ರಾಜ್ಯ

ಭಾರತ ಒಲಂಪಿಕ್ ಪದಕದಲ್ಲೂ ನಂಬರ್ ಒನ್ ಆಗಬೇಕು : ಸಿ.ಎಂ ಕರೆ

ಮಂಗಳೂರು : ಜನಸಂಖ್ಯೆಯಲ್ಲಿ ದೇಶ ನಂಬರ್ ಒನ್. ಒಲಂಪಿಕ್ ಪದಕದಲ್ಲೂ ನಂಬರ್ ಒನ್ ಆಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ನ್ಯೂ ಉರ್ವ ಕ್ರೀಡಾಂಗಣದಲ್ಲಿ ನಡೆದ “ಚೀಫ್ ಮಿನಿಸ್ಟರ್ – ಮಂಗಳೂರು ಇಂಡಿಯಾ ಇಂಟರ್ ನ್ಯಾಷನಲ್ ಚಾಲೆಂಜ್ 2025 ಪಂದ್ಯಾವಳಿ”ಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಒಲಂಪಿಕ್ಸ್, ಪ್ಯಾರಾ ಒಲಂಪಿಕ್ಸ್ ಸೇರಿ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದವರಿಗೆ ರಾಜ್ಯ ಸರ್ಕಾರದ ಇಲಾಖೆಗಳಲ್ಲಿ ಎ ಗುಂಪಿನ ಹುದ್ದೆಗಳ ಜೊತೆಗೆ ಇತರೆ ಹುದ್ದೆಗಳನ್ನೂ ಮೀಸಲಿಟ್ಟಿದ್ದೇವೆ.

ಇದನ್ನೂ ಓದಿ:-ಭಾರತ ಒಲಂಪಿಕ್ ಪದಕದಲ್ಲೂ ನಂಬರ್ ಒನ್ ಆಗಬೇಕು : ಸಿ.ಎಂ ಕರೆ

DySP ಸೇರಿ ಇತರೆ ಪೊಲೀಸ್ ಹುದ್ದೆಗಳಲ್ಲೂ ಶೇ2 ರಷ್ಟಿದ್ದ ಹುದ್ದೆ ಮೀಸಲಾತಿಯನ್ನು ಶೇ3 ಕ್ಕೆ ಹೆಚ್ವಿಸಿದ್ದೇವೆ. ಜೊತೆಗೆ ಒಲಂಪಿಕ್ ನಲ್ಲಿ ಪದಕ ತಂದು ರಾಜ್ಯದ, ರಾಷ್ಟ್ರದ ಕೀರ್ತಿ ಹೆಚ್ಚಿಸುವವರಿಗೆ 5 ಕೋಟಿ ರೂಪಾಯಿ ಬಹುಮಾನವನ್ನೂ ಘೋಷಿಸಿದ್ದೇನೆ. ಇನ್ನೂ ಅಗತ್ಯವಾದ ಅನುಕೂಲಗಳನ್ನೆಲ್ಲಾ ಮಾಡಿಕೊಡಲು ಸರ್ಕಾರ ಸಿದ್ಧವಿದೆ. ಒಟ್ಟಿನಲ್ಲಿ ನೀವು ಪದಕ ತನ್ನಿ ಎಂದು ಕ್ರೀಡಾಪಟುಗಳಿಗೆ ಕರೆ ನೀಡಿದರು.

ವಿಶ್ವದ ಅತ್ಯಂತ ಜನಪ್ರಿಯ ಆಟಗಳಲ್ಲಿ ಬ್ಯಾಂಡ್ಮಿಂಟನ್ ಕೂಡ ಒಂದು. ಪ್ರಕಾಶ್ ಪಡುಕೋಣೆ, ಪುಲ್ಲೇಲ ಗೋಪಿಚಂದ್, ಸೈನಾ ನೆಹ್ವಾಲ್, ಪಿ.ವಿ.ಸಿಂಧು ಭಾರತೀಯ ಬ್ಯಾಡ್ಮಿಂಟನ್ ಗೆ ಅಡಿಪಾಯ ಹಾಕಿ ದೇಶಕ್ಕೆ ಕೀರ್ತಿ ತಂದಿದ್ದಾರೆ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ಮೆಚ್ಚುಗೆ ಸೂಚಿಸಿದರು.

