ರಾಜ್ಯ

ಇಂಡಿಯಾ ಸ್ಕಿಲ್ಸ್ 2025-26 ರಾಷ್ಟ್ರೀಯ ಸ್ಪರ್ಧೆ : ಕರ್ನಾಟಕಕ್ಕೆ 3ನೇ ಸ್ಥಾನ

ಬೆಂಗಳೂರು : ಕೌಶಲ್ಯ ಕ್ಷೇತ್ರದಲ್ಲಿ ಕರ್ನಾಟಕ ಈಗ ಇಡೀ ದೇಶದಲ್ಲಿ ಮುಂಚೂಣಿಯತ್ತ ಸಾಗುತ್ತಿದೆ. ಇತ್ತೀಚೆಗೆ ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್‌ಪೋ ಮಾರ್ಟ್‌ನಲ್ಲಿ ನಡೆದ ಇಂಡಿಯಾ ಸ್ಕಿಲ್ಸ್ 2025-26 ರಾಷ್ಟ್ರೀಯ ಸ್ಪರ್ಧೆಯಲ್ಲಿ ಕರ್ನಾಟಕ 3 ನೇ ಸ್ಥಾನವನ್ನು ಪಡೆದುಕೊಂಡಿದೆ.

32 ಕೌಶಲ್ಯ ವಿಭಾಗದಲ್ಲಿ ನಡೆದ ಸ್ಪರ್ಧೆಗಳಲ್ಲಿ 48 ಮಂದಿ ಭಾಗವಹಿಸಿದ್ದರು. ಒಟ್ಟು 29 ವಿಭಾಗದಲ್ಲಿ ಕರ್ನಾಟಕ ತನ್ನ ಹಿರಿಮೆ ಮೆರೆದಿದೆ. ಕ್ಲೌಡ್ ಕಂಪ್ಯೂಟಿಂಗ್, ಸೈಬರ್ ಸೆಕ್ಯುರಿಟಿ, ಮೆಕಾಟ್ರಾನಿಕ್ಸ್, ಸಂಯೋಜಕ ಉತ್ಪಾದನೆ ಮತ್ತು ಬೇಕರಿ ಮತ್ತು ದೃಶ್ಯ ವ್ಯಾಪಾರೀಕರಣ ಸೇರಿದಂತೆ ಹೈಟೆಕ್ ಮತ್ತು ಸೃಜನಶೀಲ ಕ್ಷೇತ್ರಗಳಲ್ಲಿ ಕರ್ನಾಟಕ ಗಮನಾರ್ಹ ಸಾಧನೆ ಮಾಡಿದೆ.

ಕರ್ನಾಟಕ ತಂಡದ ರಾಜ್ಯ ಅಧಿಕಾರಿ ಮತ್ತು ಮಾರ್ಗದರ್ಶಕ ಕ್ಯಾಪ್ಟನ್ ಕೌಸ್ತವ್ ನಾಥ್ ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಈ ಫಲಿತಾಂಶ ನಿಜಕ್ಕೂ ಗಮನಾರ್ಹ ಸಾಧನೆಯಾಗಿದೆ. ನಾವು ಅಪಾರ ಪ್ರತಿಭೆಯನ್ನು ತೋರಿಸಿದ್ದೇವೆ, ಮುಂದಿನ ಬಾರಿ ಅಗ್ರ ಸ್ಥಾನವನ್ನು ಪಡೆಯಲು ಉತ್ತಮ ರೀತಿಯಲ್ಲಿ ಪರಿಶ್ರಮ ಪಡುತ್ತೇವೆ ಎಂದರು.

ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ್ ಆರ್. ಪಾಟೀಲ್, ಹಿರಿಯ ಅಧಿಕಾರಿಗಳಾದ ಇ.ವಿ. ರಮಣ ರೆಡ್ಡಿ, ಮನೋಜ್ ಕುಮಾರ್ ಮೀನಾ, ಎಚ್‌ಎನ್ ಗೋಪಾಲ ಕೃಷ್ಣ ಮತ್ತು ಬಿ.ಎಸ್. ಸುಮತಿ ಅವರ ಮಾರ್ಗದರ್ಶನ ಮತ್ತು ಬೆಂಬಲಕ್ಕಾಗಿ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದರು.

ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ (KSDC) ದಿಂದ ತರಬೇತಿ ಪಡೆದ ಕರ್ನಾಟಕದ ವಿದ್ಯಾರ್ಥಿಗಳು 10 ಚಿನ್ನ, 6 ಬೆಳ್ಳಿ, 6 ಕಂಚು ಮತ್ತು 7 ಶ್ರೇಷ್ಠತೆ ಪದಕಗಳನ್ನು ಒಳಗೊಂಡಂತೆ ಒಟ್ಟು 29 ಪದಕಗಳನ್ನು ಪಡೆದುಕೊಂಡಿದ್ದಾರೆ.

