಿರುವ ಆ ಹಾರ್ಮುಜ್…

5 hours ago

ಓದುಗರ ಪತ್ರ: ರಸ್ತೆ ಡುಬ್ಬಗಳಿಗೆ ಬಿಳಿ ಬಣ್ಣ ಬಳಿಯಿರಿ

ಮೈಸೂರಿನಿಂದ ಎಚ್.ಡಿ.ಕೋಟೆ ಮಾರ್ಗದಲ್ಲಿ ಬರುವ ಮಾದಾಪುರ ಗ್ರಾಮದಿಂದ ಕೆ. ಬೆಳತ್ತೂರು ಹಾಗೂ ಲೆಂಕೆ ಗ್ರಾಮದವರೆಗೂ ರಸ್ತೆ ಡಾಂಬರೀಕರಣವಾಗಿದೆ. ಈ ರಸ್ತೆಯಲ್ಲಿ…

5 hours ago

ಓದುಗರ ಪತ್ರ: ರಾಜಕೀಯದ ಪ್ರಚಾರ ಸಾಧನವಾಗುತ್ತಿರುವ ಜಾತ್ರೆಗಳು

ಜಾತ್ರೆಗಳು ಹಾಗೂ ಹಬ್ಬಗಳು ಗ್ರಾಮದ ಎಲ್ಲಾ ಜನರು ಒಟ್ಟುಗೂಡಿ ಮಾಡುವ ಕಾರ್ಯಕ್ರಮವಾಗಿವೆ. ಇದರಲ್ಲಿ ಜನರ ಒಗ್ಗಟ್ಟು, ಪರಸ್ಪರ ಸಹಕಾರ ಕಾಣುತ್ತೇವೆ.…

5 hours ago

ಓದುಗರ ಪತ್ರ: ಸೆಸ್ಕ್ ಯುಜಿ ಕೇಬಲ್ ಮುಂಜಾಗ್ರತೆ ವಹಿಸಿ

ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್)ದಿಂದ ಅಂಡರ್ ಗ್ರೌಂಡ್ ಕೇಬಲ್ ಅನ್ನು ಅಳಡಿಸುತ್ತಿದ್ದು, ಕಾಮಗಾರಿಯ…

5 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಕೆನೆಪದರ ಪರಿಶಿಷ್ಟರಿಗೆ ಬೇಡವೆನ್ನುವ ಕೇಂದ್ರಕ್ಕೆ ಮತ್ತೆ ಸುಪ್ರೀಂ ತಾಕೀತು

ಮೀಸಲಾತಿ ವ್ಯವಸ್ಥೆ ಜಾರಿ ಸಂಬಂಧ ಪರ ಮತ್ತು ವಿರೋಧದ ಚರ್ಚೆ ಹಾದಿ ಬೀದಿ, ಹಳ್ಳಿಯ ಪಂಚಾಯಿತಿ ಕಟ್ಟೆಗಳಲ್ಲಿ ಮತ್ತು ಖಾಸಗಿಯಾಗಿ…

5 hours ago