ಹೊಸದಿಲ್ಲಿ : ಗಡಿಯಾಚೆಗಿನ ಭಯೋತ್ಪಾದನೆ ವಿರುದ್ಧ ಆಪರೇಷನ್ ಸಿಂಧೂರದ ಮೂಲಕ ಪ್ರತೀಕಾರ ತೀರಿಸಿಕೊಂಡಿರವ ಭಾರತ, ಇದೀಗ ಭಯೋತ್ಪಾದನೆ ನಿರ್ಮೂಲನೆಗೆ ಹೊಸ ಅಸ್ತ್ರ ಪ್ರಯೋಗಿಸಿದೆ. ಭಯೋತ್ಪಾದನಾ ಕೃತ್ಯಕ್ಕೆ ಪೂರ್ಣವಿರಾಮ ಹಾಕಲು ಭಾರತ ಪ್ರಮುಖ ರಾಜತಾಂತ್ರಿಕ ಹೆಜ್ಜೆ ಇಟ್ಟಿದೆ.
ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯನ್ನು ಜಾಗತಿಕ ಮಟ್ಟದಲ್ಲಿ ಎತ್ತಿ ತೋರಿಸಲು ಕೇಂದ್ರ ಸರ್ಕಾರ 7 ಸರ್ವ ಪಕ್ಷ ನಿಯೋಗ ರಚಿಸಿದೆ. ಈ ಬಗ್ಗೆ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮಾಹಿತಿ ನೀಡಿ ಜಾಗತಿಕ ಮಟ್ಟದಲ್ಲಿ ಪಾಕ್ ಉಗ್ರ ಮುಖವಾಡ ಬಯಲು ಮಾಡಲು ಸರ್ವಪಕ್ಷ ನಿಯೋಗ ವಿವಿಧ ದೇಶಗಳಿಗೆ ಭೇಟಿ ನೀಡಲಿದೆ ಎಂದು ತಿಳಿಸಿದ್ದಾರೆ.
ಪ್ರಾದೇಶಿಕ ಬಣಗಳಾಗಿ ವಿಂಗಡಿಸಲಾದ ನಿಯೋಗಗಳು ಮೇ 22 ಅಥವಾ 23ರ ವೇಳೆಗೆ 10 ದಿನಗಳ ಕಾಲ ಪ್ರಯಾಣಿಸಲಿವೆ. ಸಂಸದರ ಜೊತೆ ವಿದೇಶಾಂಗ ಇಲಾಖೆಯ ಅಧಿಕಾರಿಗಳು ಪ್ರಯಾಣಿಸಿ ವಿಶ್ವದ ಮುಂದೆ ಪಾಕ್ನ ಮುಖವಾಡವನ್ನು ಕಳಚಲಿದ್ದಾರೆ.
ಸರ್ವಪಕ್ಷ ಸಂಸದರ ನಿಯೋಗದಲ್ಲಿ ಯಾರಿದ್ದಾರೆ?
ತಂಡ 1 : ಶಶಿ ತರೂರ್, ಕಾಂಗ್ರೆಸ್
ತಂಡ 2 : ರವಿಶಂಕರ್ ಪ್ರಸಾದ್, ಬಿಜೆಪಿ
ತಂಡ 3 : ಸಂಜಯ್ ಕುಮಾರ್ ಝಾ, ಜೆಡಿಯು
ತಂಡ 4 : ಬೈಜಯಂತ್ ಪಾಂಡಾ, ಬಿಜೆಪಿ
ತಂಡ 5 : ಕನಿಮೋಳಿ ಕರುಣಾನಿಧಿ, ಡಿಎಂಕೆ
ತಂಡ 6 : ಸುಪ್ರಿಯಾ ಸುಳೆ, ಎನ್ಸಿಪಿ
ತಂಡ 7 : ಶ್ರೀಕಾಂತ್ ಏಕನಾಥ್ ಶಿಂಧೆ, ಶಿವಸೇನೆ
ರವಿಶಂಕರ್ ಪ್ರಸಾದ್ ನೇತೃತ್ವದ ನಿಯೋಗವು ಸೌದಿ ಅರೇಬಿಯಾ, ಕುವೈತ್, ಬಹರೇನ್ ಮತ್ತು ಅಲ್ಜೀರಿಯಾಕ್ಕೆ ಭೇಟಿ ನೀಡುವ ನಿರೀಕ್ಷೆಯಿದ್ದರೆ, ಸುಪ್ರಿಯಾ ಸುಳೆ ಅವರ ತಂಡ ಓಮನ್, ಕೀನ್ಯಾ, ದಕ್ಷಿಣ ಆಫ್ರಿಕಾ ಮತ್ತು ಈಜಿಪ್ಟ್ಗೆ ಪ್ರಯಾಣಿಸಲಿದೆ.
ಬೆಳಗಾವಿ: ಶಿಕ್ಷಕರ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯ ಸಮಸ್ಯೆ ಇಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಪ್ರಾಥಮಿಕ…
ನವದೆಹಲಿ: ಕುಮಾರಸ್ವಾಮಿ ಮಂಡ್ಯಕ್ಕೆ ಏನು ಕೊಟ್ಟಿದ್ದಾರೆ ಎಂದು ಕೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತೀಕ್ಷ್ಣವಾಗಿ ತಿರುಗೇಟು ಕೊಟ್ಟಿರುವ ಕೇಂದ್ರ ಸಚಿವ…
ಬೆಳಗಾವಿ: ಅನ್ನಭಾಗ್ಯ ಅಕ್ಕಿ ವಿದೇಶಕ್ಕೆ ರಫ್ತಾಗುತ್ತಿದ್ದು, ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ಅಕ್ರಮ ಪತ್ತೆಗೆ ಎಸ್ಐಟಿ ರಚಿಸುವಂತೆ ಎಂಎಲ್ಸಿ ಸಿ.ಟಿ.ರವಿ ಆಗ್ರಹಿಸಿದರು. ಇಂದು…
ನವದೆಹಲಿ: ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದರು. ಈ ಕುರಿತು…
ನವದೆಹಲಿ: ಚುನಾವಣಾ ಅಕ್ರಮ ಆರೋಪ ಸಂಬಂಧ ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂಕೋರ್ಟ್ ನೋಟಿಸ್ ನೀಡಿದೆ. ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ…
ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಇತ್ತೀಚೆಗೆ ನಿಧನರಾದ ಗಣ್ಯರಿಗೆ ಸಂತಾಪ ಸೂಚಿಸಿದರು. ವಿಧಾನಸಭೆಯಲ್ಲಿ ವಂದೇಮಾತರಂ ಗೀತೆ…