ಚಿನ್ನ, ಬೆಳ್ಳಿ ಮತ್ತು ಕಂಚಿನ ಪದಕ ವಿಜೇತರು ಈಗ ಚೀನಾದ ಶಾಂಘೈನಲ್ಲಿರುವ ವರ್ಲ್ಡ್ ಸ್ಕಿಲ್ಸ್ ಇಂಟರ್‌ ನ್ಯಾಷನಲ್‌ನಲ್ಲಿ ಭಾರತವನ್ನು ಪ್ರತಿನಿಧಿಸಲು ತರಬೇತಿ ಪಡೆಯಲಿದ್ದಾರೆ. ರಾಜ್ಯ ಸರ್ಕಾರವು ವಿಶ್ವ ದರ್ಜೆಯ ಮೂಲಸೌಕರ್ಯ ಮತ್ತು ಮಾರ್ಗದರ್ಶನವನ್ನು ಒದಗಿಸಲು ಬದ್ಧವಾಗಿದೆ ಎಂದು ಹಿರಿಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಚರಂಡಿಯಿಂದ ವಿದ್ಯುತ್ ಕಂಬವನ್ನು ಬೇರ್ಪಡಿಸಿ

ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯಲ್ಲಿ ಚರಂಡಿ, ಪಾದಚಾರಿಮಾರ್ಗ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಸಿದ್ದಲಿಂಗೇಶ್ವರ ಅಂಗಡಿ ಬಳಿ ವಿದ್ಯುತ್…

4 hours ago

ಓದುಗರ ಪತ್ರ: ಬೇಲಿಯೇ ಎದ್ದು ಹೊಲ ಮೇಯ್ದಂತೆ !

ಮೈಸೂರು ನಗರದ ಪ್ರತಿಷ್ಠಿತ ಸಹಕಾರ ಬ್ಯಾಂಕ್ ಒಂದರಲ್ಲಿ ಸಾಲ ನೀಡುವಿಕೆಯಲ್ಲಿ ಕೊಟ್ಯಂತರ ರೂ. ಅವ್ಯವಹಾರ ನಡೆದಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ.…

4 hours ago

ಓದುಗರ ಪತ್ರ: ಕೆಪಿಎಸ್‌ಸಿ ಶುದ್ಧೀಕರಣದ ಅಗತ್ಯ

ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯದ ಅತ್ಯುನ್ನತ ನಾಗರಿಕ ಸೇವೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿಯುತ ಸಂಸ್ಥೆಯಾಗಿದೆ. ಆದರೆ ಇತ್ತೀಚಿನ…

4 hours ago

ದಸರೆಯ ಹಿಂದೆ ಸಾಗುವ ಗಜಪಡೆ ಮಹಾಯಾನ

ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮಾವುತ - ಆನೆ ನಡುವೆ ಹೃದಯಸ್ಪರ್ಶಿ ಸಂಬಂಧ ಮೈಸೂರು ದಸರಾ ಎಂದಾಕ್ಷಣ ನಮ್ಮ ಕಣ್ಣ…

4 hours ago

ಗರ್ಭಕೋಶ ಕ್ಯಾನ್ಸರ್‌ಗೆ ಲಸಿಕೆ ಅಸ್ತ್ರ

ಚಿರಂಜೀವಿ ಸಿ. ಹುಲ್ಲಹಳ್ಳಿ ಜಿಲ್ಲೆಯಲ್ಲಿ ಎಚ್‌ಪಿವಿ ಅಭಿಯಾನ; ಶೇ.೬೮.೮ರಷ್ಟು ಪ್ರಗತಿ ೧೫,೫೧೮ ಬಾಲಕಿಯರಿಗೆ ಲಸಿಕೆ ನೀಡುವ ಗುರಿ; ೮,೩೬೦ ಸಾಧನೆ…

4 hours ago

ಕೊಡಗಿನಲ್ಲಿ ಇಂದು ಕೈಲ್‌ಪೊಳ್ದ್ ಸಂಭ್ರಮ

ಎಸ್.ಎ. ಹುಸೇನ್ ಆಯುಧಗಳಿಗೆ ವಿಶೇಷ ಪೂಜೆ; ಜಿಲ್ಲೆಯಾದ್ಯಂತ ಸಂಭ್ರಮದ ಹಬ್ಬದಾಚರಣೆಗೆ ಸಿದ್ಧತೆ ಮಡಿಕೇರಿ: ಕೊಡಗಿನ ವಿಶಿಷ್ಟ ಸಂಸ್ಕೃತಿ ಹಾಗೂ ಪರಂಪರೆಯ…

4 hours ago