ರಾಜ್ಯ

ಪಾಕ್‌ ವಿರುದ್ಧ ರಾಜತಾಂತ್ರಿಕ ಹೆಚ್ಚೆ ಇಟ್ಟ ಭಾರತ : 7 ಸಂಸದರ ನಿಯೋಗ ಶೀಘ್ರದಲ್ಲೇ ವಿದೇಶಕ್ಕೆ..!

ಹೊಸದಿಲ್ಲಿ : ಗಡಿಯಾಚೆಗಿನ ಭಯೋತ್ಪಾದನೆ ವಿರುದ್ಧ ಆಪರೇಷನ್ ಸಿಂಧೂರದ ಮೂಲಕ ಪ್ರತೀಕಾರ ತೀರಿಸಿಕೊಂಡಿರವ ಭಾರತ, ಇದೀಗ ಭಯೋತ್ಪಾದನೆ ನಿರ್ಮೂಲನೆಗೆ ಹೊಸ ಅಸ್ತ್ರ ಪ್ರಯೋಗಿಸಿದೆ. ಭಯೋತ್ಪಾದನಾ ಕೃತ್ಯಕ್ಕೆ ಪೂರ್ಣವಿರಾಮ ಹಾಕಲು ಭಾರತ ಪ್ರಮುಖ ರಾಜತಾಂತ್ರಿಕ ಹೆಜ್ಜೆ ಇಟ್ಟಿದೆ.

ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯನ್ನು ಜಾಗತಿಕ ಮಟ್ಟದಲ್ಲಿ ಎತ್ತಿ ತೋರಿಸಲು ಕೇಂದ್ರ ಸರ್ಕಾರ 7 ಸರ್ವ ಪಕ್ಷ ನಿಯೋಗ ರಚಿಸಿದೆ. ಈ ಬಗ್ಗೆ ಸಂಸದೀಯ ವ್ಯವಹಾರಗಳ ಸಚಿವ ಕಿರಣ್‌ ರಿಜಿಜು ಮಾಹಿತಿ ನೀಡಿ ಜಾಗತಿಕ ಮಟ್ಟದಲ್ಲಿ ಪಾಕ್ ಉಗ್ರ ಮುಖವಾಡ ಬಯಲು ಮಾಡಲು ಸರ್ವಪಕ್ಷ ನಿಯೋಗ ವಿವಿಧ ದೇಶಗಳಿಗೆ ಭೇಟಿ ನೀಡಲಿದೆ ಎಂದು ತಿಳಿಸಿದ್ದಾರೆ.

ಪ್ರಾದೇಶಿಕ ಬಣಗಳಾಗಿ ವಿಂಗಡಿಸಲಾದ ನಿಯೋಗಗಳು ಮೇ 22 ಅಥವಾ 23ರ ವೇಳೆಗೆ 10 ದಿನಗಳ ಕಾಲ ಪ್ರಯಾಣಿಸಲಿವೆ. ಸಂಸದರ ಜೊತೆ ವಿದೇಶಾಂಗ ಇಲಾಖೆಯ ಅಧಿಕಾರಿಗಳು ಪ್ರಯಾಣಿಸಿ ವಿಶ್ವದ ಮುಂದೆ ಪಾಕ್‌ನ ಮುಖವಾಡವನ್ನು ಕಳಚಲಿದ್ದಾರೆ.

ಸರ್ವಪಕ್ಷ ಸಂಸದರ ನಿಯೋಗದಲ್ಲಿ ಯಾರಿದ್ದಾರೆ?
ತಂಡ 1 : ಶಶಿ ತರೂರ್, ಕಾಂಗ್ರೆಸ್
ತಂಡ 2 : ರವಿಶಂಕರ್ ಪ್ರಸಾದ್, ಬಿಜೆಪಿ
ತಂಡ 3 : ಸಂಜಯ್ ಕುಮಾರ್ ಝಾ, ಜೆಡಿಯು
ತಂಡ 4 : ಬೈಜಯಂತ್ ಪಾಂಡಾ, ಬಿಜೆಪಿ
ತಂಡ 5 : ಕನಿಮೋಳಿ ಕರುಣಾನಿಧಿ, ಡಿಎಂಕೆ
ತಂಡ 6 : ಸುಪ್ರಿಯಾ ಸುಳೆ, ಎನ್‌ಸಿಪಿ
ತಂಡ 7 : ಶ್ರೀಕಾಂತ್ ಏಕನಾಥ್ ಶಿಂಧೆ, ಶಿವಸೇನೆ

ರವಿಶಂಕರ್ ಪ್ರಸಾದ್ ನೇತೃತ್ವದ ನಿಯೋಗವು ಸೌದಿ ಅರೇಬಿಯಾ, ಕುವೈತ್, ಬಹರೇನ್‌ ಮತ್ತು ಅಲ್ಜೀರಿಯಾಕ್ಕೆ ಭೇಟಿ ನೀಡುವ ನಿರೀಕ್ಷೆಯಿದ್ದರೆ, ಸುಪ್ರಿಯಾ ಸುಳೆ ಅವರ ತಂಡ ಓಮನ್, ಕೀನ್ಯಾ, ದಕ್ಷಿಣ ಆಫ್ರಿಕಾ ಮತ್ತು ಈಜಿಪ್ಟ್‌ಗೆ ಪ್ರಯಾಣಿಸಲಿದೆ.

ಆಂದೋಲನ ಡೆಸ್ಕ್

Recent Posts

ದಸರಾ ಯಶಸ್ವಿಗೆ 17 ಉಪಸಮಿತಿಗಳ ರಚನೆ

ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…

9 hours ago

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

23 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

23 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

23 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

23 hours ago