ಈ ಪಂದ್ಯಾವಳಿ ನಡೆಯುತ್ತಿರುವ ಈ ಉರ್ವ ಒಳಾಂಗಣ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ ಮಾಡಿದ್ದು ನಾನೇ, ಉದ್ಘಾಟನೆ ಕೂಡ ನಾನೇ ಮಾಡಿದೆ. ನಮ್ಮ ಸರ್ಕಾರದ್ದೇ ಹಣ. ಹಿಂದಿನ ಬಿಜೆಪಿ ಸರ್ಕಾರ ಈ ಕ್ರೀಡಾಂಗಣ ಪೂರ್ಣಗೊಳ್ಳಲು ಸಹಕಾರ ನೀಡಲಿಲ್ಲ. ಆದರೆ ಮತ್ತೆ ನಾನೇ ಮುಖ್ಯಮಂತ್ರಿ ಆಗಿ ಬಂದು ಒಟ್ಟು 38 ಕೋಟಿ ರೂಪಾಯಿಗಳನ್ನು ನೀಡಿ ಕ್ರೀಡಾಂಗಣ ಪೂರ್ಣಗೊಳಿಸಲಾಯಿತು ಎಂದು ವಿವರಿಸಿದರು.

ಆಂದೋಲನ ಡೆಸ್ಕ್

Recent Posts

ಮಲ್ಲಯ್ಯನಪುರ ಗುಡ್ಡದಲ್ಲಿ ಥೋರಿಯಂ ಖನಿಜ ನಿಕ್ಷೇಪ ಪತ್ತೆ

ಗುಂಡ್ಲುಪೇಟೆ: ಪಟ್ಟಣ ಮತ್ತು ಮಲ್ಲಯ್ಯನಪುರ ನಡುವಿನ ಅನ್ಗಲ್ ಗುಡ್ಡದ ತಪ್ಪಲಿನ ಪ್ರದೇಶದಲ್ಲಿ ಅಪರೂಪದ ಥೋರಿಯಂ ನಿಕ್ಷೇಪ ಪತ್ತೆಯಾಗಿದೆ. ಹಿಂದಿನ ವರ್ಷ…

4 hours ago

ಓದುಗರ ಪತ್ರ: ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಸ್ಥಳಾಂತರಿಸಿ

ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಮೈಸೂರು -ಮಾನಂದವಾಡಿ ಮುಖ್ಯ ರಸ್ತೆಯಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಖಾಸಗಿ ಕಟ್ಟಡದ ಎರಡನೇ…

4 hours ago

ಓದುಗರ ಪತ್ರ: ಕಾಣಿಕೆ ದುರುಪಯೋಗ ತಡೆಗೆ ಸರ್ಕಾರ ಮುಂದಾಗಲಿ

ಅಯೋಧ್ಯೆಯ ರಾಮ ಮಂದಿರವೂ ಸೇರಿದಂತೆ ದೇಶದ ವಿವಿಧ ದೇವಾಲಯಗಳಲ್ಲಿ ಕಾಣಿಕೆ ಹಣ, ದೇವರಿಗೆ ಭಕ್ತರು ಕಾಣಿಕೆ ರೂಪದಲ್ಲಿ ಸಲ್ಲಿಸುವ ಚಿನ್ನಾಭರಣಗಳು…

4 hours ago

ಓದುಗರ ಪತ್ರ: ಮರದ ಕೆಳಗಿರುವ ವಿದ್ಯುತ್ ಕೇಬಲ್ ತೆರವುಗೊಳಿಸಿ

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್)ದವರು ಮೈಸೂರು ನಗರದ ವಿವಿಧೆಡೆ ಭೂಗತ ಕೇಬಲ್‌ಗಳನ್ನು ಅಳವಡಿಸುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಸೆಸ್ಕ್ ಯುಜಿ ಕೇಬಲ್…

4 hours ago

ಝೆನ್‌ ಕತೆಗಳು: ಸೀಜೋಳ ನಿಜವಾದ ಆತ್ಮ ಯಾವುದು?

ಸಂಗ್ರಹ ಮತ್ತು ಅನುವಾದ ಚೇತನಾ ತೀರ್ಥಹಳ್ಳಿ  ಚೋಕನ್ ಎಂಬವನಿಗೆ ಸೀಜೋ ಎಂಬ ಸುಂದರ ಮಗಳಿದ್ದಳು. ಚೋಕನ್ ತನ್ನ ದೂರದ ಸಂಬಂಧಿಯಾದ…

5 hours ago

ಎಸ್‌ಐಆರ್: ಶೇ.64.09ರಷ್ಟು ನಮೂನೆಗಳ ವಿತರಣೆ

ನವೀನ್ ಡಿಸೋಜ ಕೊಡಗಿನಲ್ಲಿ ಒಟ್ಟು ೪,೬೮,೬೫೭ ಮತದಾರರ ಪೈಕಿ ೩,೦೦,೩೬೯ ಮಂದಿಗೆ ನಮೂನೆ ವಿತರಣೆ; ೯,೧೨೫ ನಮೂನೆಗಳ ಡಿಜಿಟಲೀಕರಣ ಮಡಿಕೇರಿ:…

5 hours ago